ದ್ವಿತೀಯ ಪ್ರಯತ್ನದಲ್ಲಿ ಕಪ್‌ ಗೆದ್ದ ಪಾಕ್‌


Team Udayavani, Oct 19, 2021, 6:04 AM IST

ದ್ವಿತೀಯ ಪ್ರಯತ್ನದಲ್ಲಿ ಕಪ್‌ ಗೆದ್ದ ಪಾಕ್‌

ಇಂಗ್ಲೆಂಡ್‌ ಆತಿಥ್ಯದಲ್ಲಿ ಸಾಗಿದ 2009ರ ದ್ವಿತೀಯ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಆದ ತಂಡ ಪಾಕಿಸ್ಥಾನ. ಮೊದಲ ವಿಶ್ವಕಪ್‌ ಫೈನಲ್‌ನಲ್ಲಿ ಭಾರತದ ವಿರುದ್ಧ ಸೋತಿದ್ದ ಪಾಕಿಸ್ಥಾನಕ್ಕೆ ಈ ಸಲ ಅದೃಷ್ಟ ಕೈಕೊಡಲಿಲ್ಲ. ಅದು ಲಾರ್ಡ್ಸ್‌ ಫೈನಲ್‌ನಲ್ಲಿ ಶ್ರೀಲಂಕಾವನ್ನು 8 ವಿಕೆಟ್‌ಗಳಿಂದ ಮಣಿಸಿ ಅಧಿಕಾರಯುತವಾಗಿಯೇ ಕಪ್‌ ಎತ್ತಿತು.

ಪಾಕ್‌ ತಂಡದ ನಾಯಕತ್ವ ವಹಿ ಸಿದ್ದು ಯೂನಿಸ್‌ ಖಾನ್‌. ಟೆಸ್ಟ್‌ ಶೈಲಿಯ ಆಟಗಾರನಾದ ಯೂನಿಸ್‌ ನಾಯಕತ್ವದಲ್ಲೇ ಪಾಕ್‌ಗೆ ಮೊದಲ ಕಪ್‌ ಗೆಲ್ಲುವ ಅವಕಾಶ ಲಭಿಸಿದ್ದು ವಿಶೇಷ.

ಭಾರತದ ಕಳಪೆ ಸಾಧನೆ
ಈ ಕೂಟದಲ್ಲೂ 12 ತಂಡಗಳು ಪಾಲ್ಗೊಂಡಿದ್ದವು. “ಎ’ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಭಾರತ ಎರಡೂ ಲೀಗ್‌ ಪಂದ್ಯದಲ್ಲಿ ಗೆಲುವು ಸಾಧಿಸಿತು. ಸೂಪರ್‌-8ರಲ್ಲಿ ಭಾರತ “ಇ’ ಗುಂಪಿನಲ್ಲಿ ಸ್ಥಾನ ಪಡೆಯಿತು. ಇಲ್ಲಿ ಆಡಿದ ಮೂರೂ ಪಂದ್ಯಗಳಲ್ಲಿ ಸೋಲನುಭವಿಸಿ ಕೂಟ ದಿಂದ ಹೊರಬಿತ್ತು. ಇದು ಟಿ20 ವಿಶ್ವಕಪ್‌ ಇತಿಹಾಸದಲ್ಲೇ ಭಾರತ ನೀಡಿದ ಅತ್ಯಂತ ಕಳಪೆ ಪ್ರದರ್ಶನ.

ಸೆಮಿಫೈನಲ್‌ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ಥಾನ, ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾ ಗೆಲುವು ಸಾಧಿಸಿ ಫೈನಲ್‌ಗೆ ಏರಿದವು.

ಲಂಕೆಗೆ ಹೀನಾಯ ಸೋಲು
ಐತಿಹಾಸಿಕ ಲಾರ್ಡ್ಸ್ ನಲ್ಲಿ ನಡೆದ ಫೈನಲ್‌ನಲ್ಲಿ ಮೊದಲು ಬ್ಯಾಟ್‌ ಮಾಡಿದ ಶ್ರೀಲಂಕಾ 6 ವಿಕೆಟಿಗೆ ಕೇವಲ 138 ರನ್‌ ಗಳಿಸಿತು. ಕುಮಾರ ಸಂಗಕ್ಕರ ಏಕಾಂಗಿಯಾಗಿ ಹೋರಾಡಿ ಅಜೇಯ 64 ರನ್‌ ಗಳಿಸಿದರು. ಪಾಕಿಸ್ಥಾನ ಕೇವಲ 2 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು. ವನ್‌ಡೌನ್‌ನಲ್ಲಿ ಬಂದ ಶಾಹಿದ್‌ ಅಫ್ರಿದಿ ಅಜೇಯ 54 ರನ್‌ ಬಾರಿಸಿದರು.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-6 ವಿಕೆಟಿಗೆ 138 (ಕುಮಾರ ಸಂಗಕ್ಕರ ಅಜೇಯ 64, ಏಂಜೆಲೊ ಮ್ಯಾಥ್ಯೂಸ್‌ 35, ಸನತ್‌ ಜಯಸೂರ್ಯ 17, ಅಬ್ದುಲ್‌ ರಜಾಕ್‌ 20ಕ್ಕೆ 3, ಅಫ್ರಿದಿ 20ಕ್ಕೆ 1). ಪಾಕಿಸ್ಥಾನ-18.4 ಓವರ್‌ಗಳಲ್ಲಿ 2 ವಿಕೆಟಿಗೆ 139 (ಶಾಹಿದ್‌ ಅಫ್ರಿದಿ ಅಜೇಯ 54, ಕಮ್ರಾನ್‌ ಅಕ್ಮಲ್‌ 37, ಮುರಳೀಧರನ್‌ 20ಕ್ಕೆ 1).

ಪಂದ್ಯಶ್ರೇಷ್ಠ: ಶಾಹಿದ್‌ ಅಫ್ರಿದಿ. ಸರಣಿಶ್ರೇಷ್ಠ: ತಿಲಕರತ್ನ ದಿಲ್ಶನ್‌.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.