ನಾಯಕತ್ವ ಬಿಡುವ ಪ್ರಶ್ನೆಯೇ ಇಲ್ಲ: ತರಂಗ
Team Udayavani, Sep 5, 2017, 7:20 AM IST
ಕೊಲಂಬೊ: ಭಾರತದೆದುರು ಏಕದಿನ ಸರಣಿಯಲ್ಲಿ ಅನುಭವಿಸಿದ 5-0 ಸರಣಿ ಸೋಲಿನ ಬಳಿಕ ಮಾಧ್ಯಮಗಳ ಜತೆ ಮಾತಾಡಿದ ಶ್ರೀಲಂಕಾ ತಂಡದ ನಾಯಕ ಉಪುಲ್ ತರಂಗ, ನಾಯಕತ್ವ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
“ನಾಯಕತ್ವ ಬಿಡಲು ಕಾರಣಗಳೇ ಇಲ್ಲ. ತಂಡ ಹೇಗೆ ಮುಂದುವರಿಯಬೇಕು ಎಂಬ ಬಗ್ಗೆ ಮುಂದಿನ ಆಯ್ಕೆ ಸಮಿತಿ ಸೂಕ್ತ ನಿರ್ಣಯವೊಂದನ್ನು ತೆಗೆದುಕೊಳ್ಳಲಿದೆ. ನಾವು ಚೆನ್ನಾಗಿ ಆಡಲಿಲ್ಲ. ಕಳೆದ 2 ವರ್ಷಗಳಿಂದಲೂ ಕಳಪೆ ಪ್ರದರ್ಶನವೇ ಪುನರಾವರ್ತನೆಯಾಗುತ್ತಿದೆ. ಆಟಗಾರರು ಮೊದಲು ಸೋಲಿನ ಮನಸ್ಥಿತಿಯಿಂದ ಹೊರಬೇಕಿದೆ. ಹೇಗೆ ಚೆನ್ನಾಗಿ ಆಡಬಹುದು, ಯಾವ ವಿಭಾಗದಲ್ಲೆಲ್ಲ ಎಡವಿದ್ದೇವೆ ಎಂಬುದನ್ನು ಅವಲೋಕಿಸಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ…’ ಎಂದು ತರಂಗ ಅಭಿಪ್ರಾಯಪಟ್ಟರು.
“ಸ್ಥಿರ ಪ್ರದರ್ಶನ ನೀಡುವಲ್ಲಿ ನಾವು ವಿಫಲರಾಗಿದ್ದೇವೆ. ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್… ಮೂರೂ ಕಳಪೆಯಾಗಿದೆ. ಈ ಸರಣಿಯಲ್ಲಂತೂ ನಮ್ಮದು ತೀರಾ ಕೆಳಮಟ್ಟದ ಪ್ರದರ್ಶನವಾಗಿತ್ತು. ನಮ್ಮ ಬ್ಯಾಟಿಂಗ್ ಸ್ಥಿತಿಯನ್ನು ನೋಡಿ ಬಹಳ ಬೇಸರವಾಗಿದೆ. ಭಾರತ ಸರಣಿಯುದ್ದಕ್ಕೂ ಸ್ಥಿರವಾದ ಆಟವಾಡಿತು. ಅವರ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ಬಹಳಷ್ಟು ರನ್ ಪೇರಿಸಿದರು. ನಾವು ದೊಡ್ಡ ಮೊತ್ತ ದಾಖಲಿಸುವಲ್ಲಿ ಸಂಪೂರ್ಣವಾಗಿ ವಿಫಲರಾದೆವು. ಒಮ್ಮೆಯೂ 250ರ ಗಡಿ ದಾಟಲಿಲ್ಲ…’ ಎಂದು ವಿಷಾದಿಸಿದರು.
“ವಿರಾಟ್ ಕೊಹ್ಲಿ ಓರ್ವ ಆನುಭವಿ ಆಟಗಾರ. ಅವರಿಂದ ನಾವು ಸಾಕಷ್ಟು ಕಲಿಯಬೇಕಿದೆ. ಕೊಹ್ಲಿಯ ಬ್ಯಾಟಿಂಗ್ ನಮ್ಮವರಿಗೊಂದು ಪಾಠ…’ ಎಂದೂ ತರಂಗ ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ