ಒಂದು ಏಶ್ಯಾಡ್‌ ಪದಕ ಗೆದ್ದೊಡನೆ ಕುಸ್ತಿ ಹೀರೋ ಆಗಲಾರೆ: ಭಜರಂಗ್‌


Team Udayavani, Aug 28, 2018, 6:00 AM IST

35.jpg

ಸೋನೆಪತ್‌: ಜಕಾರ್ತಾ ಏಶ್ಯಾಡ್‌ನ‌ಲ್ಲಿ ಭರವಸೆಯ ಕುಸ್ತಿಪಟು ಸುಶೀಲ್‌ ಕುಮಾರ್‌ ಮೊದಲ ಸುತ್ತಿನಲ್ಲೇ ಸೋತದ್ದು, ಭಜರಂಗ್‌ ಪೂನಿಯ ಚಿನ್ನದ ಪದಕ ಜಯಿಸಿದ್ದು ಒಂದೇ ದಿನ ಎಂಬುದು ಕಾಕತಾಳೀಯ. ಇದು ಭಾರತೀಯ ಕುಸ್ತಿಯ ಪರಿವರ್ತನೆಯ ಸಂಕೇತವೇ? ಇಂಥದೊಂದು ಪ್ರಶ್ನೆ ಕೆಲವರನ್ನಾದರೂ ಕಾಡದೇ ಇರಲಿಕ್ಕಿಲ್ಲ.

ಇದೇ ಪ್ರಶ್ನೆಯನ್ನು ಭಜರಂಗ್‌ ಪೂನಿಯ ಅವರಿಗೆ ಕೇಳಿದಾಗ ಅವರು ನೀಡಿದ ಉತ್ತರ ಮಾರ್ಮಿಕವಾಗಿತ್ತು-“ಒಂದು ಏಶ್ಯಾಡ್‌ ಪದಕ ಗೆದ್ದೊಡನೆ ನಾನು ಕುಸ್ತಿ ಹೀರೋ ಎನಿಸಿಕೊಳ್ಳುವುದಿಲ್ಲ. ಸುಶೀಲ್‌ ಕುಮಾರ್‌ ಪದಕ ಗೆಲ್ಲಲಿಲ್ಲ, ನಾನು ಗೆದ್ದಿದ್ದೇನೆ ಅಂದಮಾತ್ರಕ್ಕೂ ನಾನು ಹೀರೋ ಆಗುವುದಿಲ್ಲ. ನಮ್ಮಲ್ಲಿ ಮೌಸಮ್‌ ಖತ್ರಿ, ಸುಮಿತ್‌ ಮೊದಲಾದ ಸಾಕಷ್ಟು ಸೀನಿಯರ್‌ ಕುಸ್ತಿಪಟುಗಳಿದ್ದಾರೆ. ನನ್ನ ತಾಂತ್ರಿಕತೆಯಲ್ಲಿ ಏನಾದರೂ ಸಂಶಯವಿದ್ದರೆ ಅವರಲ್ಲಿ ಕೇಳಲು ನಾನು ಹಿಂಜರಿಯುವುದಿಲ್ಲ’ ಎಂದು ಸೋನೆಪತ್‌ಗೆ ಆಗಮಿಸಿದ ಭಜರಂಗ್‌ ಪೂನಿಯ ಸಂದರ್ಶನವೊಂದರಲ್ಲಿ ಹೇಳಿದರು.

ಜಕಾರ್ತಾದಲ್ಲಿ ಚಿನ್ನ ಗೆದ್ದು ಭಾರತಕ್ಕೆ ಬಂದಿಳಿದ ಭಜರಂಗ್‌ ಕೇವಲ ಒಂದು ದಿನ ಕುಟುಂಬದವರೊಂದಿಗೆ ಕಳೆದು ಅಭ್ಯಾಸಕ್ಕೆ ಮರಳಿದ್ದಾರೆ. “ನನ್ನ ಅಮ್ಮನಿಗೆ ನಾನು ಸಾಧ್ಯವಾದಷ್ಟು ಹೆಚ್ಚು ಸಮಯ ಮನೆಯಲ್ಲೇ ಇರಬೇಕೆಂಬ ಅಭಿಲಾಷೆ. ಆದರೆ ಅಕ್ಟೋಬರ್‌ನಲ್ಲೇ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ ನಡೆಯಲಿದೆ. ಇದಕ್ಕೆ ಸಿದ್ಧತೆ ಆರಂಭಿಸಬೇಕು. ಮುಂದಿನ ಒಲಿಂಪಿಕ್ಸ್‌ನಲ್ಲೂ ನಾನು ಪದಕ ಗೆಲ್ಲಬೇಕೆಂಬುದು ಮನೆಯವರ ಬಯಕೆ’ ಎಂದು ಭಜರಂಗ್‌ ಹೇಳಿದರು.

2013ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಭಜರಂಗ್‌ ಪೂನಿಯ, ಸೆಪ್ಟಂಬರ್‌ ಮೊದಲ ವಾರ ಅಜರ್‌ಬೈಜಾನ್‌ಗೆ ತೆರಳಿ ಅಭ್ಯಾಸ ನಡೆಸುವರು. ಬಳಿಕ ತವರಿಗೆ ಆಗಮಿಸಿ ಸ್ವಲ್ಪ ದಿನ ಇದ್ದು, ಬುಡಾಪೆಸ್ಟ್‌ಗೆ ವಿಮಾನ ಏರುವರು. ಅಲ್ಲಿ ಅ. 22ರಿಂದ 26ರ ತನಕ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ ನಡೆಯಲಿದೆ.

ಒಲಿಂಪಿಕ್ಸ್‌  ಪದಕವೇ ಡಿ.ಪಿ.!
ಭಜರಂಗ್‌ ಪೂನಿಯ ಈಗಾಗಲೇ ಒಲಿಂಪಿಕ್ಸ್‌ ಪದಕದ ಗುರಿ ಹಾಕಿಕೊಂಡಿದ್ದಾರೆ. ಅಷ್ಟೇ ಅಲ್ಲ, ತಮ್ಮ ವ್ಯಾಟ್ಸ್‌ಅಪ್‌ ಡಿ.ಪಿ.ಯಲ್ಲೂ 2010ರ ಟೋಕಿಯೊ ಒಲಿಂಪಿಕ್ಸ್‌ ಪದಕವೊಂದರ ಚಿತ್ರವನ್ನು ಹಾಕಿಕೊಂಡಿದ್ದಾರೆ. ಟೋಕಿಯೊದಲ್ಲಿ ಯಶಸ್ಸು ಕಾಣದೆ ಈ ಚಿತ್ರವನ್ನು ಬದಲಿಸುವುದಿಲ್ಲ ಎಂಬುದು ಪೂನಿಯ ಅವರ ಶಪಥವೂ ಹೌದು!
 

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.