ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಕ್ಲೀನ್ ಸ್ವೀಪ್ ನಿರೀಕ್ಷೆ
Team Udayavani, Jul 7, 2022, 5:00 AM IST
ಪಲ್ಲೆಕೆಲೆ: ಭಾರತೀಯ ವನಿತಾ ಕ್ರಿಕೆಟ್ ತಂಡವು ಮೂರನೇ ತಥಾ ಅಂತಿಮ ಏಕದಿನ ಪಂದ್ಯದಲ್ಲಿ ಗುರುವಾರ ಶ್ರೀಲಂಕಾ ತಂಡವನ್ನು ಎದುರಿಸಲಿದೆ.
ಈ ಪಂದ್ಯದಲ್ಲಿಯೂ ಜಯ ಸಾಧಿಸಿ ಕ್ಲೀನ್ ಸ್ವೀಪ್ ಗುರಿಯನ್ನು ಭಾರತ ಇಟ್ಟುಕೊಂಡಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆಯಲ್ಲಿದೆ.
ಮಿಥಾಲಿ ರಾಜ್ ನಿವೃತ್ತಿಯಾದ ಬಳಿಕ ಮೊದಲ ಸರಣಿಯಲ್ಲಿ ಆಡುತ್ತಿರುವ ಭಾರತೀಯ ತಂಡವು ಈ ಸರಣಿಯಲ್ಲಿ ಉತ್ತಮವಾಗಿ ಆಡುತ್ತಿದೆ.
ಸೋಮವಾರ ನಡೆದ ದ್ವಿತೀಯ ಪಂದ್ಯದಲ್ಲಿ ಭಾರತ 10 ವಿಕೆಟ್ಗಳ ಗೆಲುವು ದಾಖಲಿಸಿತ್ತು. ಪಂದ್ಯದ ಪ್ರತಿಯೊಂದು ವಿಭಾಗದಲ್ಲಿ ಭಾರತ ನಿಯಂತ್ರಿತ ಪ್ರದರ್ಶನ ನೀಡಿತ್ತು.