ಒಲಿಂಪಿಕ್ಸ್‌ ರದ್ದು ಊಹಿಸಲೂ ಅಸಾಧ್ಯ: ಟೋಕಿಯೋ ಗವರ್ನರ್‌


Team Udayavani, Mar 12, 2020, 9:22 PM IST

ಒಲಿಂಪಿಕ್ಸ್‌ ರದ್ದು ಊಹಿಸಲೂ ಅಸಾಧ್ಯ: ಟೋಕಿಯೋ ಗವರ್ನರ್‌

ಟೋಕಿಯೋ: ವಿಶ್ವಾದ್ಯಂತ ಕೊರಾನಾ ವೈರಸ್‌ ಭೀತಿ ಹೆಚ್ಚುತ್ತಿರುವಂತೆಯೇ ಈ ವರ್ಷದ ಜು. 24ರಿಂದ ಆ.9ರವರೆಗೆ ನಿಗದಿಯಾಗಿರುವ ಒಲಿಂಪಿಕ್ಸ್‌ ರದ್ದುಗೊಳ್ಳುವ ಸಾಧ್ಯತೆಗಳಿವೆ ಎಂಬ ವದಂತಿಗಳ ನಡುವೆಯೇ ಇಂಥ ಬೆಳವಣಿಗೆಯನ್ನು ಊಹಿಸಲೂ ಅಸಾಧ್ಯ ಎಂದು ಟೋಕಿಯೋ ನಗರ ಗವರ್ನರ್‌ ಯೂರಿಕೋ ಕೊçಕೆ ಹೇಳಿದ್ದಾರೆ.

ಸದ್ಯದ ಸ್ಥಿತಿಯಲ್ಲಿ ಒಲಿಂಪಿಕ್ಸ್‌ ಕ್ರೀಡಾಕೂಟದ ಮೇಲೆ ಕೊರೊನಾ ಪರಿಣಾಮ ಬೀರಲಾರದು ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲವಾದರೂ ಕ್ರೀಡಾಕೂಟವನ್ನೇ ರದ್ದುಗೊಳಿಸಬಹುದಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂಬುದನ್ನು ಊಹಿಸಲಸಾಧ್ಯ ಎಂದವರು ಹೇಳಿದರು.

ಕ್ರೀಡಾಕೂಟದ ಸಂಘಟಕರು ಒಲಿಂಪಿಕ್ಸ್‌ನ್ನು ನಿಗದಿಯಂತೆ ನಡೆಸಲು ತೀರ್ಮಾನಿಸಿರುವರಾದರೂ ಈ ಬಗ್ಗೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ(ಐಒಸಿ) ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಹೊಂದಿದೆ. ಒಲಿಂಪಿಕ್ಸ್‌ನ್ನು ಮುಂದೂಡುವ ಅಥವಾ ರದ್ದುಗೊಳಿಸುವ ಬಗ್ಗೆ ಈವರೆಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದವರು ತಿಳಿಸಿದರು.

ಕೊರಾನಾ ವೈರಸ್‌ ವಿಶ್ವಾದ್ಯಂತ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಐಒಸಿ ನಿರಂತರ ಸಂಪರ್ಕದಲ್ಲಿದೆ.

ಬಾಸ್ಕೆಟ್‌ಬಾಲ್‌ ಆಟಗಾರನಿಗೆ ಕೊರಾನಾ
ಕೊರಾನಾ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ಹಲವಾರು ಕ್ರೀಡಾಕೂಟಗಳನ್ನು ಮುಂದೂಡಲಾಗಿದ್ದರೆ ಇನ್ನು ಕೆಲವಷ್ಟನ್ನು ರದ್ದುಗೊಳಿಸಲಾಗಿದೆ. ಇಷ್ಟು ಮಾತ್ರವಲ್ಲದೆ ಕೆಲವು ಕ್ರೀಡಾಳುಗಳಿಗೂ ಕೊರೊನಾ ಸೋಂಕು ತಗಲಿರುವ ಶಂಕೆ ಇದೆ. ಇದೀಗ ಗುರುವಾರದಂದು ಆರಂಭವಾಗಬೇಕಿದ್ದ ಅಮೆರಿಕದ ಬಾಸ್ಕೆಟ್‌ಬಾಲ್‌ ಟೂರ್ನಮೆಂಟ್‌ನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಅಟಾ ಜಾಝ್ ಕ್ರೀಡಾಳು ಓರ್ವನಿಗೆ ಕೋವಿಡ್‌-19 ತಗಲಿರುವುದು ಪ್ರಾಥಮಿಕ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇಟಲಿಯಲ್ಲಿ ಈಗಾಗಲೇ ಎ.3ರ ವರೆಗೆ ಹಲವಾರು ಕ್ರೀಡಾಕೂಟಗಳನ್ನು ಎ. 3ರ ವರೆಗೆ ಮುಂದೂಡಲಾಗಿದೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.