ಇಂಗ್ಲೆಂಡ್-ಐರ್ಲೆಂಡ್ ವಿರುದ್ಧದ ಸರಣಿಗೆ ವಿಂಡೀಸ್ ತಂಡ ಪ್ರಕಟ: ಸ್ಥಾನ ಪಡೆಯದ ಗೇಲ್
Team Udayavani, Jan 1, 2022, 4:01 PM IST
ಕಿಂಗ್ಸ್ಟನ್: ಮುಂಬರುವ ಇಂಗ್ಲೆಂಡ್ ಮತ್ತು ಐರ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡ ಪ್ರಕಟಿಸಲಾಗಿದೆ. ವಿಂಡೀಸ್ ಕ್ರಿಕೆಟ್ ದಿಗ್ಗಜ ಕ್ರಿಸ್ ಗೇಲ್ ಅವರಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿಲ್ಲ.
ತನ್ನ ಕೊನೆಯ ಪಂದ್ಯವನ್ನು ತನ್ನ ತವರು ನೆಲದಲ್ಲಿ (ಜಮೈಕಾ) ಆಡಲು ಕ್ರಿಸ್ ಗೇಲ್ ಬಯಸಿದ್ದರು. ಹೀಗಾಗಿ ಅವರು ಈ ಎರಡು ಸರಣಿಯಲ್ಲಿ ಸ್ಥಾನ ಪಡೆಯಲು ಬಯಸಿದ್ದರು. ಆದರೆ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಗೇಲ್ ಗೆ ಸ್ಥಾನ ನೀಡಿಲ್ಲ.
“ಕ್ರಿಸ್ ಗೇಲ್ ಅವರು ಆರಂಭದಿಂದಲೂ ಜಮೈಕಾ ಮತ್ತು ವೆಸ್ಟ್ ಇಂಡೀಸ್ ಗೆ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರು ಅಭಿಮಾನಿಗಳ ಮಧ್ಯೆ ಗೌರವಯುತ ವಿದಾಯ ಪಡೆಯಲು ಅರ್ಹರಾಗಿದ್ದಾರೆ. ಕ್ರಿಸ್ ಗೇಲ್ ಆನಂದಿಸಬಹುದಾದ ರೀತಿಯಲ್ಲಿ ಮಾಡಲು ಕ್ರಿಕೆಟ್ ವೆಸ್ಟ್ ಇಂಡೀಸ್ ಸರಿಯಾದ ಯೋಜನೆ ಮಾಡಲಿದೆ” ಎಂದು ಕ್ರಿಕೆಟ್ ವೆಸ್ಟ್ ಇಂಡೀಸ್ ಮುಖ್ಯಸ್ಥ ರಿಕ್ಕಿ ಸ್ಕೆರಿಟ್ ಹೇಳಿದ್ದಾರೆ.
ಇದನ್ನೂ ಓದಿ:ಈ ಆಟಗಾರ ಟೀಂ ಇಂಡಿಯಾದಲ್ಲಿ ‘ಅದ್ಭುತ’ ಸೃಷ್ಟಿಸಲಿದ್ದಾನೆ: ಚೇತನ್ ಶರ್ಮಾ
ವೆಸ್ಟ್ ಇಂಡೀಸ್ ತಂಡವು ಐರ್ಲೆಂಡ್ ವಿರುದ್ಧ ಮೂರು ಏಕದಿನ ಮತ್ತು ಒಂದು ಟಿ20 ಪಂದ್ಯವನ್ನಾಡಿದರೆ, ಇಂಗ್ಲೆಂಡ್ ವಿರುದ್ಧ ಐದು ಟಿ20 ಪಂದ್ಯಗಳನ್ನಾಡಲಿದೆ. ಕೈರನ್ ಪೊಲಾರ್ಡ್ ತಂಡಕ್ಕೆ ಮರಳಿದ್ದು, ತಂಡವನ್ನು ಮುನ್ನಡೆಸಲಿದ್ದಾರೆ.
ಐರ್ಲೆಂಡ್ ವಿರುದ್ಧ ಏಕದಿನ ತಂಡ: ಕೈರನ್ ಪೊಲಾರ್ಡ್ (ನಾಯಕ), ಶೈ ಹೋಪ್ (ಉಪನಾಯಕ), ಶಮರ್ ಬ್ರೂಕ್ಸ್, ರೋಸ್ಟನ್ ಚೇಸ್, ಜಸ್ಟಿನ್ ಗ್ರೀವ್ಸ್, ಜೇಸನ್ ಹೋಲ್ಡರ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್, ನಿಕೋಲಸ್ ಪೂರನ್, ಒಡೆಯನ್ ಶೆಫರ್ಡ್, ಒಡೆಯನ್ ಶೆಫರ್ಡ್ ಸ್ಮಿತ್, ಡೆವೊನ್ ಥಾಮಸ್. ಮೀಸಲು: ಕೀಸಿ ಕಾರ್ಟಿ, ಶೆಲ್ಡನ್ ಕಾಟ್ರೆಲ್.
ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಟಿ20 ತಂಡ: ಕೈರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್ (ಇಂಗ್ಲೆಂಡ್ ಟಿ20 ಮಾತ್ರ), ಡ್ಯಾರೆನ್ ಬ್ರಾವೊ (ಇಂಗ್ಲೆಂಡ್ ಟಿ20 ಮಾತ್ರ), ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಶೈ ಹೋಪ್, ಅಕೆಲ್ ಹೋಸ್ , ಜೇಸನ್ ಹೋಲ್ಡರ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಓಡಿಯನ್ ಸ್ಮಿತ್, ಹೇಡನ್ ವಾಲ್ಷ್ ಜೂನಿಯರ್. ಮೀಸಲು: ಜೇಡನ್ ಸೀಲ್ಸ್, ಅಲ್ಜಾರಿ ಜೋಸೆಫ್ ಮತ್ತು ಡೆವೊನ್ ಥಾಮಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ
KKR ತಂಡಕ್ಕೆ ಮರಳಲಿರುವ ಅಫ್ಘಾನ್ ಬ್ಯಾಟರ್ ರಹ್ಮಾನುಲ್ಲ ಗುರ್ಬಾಝ್
G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?
Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ
D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ