ಇಂಡೋ ಕಿವೀಸ್ ಕದನ: ಇಶಾಂತ್ ವೇಗದ ದಾಳಿಗೆ ವಿಲಿಯಮ್ಸನ್ ಉತ್ತರ


Team Udayavani, Feb 22, 2020, 12:23 PM IST

kane

ವೆಲ್ಲಿಂಗ್ಟನ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧ ಮೊದಲ ಟೆಸ್ಟ್ ನ ಎರಡನೇ ದಿನದ ಗೌರವದಿಂದಲೂ ಭಾರತ ವಂಚಿತವಾಗಿದೆ. ಒಟ್ಟಾರೆ ಎರಡನೇ ದಿನದ ಆಟದ ಅಂತ್ಯಕ್ಕೆ ಕಿವೀಸ್ 51 ರನ್ ಮುನ್ನಡೆ ಸಾಧಿಸಿದೆ.

ಐದು ವಿಕೆಟ್ ಗೆ 122 ರನ್ ಗಳಿಸಿದ್ದಲ್ಲಿಂದ ಎರಡನೇ ದಿನದ ಬ್ಯಾಟಿಂಗ್ ಆರಂಭಿಸಿದ ಭಾರತ ಮೊದಲ ಒಂದು ಗಂಟೆಯಲ್ಲೇ ಸರ್ವಪತನ ಕಂಡಿತು. ಕ್ರೀಸ್ ನಲ್ಲಿದ್ದ ಪಂತ್ (19 ರನ್) ಮತ್ತು ಅಜಿಂಕ್ಯ ರಹಾನೆ (46 ರನ್) ಬೇಗನೇ ವಿಕೆಟ್ ಒಪ್ಪಿಸಿದರು. ಶಮಿ 21 ರನ್ ಗಳಿಸಿದ್ದು ಬಿಟ್ಟರೆ ಬೇರೆ ಯಾವ ಬಾಲಂಗೋಚಿಗಳ ನೆರವು ಕೂಡಾ ಲಭಿಸಲಿಲ್ಲ. ಮೊದಲ ದಿನ ಜ್ಯಾಮಿಸನ್ ಕಾಡಿದ್ದರೆ, ಎರಡನೇ ದಿನ ಸೌಥಿ ವಿಕೆಟ್ ಬೇಟೆಯಾಡಿದರು. ಇಬ್ಬರೂ ತಲಾ ನಾಲ್ಕು ವಿಕೆಟ್ ಪಡೆದರು. ಒಟ್ಟಾರೆ ಭಾರತ 69.1 ಓವರ್ ನಲ್ಲಿ ಭಾರತ 165 ರನ್ ಗೆ ಆಲ್ ಔಟ್ ಆಯಿತು.

ಇನ್ನಿಂಗ್ಸ್ ಆರಂಭಿಸಿದ ಕಿವೀಸ್ ಗೆ ಮೊದಲ ಆಘಾತ ನೀಡಿದ್ದು ವೇಗಿ ಇಶಾಂತ್ ಶರ್ಮಾ. ಲ್ಯಾಂಥಮ್ 11 ರನ್ ಗಳಿಸಿ ಔಟಾದರು. ನಂತರ ಬ್ಲಂಡೆಲ್ (30 ರನ್ ) ಕೂಡಾ ಇಶಾಂತ್ ಗೆ ಬಲಿಯಾದರು. ನಾಯಕ ಕೇನ್ ವಿಲಿಯಮ್ಸನ್ ಮತ್ತು ನೂರನೇ ಪಂದ್ಯವಾಡುತ್ತಿರವ ರಾಸ್ ಟೇಲರ್ 93 ರನ್ ಗಳ ಜೊತೆಯಾಟವಾಡಿದರು. ಟೇಲರ್ 44 ರನ್ ಗಳಿಸಿ ಔಟಾದರೆ, ಉತ್ತಮ ಇನ್ನಿಂಗ್ಸ್ ಕಟ್ಟಿದ ಕೇನ್ ವಿಲಿಯಮ್ಸನ್ 89 ರನ್ ಗಳಿಸಿ ಶಮಿ ಎಸೆತದಲ್ಲಿ ಔಟಾದರು.

ಬಿಗು ದಾಳಿ ಸಂಘಟಿಸಿದ ಇಶಾಂತ್ ಶರ್ಮಾ ಮೂರು ವಿಕೆಟ್ ಪಡೆದರೆ, ಅಶ್ವಿನ್ ಮತ್ತು ಶಮಿ ತಲಾ ಒಂದು ವಿಕೆಟ್ ಕಬಳಿಸಿದರು. ಮಂದಬೆಳಕಿನಿಂದ ದಿನದಾಟವನ್ನು ಮುಗಿಸಿದಾಗ ಕಿವೀಸ್ ಐದು ವಿಕೆಟ್ ನಷ್ಟದಲ್ಲಿ 216 ರನ್ ಗಳಿಸಿದೆ. ವ್ಯಾಟ್ಲಿಂಗ್ ಮತ್ತು ಗ್ಯಾಂಡ್ ಹೋಮ್ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ಧಾರೆ.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.