ಇನ್ ದಿ ಏರ್.. ಶ್ರೀಶಾಂತ್ ಟೇಕ್ಸ್ ಇಟ್…: ಮೊದಲ ಟಿ20 ವಿಶ್ವಕಪ್ ಗೆಲುವಿಗೆ 15ರ ಸಂಭ್ರಮ


Team Udayavani, Sep 24, 2022, 11:45 AM IST

ಇನ್ ದಿ ಏರ್.. ಶ್ರೀಶಾಂತ್ ಟೇಕ್ಸ್ ಇಟ್…: ಮೊದಲ ಟಿ20 ವಿಶ್ವಕಪ್ ಗೆಲುವಿಗೆ 15ರ ಸಂಭ್ರಮ

ಮುಂಬೈ: ಟಿ20 ಎಂಬ ಚುಟುಕು ಮಾದರಿಯ ಮೊದಲ ವಿಶ್ವಕಪ್ ನಲ್ಲಿ ಭಾರತದ ತಂಡ ಸಾಧಿಸಿದ ವಿಜಯ ಯಾತ್ರೆಗೆ ಇಂದು 15 ವರ್ಷದ ಸಂಭ್ರಮ. 2007 ಸೆ.24ರಂದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಯುವ ತಂಡ ವಿಶ್ವಕಪ್ ಗೆದ್ದು ಬೀಗಿತ್ತು.

ಕೆಲ ತಿಂಗಳ ಹಿಂದಷ್ಟೇ ಏಕದಿನ ವಿಶ್ವಕಪ್ ನಲ್ಲಿ ಹೀನಾಯವಾಗಿ ಸೋಲನುಭವಿಸಿದ್ದ ಭಾರತ ತಂಡದಲ್ಲಿ ಭಾರೀ ಬದಲಾವಣೆಗಳಾಗಿದ್ದವು. ಟಿ20 ವಿಶ್ವಕಪ್ ಗೆ ಅನುಭವಿಗಳ ಬದಲು ಯುವ ಪಡೆಯನ್ನು ಕಟ್ಟಲಾಗಿತ್ತು. ಯುವ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಮೊದಲ ಬಾರಿ ತಂಡದ ನಾಯಕನಾಗಿದ್ದರು.

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯುವರಾಜ್ ಸಿಂಗ್ ಅವರು ಸ್ಟುವರ್ಟ್ ಬ್ರಾಡ್ ಅವರ ಆರು ಎಸೆತಕ್ಕೆ ಆರು ಸಿಕ್ಸರ್ ಬಾರಿಸಿದ್ದರು. ಅಲ್ಲದೆ ಕೇವಲ 12 ಎಸೆತಗಳಲ್ಲಿ ಅರ್ಧ ಶತಕ ಬಾರಿಸಿದ್ದರು. ಅಲ್ಲದೆ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ್ದರು.

ಕೂಟದಲ್ಲಿ ಹಲವು ಅಚ್ಚರಿಗಳಿಗೆ ಕಾರಣವಾಗಿ ಫೈನಲ್ ಪ್ರವೇಶ ಪಡೆದಿದ್ದ ಭಾರತದ ತಂಡ ಅಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು ಎದುರಿಸಿತ್ತು. ಈಗಾಗಲೇ ಲೀಗ್ ಹಂತದಲ್ಲಿ ಪಾಕ್ ವಿರುದ್ಧ ಬಾಲ್ ಔಟ್ ಎಂಬ ವಿಭಿನ್ನ ನಿಯಮದ ಮೂಲಕ ಜಯ ಸಾಧಿಸಿದ್ದ ಭಾರತ ಮತ್ತೊಂದು ಹೈ ವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿತ್ತು.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 157 ರನ್ ಗಳಿಸಿದ್ದರೆ, ಪಾಕಿಸ್ಥಾನ ತಂಡ 152 ರನ್ ಮಾತ್ರ ಗಳಿಸಿ ಐದು ರನ್ ಅಂತರದ ಸೋಲನುಭವಿಸಿತ್ತು.

ಇದನ್ನೂ ಓದಿ:ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…ಕೇರಳ ಆಟೋ ಚಾಲಕನ ಅಳಲೇನು?!

ಗೌತಮ್ ಗಂಭೀರ್ 75 ರನ್ ಗಳಿಸಿದ್ದರೆ, ರೋಹಿತ್ ಶರ್ಮಾ 30 ರನ್ ಕೊಡುಗೆ ನೀಡಿದ್ದರು. ಉಳಿದ ಯಾರಿಂದಲೂ ಹೇಳಿಕೊಳ್ಳುವ ಪ್ರದರ್ಶನ ತಂಡಕ್ಕೆ ಸಿಗಲಿಲ್ಲ. ಪಾಕಿಸ್ಥಾನ ಪರ ಉಮರ್ ಗುಲ್ ಮೂರು ವಿಕೆಟ್ ಕಿತ್ತಿದ್ದರು.

ಸಾಧಾರಣ ಗುರಿ ಬೆನ್ನತ್ತಿದ್ದ ಪಾಕ್ ಗೆ ಇಮ್ರಾನ್ ನಜೀರ್ 33 ರನ್ ಮತ್ತು ಯೂನಿಸ್ ಖಾನ್ 24 ರನ್ ಗಳಿಸಿದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಮಿಸ್ಬಾ ಉಲ್ ಹಕ್ ಆಡುತ್ತಿದ್ದರು. ಕೊನೆಯ ಓವರ್ ನಲ್ಲಿ 13 ರನ್ ಬೇಕಾಗಿತ್ತು. ಕೈಯಲ್ಲಿ ಇದ್ದಿದ್ದು ಒಂದು ವಿಕೆಟ್. ಜೋಗಿಂದರ್ ಶರ್ಮಾರ ಎರಡನೇ ಎಸೆತವನ್ನು ಸಿಕ್ಸರ್ ಗೆ ಅಟ್ಟಿದ ಮಿಸ್ಬಾ ಮೂರನೇ ಎಸೆತವನ್ನು ಫೈನ್ ಲೆಗ್ ಗೆ ಸ್ಕೂಪ್ ಮಾಡಿದ್ದರು. ಆದರೆ ಮಿಸ್ ಟೈಮ್ ಆಗಿದ್ದ ಚೆಂಡು ಶ್ರೀಶಾಂತ್ ಕೈ ಸೇರಿತ್ತು.

ಚೊಚ್ಚಲ ಟಿ20 ವಿಶ್ವಕಪ್ ಗೆದ್ದು ಬೀಗಿತ್ತು. ಹೊಸ ನಾಯಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಯುವಪಡೆ ಇತಿಹಾಸ ಸೃಷ್ಟಿಸಿತ್ತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.