ಕ್ರಿಕೆಟಿಗ ಮುರಳಿ ವಿಜಯ್ಗೆ ಕೊರೊನಾ ಲಸಿಕೆಯ ಭೀತಿ!
Team Udayavani, Nov 14, 2021, 6:40 AM IST
ಚೆನ್ನೈ: ಭಾರತ ಟೆಸ್ಟ್ ತಂಡದ ಮಾಜಿ ಆರಂಭಿಕ ಆಟಗಾರ ಮುರಳಿ ವಿಜಯ್ ವಿಶೇಷ ಕಾರಣಕ್ಕೆ ಚರ್ಚೆಗೆ ಗ್ರಾಸವಾಗಿದ್ದಾರೆ.
ಅವರಿನ್ನೂ ಕೊರೊನಾ ಲಸಿಕೆ ಹಾಕಿಸಿಕೊಂಡಿಲ್ಲ. ಕಾರಣ, ಹೆದರಿಕೆ! ಹೀಗಾಗಿ ಸಯ್ಯದ್ ಮುಷ್ತಾಕ್ ಅಲಿ ಟಿ20 ಕೂಟದಲ್ಲಿ ಸ್ಥಾನ ಪಡೆದಿಲ್ಲ ಎಂದು ತಿಳಿದು ಬಂದಿದೆ.
ಬಿಸಿಸಿಐ ನಿಯಮ ಪ್ರಕಾರ ದೇಶಿ ಕ್ರಿಕೆಟ್ನಲ್ಲಿ ಆಡುವವರು ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯ. ಆಗ ಮಾತ್ರ ಜೈವಿಕ ಸುರಕ್ಷಾ ವಲಯ ಪ್ರವೇಶಿಸಬಹುದು. ಆದರೆ ಮುರಳಿ ವಿಜಯ್ ಲಸಿಕೆ ಹಾಕಿಸಿಕೊಂಡಿಲ್ಲ.
ಇನ್ನೊಂದು ಸಂಗತಿಯೆಂದರೆ, ಅವರಿಗೆ ಈ ಜೈವಿಕ ಸುರಕ್ಷಾ ವಲಯವೂ ಇಷ್ಟವಿಲ್ಲವಂತೆ. ಕ್ರಿಕೆಟಿಗರು ಕೂಟದ ಆರಂಭಕ್ಕೂ ಒಂದು ವಾರ ಮೊದಲೇ ಜೈವಿಕ ಸುರಕ್ಷಾ ವಲಯ ಪ್ರವೇಶಿಸಬೇಕು. ಹಾಗೆಯೇ ಕೊನೆಯವರೆಗೂ ಅಲ್ಲಿಯೇ ಇರಬೇಕು. ಇದನ್ನು ಮುರಳಿ ವಿಜಯ್ ವಿರೋಧಿಸಿದ್ದಾರೆ. ಹಾಗಾಗಿ ಅವರನ್ನು ತಮಿಳುನಾಡು ಕ್ರಿಕೆಟ್ ಮಂಡಳಿ ಸಯ್ಯದ್ ಮುಷ್ತಾಕ್ ಅಲಿ ತಂಡದಿಂದ ಕೈಬಿಟ್ಟಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ