![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Retirement ಸದ್ಯಕ್ಕಿಲ್ಲ, ಇನ್ನೂ ಹಲವು ವರ್ಷ ಆಡುತ್ತೇನೆ: ರೋಹಿತ್ ಶರ್ಮ
Team Udayavani, Apr 13, 2024, 6:19 AM IST
![Rohit SHarma (2)](https://www.udayavani.com/wp-content/uploads/2024/04/Rohit-SHarma-2-620x364.jpg)
ಮುಂಬಯಿ: ನಾನು ಉತ್ತಮವಾಗಿ ಕ್ರಿಕೆಟ್ ಆಡುತ್ತಿದ್ದೇನೆ. ಇನ್ನೂ ಹಲವು ವರ್ಷಗಳ ಕಾಲ ಕ್ರಿಕೆಟ್ ಆಡುವುದನ್ನು ಮುಂದುವರಿಸುತ್ತೇನೆ. ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಡುವುದು ನನ್ನ ಬಯಕೆಯಾಗಿದೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ಹೇಳಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ನಾಯಕನ ಸ್ಥಾನ ಕಳೆದುಕೊಂಡ ಬಳಿಕ ರೋಹಿತ್ ನಿವೃತ್ತಿ ಘೋಷಿಸಲಿದ್ದಾರೆ ಎಂಬ ವದಂತಿಗಳಿಗೆ ಈ ಮೂಲಕ ತೆರೆ ಎಳೆದಿದ್ದಾರೆ. “ಬ್ರೇಕ್ಫಾಸ್ಟ್ ವಿಥ್ ಚಾಂಪಿಯನ್ಸ್’ ಎಂಬ ಟಿವಿ ಶೋದಲ್ಲಿ ಮಾತನಾಡಿದ ಅವರು, “ನಾನು ನಿಜವಾಗಿಯೂ ನಿವೃತ್ತಿಯ ಬಗ್ಗೆ ಯೋಚನೆ ಮಾಡಿಲ್ಲ. ಪ್ರಸ್ತುತ ನಾನು ಉತ್ತಮ ಕ್ರಿಕೆಟ್ ಆಡುತ್ತಿದ್ದೇನೆ. ಹೀಗಾಗಿ ಇನ್ನೂ ಹಲವು ವರ್ಷಗಳ ಕಾಲ ಕ್ರಿಕೆಟ್ ಆಡುತ್ತೇನೆ. ಆ ಬಳಿಕ ಏನೆಂಬುದು ಗೊತ್ತಿಲ್ಲ. ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಡುವ ಬಯಕೆ ನನಗಿದೆ. 2025ರಲ್ಲಿ ಟೆಸ್ಟ್ ವಿಶ್ವಚಾಂಪಿಯನ್ಶಿಪ್ ಸಹ ಬರುತ್ತಿದೆ. ಭಾರತ ಇದನ್ನು ಗೆಲ್ಲಲಿದೆ ಎಂದು ರೋಹಿತ್ ಹೇಳಿದ್ದಾರೆ.
ಮುಂಬೈ ಇಂಡಿಯನ್ಸ್ ನಾಯಕಕತ್ವದಿಂದ ರೋಹಿತ್ ಶರ್ಮ ಅವರನ್ನು ಕೆಳಗಿಳಿಸಿದ ಬಳಿಕ ಅವರು ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಳ್ಳಲಿದ್ದಾರೆ ಎಂದು ವದಂತಿಗಳು ಹೆಚ್ಚಾಗಿದ್ದವು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.