ಚಾಂಪಿಯನ್‌ ಜೊಕೋವಿಕ್‌ ಗೈರಲ್ಲಿ ಕತಾರ್‌ ಓಪನ್‌ ಟೆನಿಸ್‌ ಕ್ಷಣಗಣನೆ


Team Udayavani, Jan 1, 2018, 6:15 AM IST

Novak-Djokovic.jpg

ದೋಹಾ: ಕಳೆದೆರಡು ಬಾರಿಯ ಚಾಂಪಿಯನ್‌ ನೊವಾಕ್‌ ಜೊಕೋವಿಕ್‌ ಗೈರಲ್ಲಿ ಕತಾರ್‌ ಓಪನ್‌ ಟೆನಿಸ್‌ ಪಂದ್ಯಾವಳಿ ಸೋಮವಾರದಿಂದ ದೋಹಾದಲ್ಲಿ ಆರಂಭವಾಗಲಿದೆ. ಮಣಿಗಂಟಿನ ನೋವಿನಿಂದ ಅವರು ಈ ಕೂಟದಿಂದ ಹಿಂದೆ ಸರಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದರಿಂದ ವರ್ಷಾರಂಭದ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿಯಲ್ಲೂ ಜೊಕೋ ಪಾಲ್ಗೊಳ್ಳುವುದು ಅನುಮಾನವೆನಿಸಿದೆ.

ಕಳೆದ ಸಲದ ಥ್ರಿಲ್ಲಿಂಗ್‌ ಫೈನಲ್‌ನಲ್ಲಿ ನಂಬರ್‌ ವನ್‌ ಆಟಗಾರನಾಗಿದ್ದ ಜೊಕೋವಿಕ್‌ ಬ್ರಿಟನ್ನಿನ ಆ್ಯಂಡಿ ಮರ್ರೆ ಅವರನ್ನು ಸೋಲಿಸಿ ಚಾಂಪಿಯನ್‌ ಆಗಿದ್ದರು. ಇದರ ಹಿಂದಿನ ವರ್ಷ ರಫೆಲ್‌ ನಡಾಲ್‌ ಅವರನ್ನು ಮಣಿಸಿದ್ದರು. ಬಳಿಕ 6ನೇ ಬಾರಿಗೆ ಆಸ್ಟ್ರೇಲಿಯನ್‌ ಓಪನ್‌ ಪ್ರಶಸ್ತಿಯನ್ನೂ ಎತ್ತಿದ್ದರು.

ಥೀಮ್‌ಗೆ ಅಗ್ರ ಶ್ರೇಯಾಂಕ
ಜೊಕೋವಿಕ್‌ ಹಿಂದೆ ಸರಿದುದರಿಂದ ಅವರ ನಂಬರ್‌ ವನ್‌ ಶ್ರೇಯಾಂಕವನ್ನು ವಿಶ್ವದ ನಂ.5 ಟೆನಿಸಿಗ ಆಸ್ಟ್ರಿಯಾದ ಡೊಮಿನಿಕ್‌ ಥೀಮ್‌ ಅವರಿಗೆ ಲಭಿಸಿದೆ. ಆದರೆ ಶುಕ್ರವಾರವಷ್ಟೇ ಮುಗಿದ “ಮುಬಾದಲ ವರ್ಲ್ಡ್ ಟೆನಿಸ್‌ ಚಾಂಪಿಯನ್‌ಶಿಪ್‌’ ಫೈನಲ್‌ನಲ್ಲಿ ಅವರು ಕೆವಿನ್‌ ಆ್ಯಂಡರ್ಸನ್‌ಗೆ ಶರಣಾಗಿದ್ದರು. ಮೊದಲ ಸುತ್ತಿನ ಪಂದ್ಯದಲ್ಲಿ ಥೀಮ್‌ ರಶ್ಯದ ಎವೆYನಿ ಡಾನ್‌ಸ್ಕಾಯ್‌ ವಿರುದ್ಧ ಆಡಲಿದ್ದಾರೆ.

ನಂ.2 ಶ್ರೇಯಾಂಕಿತ ಪಾಬ್ಲೊ ಕರೆನೊ ಬುಸ್ಟ ಕ್ರೊವೇಶಿಯಾದ ಬೋರ್ನ ಕೊರಿಕ್‌ ವಿರುದ್ಧ ಸೆಣಸುವರು. ಜೆಕೋಸ್ಲೊವಾಕಿಯಾದ 32ರ ಹರೆಯದ ಹಿರಿಯ ಆಟಗಾರ ಥಾಮಸ್‌ ಬೆರ್ಡಿಶ್‌, ಸ್ಪೇನಿನ ಆಲ್ಬರ್ಟ್‌ ರಮೋಸ್‌ ವಿನೋಲಸ್‌, ಸ್ಪೇನಿನ ಫೆರ್ನಾಂಡೊ ವೆರ್ದಸ್ಕೊ, ಫ್ರಾನ್ಸ್‌ನ ಗೇಲ್‌ ಮಾನ್‌ಫಿಲ್ಸ್‌ ಕತಾರ್‌ ಓಪನ್‌ನಲ್ಲಿ ಆಡುವ ಪ್ರಮುಖ ಆಟಗಾರರು. ಬೆರ್ಡಿಶ್‌ ಕಳೆದೆರಡೂ ವರ್ಷ ಸೆಮಿಫೈನಲ್‌ನಲ್ಲಿ ಎಡವಿದ್ದರು. ವೆರ್ದಸ್ಕೊ ಕೂಡ ಕಳೆದ ವರ್ಷ ಸೆಮಿಫೈನಲ್‌ ತನಕ ಸಾಗಿಬಂದಿದ್ದು, ಅಲ್ಲಿ ಜೊಕೋವಿಕ್‌ಗೆ ಶರಣಾಗಿದ್ದರು. ಆ್ಯಂಡಿ ಮರ್ರೆ, ರಫೆಲ್‌ ನಡಾಲ್‌ ಕೂಡ ಗಾಯಾಳಾಗಿ ಹಿಂದೆ ಸರಿದಿರುವುದರಿಂದ ದೋಹಾದಲ್ಲಿ ಯುವ ಆಟಗಾರರಿಗೆ ಮಿಂಚುವ ಅವಕಾಶವೊಂದು ಒದಗಿ ಬಂದಿದೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.