ಶ್ರೀಲಂಕಾ ಕ್ರಿಕೆಟ್ ಮಂಡಳಿಯಿಂದ ಚಂಡಿಮಲ್ಗೆ ಶಿಕ್ಷೆಯಿಲ್ಲ
Team Udayavani, Jul 1, 2018, 6:15 AM IST
ಕೊಲಂಬೊ: ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಕಾರಣಕ್ಕಾಗಿ ಒಂದು ಟೆಸ್ಟ್ ಪಂದ್ಯದಿಂದ ನಿಷೇಧಕ್ಕೊಳಗಾಗಿದ್ದ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ದಿನೇಶ್ ಚಂಡಿಮಲ್ ವಿರುದ್ಧ ಹೆಚ್ಚಿನ
ಕ್ರಮ ಕೈಗೊಳ್ಳುವುದಿಲ್ಲ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಉಸ್ತುವಾರಿ ಹೊಂದಿರುವ ಕ್ರೀಡಾ ಸಚಿವ ಫ್ರೈಸರ್ ಮುಸ್ತಾ ಪಹ ತಿಳಿಸಿದ್ದಾರೆ.
ಚಂಡಿಮಲ್ ವಿರುದ್ಧ ಆರೋಪ ಕೇಳಿ ಬರುತ್ತಲೇ ಲಂಕಾ ಆಟಗಾರರು ವಿಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟಕ್ಕೂ ಮುನ್ನ ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ,ಪಂದ್ಯವು 2 ಗಂಟೆ ತಡವಾಗಿ ಆರಂಭವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಐಸಿಸಿ,ಚಂಡಿಮಲ್, ತಂಡದ ಮುಖ್ಯ ತರಬೇತುದಾರ ಚಂದ್ರಿಕಾ ಹತುರ ಸಿಂಘ ಹಾಗೂ ತಂಡದ ವ್ಯವಸ್ಥಾಪಕ ಗುರುಸಿನ್ಹಾ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಪ್ರತಿ ಕ್ರಿಯಿಸಿರುವ ಸಚಿವರು,”ದಿನದಾಟಕ್ಕೆ ಅಡ್ಡಿಪಡಿಸಿದ್ದು ತಪ್ಪು. ಆದರೆ, ತಪ್ಪಿತಸ್ಥರಿಗೆ ಈಗಾಗಲೇ ಶಿಕ್ಷೆಯಾಗಿದೆ. ಆಗಾಗಿ, ಮತ್ತಷ್ಟು ಶಿಕ್ಷೆ ನೀಡುವ ಇರಾದೆ ಇಲ್ಲ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್