ಅಂತಿಮ ಎಸೆತದಲ್ಲಿ ಟೆಸ್ಟ್ ಪಂದ್ಯ ಗೆದ್ದ ಕಿವೀಸ್; ಚಾಂಪಿಯನ್ ಶಿಪ್ ಫೈನಲ್ ಆಸೆ ಬಿಟ್ಟ ಲಂಕಾ
Team Udayavani, Mar 13, 2023, 1:08 PM IST
ಕ್ರೈಸ್ಟ್ ಚರ್ಚ್: ರೋಚಕ ಹಣಾಹಣಿಯಲ್ಲಿ ನ್ಯೂಜಿಲ್ಯಾಂಡ್ ತಂಡವು ಅಂತಿಮ ಎಸೆತದಲ್ಲಿ ಕ್ರೈಸ್ಟ್ ಚರ್ಚ್ ಪಂದ್ಯವನ್ನು ಗೆದ್ದುಕೊಂಡಿದೆ. ಈ ಸೋಲಿನ ಮೂಲಕ ಶ್ರೀಲಂಕಾದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಸೆ ಕಮರಿದ್ದು, ಭಾರತ ತಂಡವು ಫೈನಲ್ ಗೆ ಅರ್ಹತೆ ಪಡೆದಿದೆ.
ಗೆಲುವಿಗೆ 285 ರನ್ ಗುರಿ ಪಡೆದ ಕಿವೀಸ್ ತಂಡಕ್ಕೆ ಕೇನ್ ವಿಲಿಯಮ್ಸನ್ ಶತಕ ಬಾರಿಸಿ ನೆರವಾದರು. ಎಂಟು ವಿಕೆಟ್ ಕಳೆದುಕೊಂಡ ಕಿವೀಸ್ ಅಂತಿಮ ಎಸೆತದಲ್ಲಿ ಪಂದ್ಯ ಗೆದ್ದುಕೊಂಡಿತು.
ಒಂದು ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿದ್ದಲ್ಲಿಂದ ಅಂತಿಮ ದಿನದಾಟ ಆರಂಭಿಸಿದಾಗ ಮಳೆ ಅಡ್ಡಿಯಾಯಿತು. ಮಳೆಯ ಕಾರಣದಿಂದ 37 ಓವರ್ ಗಳ ಪಂದ್ಯ ನಷ್ಟವಾಯಿತು. 53 ಓವರ್ ಗಳಲ್ಲಿ 257 ರನ್ ಗಳಿಸಬೇಕಾದ ಅನಿವಾರ್ಯತೆಗೆ ಸಿಲುಕಿದ ಕಿವೀಸ್ ಗೆ ಕೇನ್ ವಿಲಿಯಮ್ಸನ್ ಮತ್ತು ಡ್ಯಾರೆಲ್ ಮಿಚೆಲ್ ನೆರವಾದರು.
ವಿಲಿಯಮ್ಸನ್ ಅಜೇಯ 121 ರನ್ ಗಳಿಸಿದರೆ, ಮೊದಲ ಇನ್ನಿಂಗ್ಸ್ ನ ಶತಕವೀರ ಮಿಚೆಲ್ 86 ಎಸೆತಗಳಲ್ಲಿ 81 ರನ್ ಮಾಡಿ ನೆರವಾದರು. ಕೊನೆಯ ಮೂರು ಎಸೆತದಲ್ಲಿ ಐದು ರನ್ ಅಗತ್ಯವಿದ್ದಾಗ ವಿಲಿಯಮ್ಸನ್ ಅವರು ಬೌಂಡರಿ ಮತ್ತು ಕೊನೆಯ ಎಸೆತದಲ್ಲಿ ಒಂದು ರನ್ ಕದಿಯುವ ಮೂಲಕ ತಂಡಕ್ಕೆ ಗೆಲುವು ತಂದಿತ್ತರು.
Kane Williamson finishes it for New Zealand – they’re 1-0 in the series.
A Test match to remember! pic.twitter.com/CDl7QtDkKe
— Mufaddal Vohra (@mufaddal_vohra) March 13, 2023
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ತಲುಪಬೇಕಾದರೆ ಶ್ರೀಲಂಕಾ ತಂಡವು ಕಿವೀಸ್ ವಿರುದ್ಧದ ಎರಡೂ ಪಂದ್ಯ ಗೆಲ್ಲಬೇಕಿತ್ತು. ಹೀಗಾಗಿ ಈ ಸೋಲಿನೊಂದಿಗೆ ಲಂಕಾದ ಅಭಿಯಾನ ಅಂತ್ಯಗೊಂಡಿತು. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಫೈನಲ್ ತಲುಪಿದವು.
ಸಂಕ್ಷಿಪ್ತ ಸ್ಕೋರ್
ಶ್ರೀಲಂಕಾ: 355 ಮತ್ತು 302
ನ್ಯೂಜಿಲ್ಯಾಂಡ್: 373 ಮತ್ತು 285/8
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ