ನ್ಯೂಜಿಲ್ಯಾಂಡ್‌ ಟೆಸ್ಟ್‌ ತಂಡ : ಕಾನ್ವೆ ಬದಲು ಡ್ಯಾರಿಲ್‌ ಮಿಚೆಲ್‌


Team Udayavani, Nov 15, 2021, 1:22 AM IST

ನ್ಯೂಜಿಲ್ಯಾಂಡ್‌ ಟೆಸ್ಟ್‌ ತಂಡ : ಕಾನ್ವೆ ಬದಲು ಡ್ಯಾರಿಲ್‌ ಮಿಚೆಲ್‌

ವೆಲ್ಲಿಂಗ್ಟನ್‌ : ಭಾರತದೆದುರಿನ ಟೆಸ್ಟ್‌ ಸರಣಿಗಾಗಿ ನ್ಯೂಜಿಲ್ಯಾಂಡ್‌ ತಂಡದಲ್ಲಿ ಒಂದು ಬದಲಾವಣೆ ಸಂಭವಿಸಿದೆ. ಗಾಯಾಳು ಆಟಗಾರ ಡೇವನ್‌ ಕಾನ್ವೆ ಬದಲು ಬ್ಯಾಟಿಂಗ್‌ ಆಲ್‌ರೌಂಡರ್‌ ಡ್ಯಾರಿಲ್‌ ಮಿಚೆಲ್‌ ಅವರನ್ನು ಸೇರಿಸಿಕೊಳ್ಳಲಾಗಿದೆ.

ಇಂಗ್ಲೆಂಡ್‌ ಎದುರಿನ ಸೆಮಿಫೈನಲ್‌ ಪಂದ್ಯದಲ್ಲಿ ಔಟಾಗಿ ಹೋಗುವಾಗ ಸಿಟ್ಟಿನಿಂದ ಬ್ಯಾಟಿಗೆ ಬಡಿದ ಪರಿಣಾಮ ಕಾನ್ವೆ ಅವರ ಬಲಗೈ ಮೂಳೆಯಲ್ಲಿ ಬಿರುಕು ಮೂಡಿತ್ತು. ಹೀಗಾಗಿ ಅವರು ರವಿವಾರದ ಫೈನಲ್‌ ಹಾಗೂ ಭಾರತದೆದುರಿನ ಟಿ20 ಸರಣಿಯಿಂದಲೂ ಹೊರಗುಳಿಯಬೇಕಾಯಿತು.

ಡ್ಯಾರಿಲ್‌ ಮಿಚೆಲ್‌ ಭಾರತದೆದುರಿನ ಟಿ20 ತಂಡದ ಸದಸ್ಯರಾಗಿದ್ದಾರೆ. ಹೀಗಾಗಿ ಅವರನ್ನೇ ಟೆಸ್ಟ್‌ ತಂಡದಲ್ಲಿ ಮುಂದುವರಿಸಲು ನಿರ್ಧರಿಸಲಾಯಿತು. ಈವರೆಗೆ 5 ಟೆಸ್ಟ್‌ ಆಡಿರುವ ಮಿಚೆಲ್‌ ಒಂದು ಶತಕ, ಒಂದು ಅರ್ಧ ಶತಕ ಸೇರಿದಂತೆ 232 ರನ್‌ ಹೊಡೆದಿದ್ದಾರೆ.

“ಮಿಚೆಲ್‌ ಯಾವುದೇ ಕ್ರಮಾಂಕದಲ್ಲಿ ಬ್ಯಾಟ್‌ ಬೀಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಈಗಂತೂ ತುಂಬು ಆತ್ಮವಿಶ್ವಾಸದಲ್ಲಿದ್ದಾರೆ. ಅವರು ತಮ್ಮ ಟೆಸ್ಟ್‌ ಸಾಮರ್ಥ್ಯವನ್ನು ಮತ್ತೆ ಸಾಬೀತುಪಡಿಸುವುದರಲ್ಲಿ ಅನುಮಾನವಿಲ್ಲ’ ಎಂಬುದಾಗಿ ನ್ಯೂಜಿಲ್ಯಾಂಡ್‌ ತಂಡದ ಕೋಚ್‌ ಗ್ಯಾರಿ ಸ್ಟೆಡ್‌ ಹೇಳಿದ್ದಾರೆ.

ನ. 17ರಿಂದ 3 ಪಂದ್ಯಗಳ ಟಿ20 ಸರಣಿಯನ್ನಾಡಲಿರುವ ನ್ಯೂಜಿಲ್ಯಾಂಡ್‌, ಬಳಿಕ ನ. 25ರಿಂದ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳಲಿದೆ.

ಕಿವೀಸ್‌ ಅಭ್ಯಾಸ ಆರಂಭ
ಭಾರತಕ್ಕೆ ಆಗಮಿಸಿದ ನ್ಯೂಜಿಲ್ಯಾಂಡಿನ ಕೆಲವು ಕ್ರಿಕೆಟಿಗರು ಜೈಪುರದಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಇವರೆಲ್ಲ ಟೆಸ್ಟ್‌ ತಂಡದ ಸದಸ್ಯರೆಂಬುದು ಉಲ್ಲೇಖನೀಯ. ರಾಸ್‌ ಟೇಲರ್‌, ಟಾಮ್‌ ಲ್ಯಾಥಂ, ನೀಲ್‌ ವ್ಯಾಗ್ನರ್‌, ವಿಲ್‌ ಸೋಮರ್‌ವಿಲ್ಲೆ, ಅಜಾಜ್‌ ಪಟೇಲ್‌, ರಚಿನ್‌ ರವೀಂದ್ರ, ಹೆನ್ರಿ ನಿಕೋಲ್ಸ್‌, ಟಾಮ್‌ ಬ್ಲಿಂಡೆಲ್‌ ಮತ್ತು ವಿಲಿಯಂ ಯಂಗ್‌ ಅಭ್ಯಾಸ ನಡೆಸಿದರು.

ಭಾರತ ತಂಡ ಆಗಮನ
ಇದೇ ವೇಳೆ ಭಾರತದ ಟಿ20 ತಂಡ ಕೂಡ ಜೈಪುರಕ್ಕೆ ಆಗಮಿಸಿದೆ. ಎಲ್ಲರೂ ಕ್ವಾರಂಟೈನ್‌ನಲ್ಲಿದ್ದಾರೆ.
ಆದರೆ ತಂಡದ ನೂತನ ಸಹಾಯಕ ಸಿಬಂದಿ ಯಾರೆಂಬುದನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. ಮೂಲಗಳ ಪ್ರಕಾರ ವಿಕ್ರಮ್‌ ರಾಠೊಡ್‌ ಮತ್ತೆ ಬ್ಯಾಟಿಂಗ್‌ ಕೋಚ್‌ ಆಗಿ ಮುಂದುವರಿಯುವುದು ಬಹುತೇಕ ಖಚಿತ. ಟಿ. ದಿಲೀಪ್‌ ಮತ್ತು ಪರಸ್‌ ಮ್ಹಾಂಬ್ರೆ ಕ್ರಮವಾಗಿ ಫೀಲ್ಡಿಂಗ್‌ ಹಾಗೂ ಬೌಲಿಂಗ್‌ ಕೋಚ್‌ ಆಗುವ ಸಾಧ್ಯತೆ ಇದೆ.

ಮುಂಬಯಿ ಟೆಸ್ಟ್‌ಗೆ ಸ್ಟೇಡಿಯಂ ಫ‌ುಲ್‌
ಮುಂಬಯಿ: ಪ್ರವಾಸಿ ನ್ಯೂಜಿಲ್ಯಾಂಡ್‌ ಎದುರಿನ ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. ನೂರರಷ್ಟು ವೀಕ್ಷಕರಿಗೆ ಪ್ರವೇಶ ಲಭಿಸಲಿದೆ. ರಾಜ್ಯ ಸರಕಾರದ ಅನುಮತಿ ಮೇರೆಗೆ ಮಹಾರಾಷ್ಟ್ರ ಕ್ರಿಕೆಟ್‌ ಮಂಡಳಿ (ಎಂಸಿಎ) ಈ ನಿರ್ಧಾರಕ್ಕೆ ಬಂದಿದೆ.

“ಮಹಾರಾಷ್ಟ್ರ ಸರಕಾರ ವಾಂಖೇಡೆ ಟೆಸ್ಟ್‌ ಪಂದ್ಯಕ್ಕೆ ನೂರು ಪ್ರತಿಶತ ವೀಕ್ಷಕರ ಪ್ರವೇಶಕ್ಕೆ ಅನುಮತಿ ನೀಡಿದೆ. ಹಾಗೆಯೇ ಸೋಮವಾರದಿಂದಲೇ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಸಿದ್ಧತಾ ಶಿಬಿರವನ್ನು ಆಯೋಜಿಸಲಿದ್ದೇವೆ’ ಎಂದು ಎಂಸಿಎ ಮೂಲಗಳು ಹೇಳಿವೆ.
ಡಿ. 3ರಂದು ಆರಂಭವಾಗಲಿರುವ ಈ ಟೆಸ್ಟ್‌ ಪಂದ್ಯಕ್ಕೆ ಪೂರ್ಣ ಪ್ರಮಾಣದಲ್ಲಿ ವೀಕ್ಷಕರ ಪ್ರವೇಶಕ್ಕೆ ಅನುಮತಿ ನೀಡಬೇಕೆಂದು ಕೋರಿ ಎಂಸಿಎ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತ್ತು.

ಟಾಪ್ ನ್ಯೂಸ್

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.