ಭಾರತಕ್ಕೆ ವಾಪಸಾಗಲು ಸೂಚನೆ

ಕ್ರಿಕೆಟ್‌ ಮ್ಯಾನೇಜರ್‌ ದುರ್ವರ್ತನೆ

Team Udayavani, Aug 15, 2019, 5:52 AM IST

sunil

ಹೊಸದಿಲ್ಲಿ: ಕೆರಿಬಿಯನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳೊಂದಿಗೆ ದುರ್ವರ್ತನೆ ತೋರಿದ ಭಾರತ ಕ್ರಿಕೆಟ್‌ ತಂಡದ ಮ್ಯಾನೇಜರ್‌ (ಆಡಳಿತಾತ್ಮಕ ಪ್ರಬಂಧಕ) ಸುನೀಲ್‌ ಸುಬ್ರಹ್ಮಣ್ಯಂ ಅವರನ್ನು ಬಿಸಿಸಿಐ ಕೂಡಲೇ ವಾಪಸಾಗಲು ಸೂಚಿಸಿದೆ. ಕ್ರಿಕೆಟ್‌ ಅಧಿಕಾರಿಯೊಬ್ಬರನ್ನು ಹೀಗೆ ಅರ್ಧದಲ್ಲಿ ವಾಪಸು ಕರೆಸಿಕೊಳ್ಳುತ್ತಿರುವುದು ದೇಶದ ಕ್ರಿಕೆಟ್‌ ಇತಿಹಾಸದಲ್ಲಿ ಇದೇ ಮೊದಲು.

ನನಗೆ ಕಿರಿಕಿರಿ ಮಾಡಬೇಡಿ!
ಜಲ ಸಂರಕ್ಷಣೆಯ ಸಂದೇಶ ಸಾರುವ ವೀಡಿಯೊ ಶೂಟಿಂಗ್‌ಗಾಗಿ ಆಟಗಾರರನ್ನು ಒದಗಿಸಬೇಕೆಂಬ ವಿನಂತಿಯೊಂದಿಗೆ ರಾಯಭಾರ ಕಚೇರಿ ಅಧಿಕಾರಿಗಳು ಸುನೀಲ್‌ ಸುಬ್ರಹ್ಮಣ್ಯಂ ಅವರನ್ನು ಸಂಪರ್ಕಿಸಿದ್ದರು. ಗಯಾನದ ಭಾರತೀಯ ಹೈಕಮಿಶನ್‌ನ ಹಿರಿಯ ಅಧಿಕಾರಿಯೊ ಬ್ಬರು ಸಹಕಾರ ಕೋರಿದಾಗ, ಸಂದೇಶ ಗಳನ್ನು ಕಳುಹಿಸಿ ನನಗೆ ಕಿರಿಕಿರಿ ಮಾಡ ಬೇಡಿ ಎಂದು ಸುಬ್ರಹ್ಮಣ್ಯಂ ಒರಟಾಗಿ ಉತ್ತರಿಸಿದ್ದರು.
ಅಧಿಕಾರಿಗಳು ಸರಕಾರದ ನಿರ್ದೇಶನದ ಮೇರೆಗೆ ಜಲ ಸಂರಕ್ಷಣೆಯ ವೀಡಿಯೊ ರೆಕಾರ್ಡಿಂಗ್‌ ಮಾಡಲು ಬಯಸಿದ್ದರು. ಆದರೆ ಸುಬ್ರಹ್ಮಣ್ಯಂ ಅವರ ಫೋನ್‌ ಕರೆಗಳಿಗೂ ಉತ್ತರಿಸದೆ ಅವಮಾನಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಸಿಸಿಐ ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ.

ಸುಬ್ರಹ್ಮಣ್ಯಂ ಕ್ಷಮೆ
ತನ್ನಿಂದಾಗಿರುವ ಪ್ರಮಾದಕ್ಕೆ ಸುನೀಲ್‌ ಸುಬ್ರಹ್ಮಣ್ಯಂ ಕ್ಷಮೆ ಯಾಚಿಸಿದ್ದಾರೆ. “ಸರಿಯಾಗಿ ನಿದ್ದೆಯಿಲ್ಲದ ಕಾರಣ ಮಾನಸಿಕ ಒತ್ತಡದಲ್ಲಿ ನಾನು ಈ ರೀತಿ ವರ್ತಿಸಿರಬಹುದು. ಇದಕ್ಕಾಗಿ ಬೇಷರತ್‌ ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ. ಆದರೆ ಪ್ರಕರಣ ಈಗಾಗಲೇ ಸರಕಾರದ ಉನ್ನತ ಹಂತಕ್ಕೆ ತಲುಪಿದ್ದು, ನಾವೇನೂ ಮಾಡುವಂತಿಲ್ಲ ಎಂದು ಬಿಸಿಸಿಐ ಕೈಕೊಡವಿಕೊಂಡಿದೆ.

ಹುದ್ದೆಗೆ ಸಂಚಕಾರ
ಈ ವಿದ್ಯಮಾನದ ಹೊರತಾಗಿಯೂ ಭಾರತ ತಂಡ ವೀಡಿಯೊ ಶೂಟಿಂಗ್‌ನಲ್ಲಿ ಭಾಗವಹಿಸಿದೆ. ಇದನ್ನು ಸುಬ್ರಹ್ಮಣ್ಯಂ ವೀಕ್ಷಿಸುವ ಅಗತ್ಯವಿದ್ದು, ಇದಾದ ಕೂಡಲೇ ವಾಪಸಾಗಲು ಅವರಿಗೆ ಬಿಸಿಸಿಐ ಸೂಚಿಸಿದೆ. ಈ ಘಟನೆಯಿಂದಾಗಿ ಸುಬ್ರಹ್ಮಣ್ಯಂ ತನ್ನ ಹುದ್ದೆಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.