World Cup ಒಂದೇ ಶೋಕ, ನೂರು ಭಾವ, ಆರ್ದ್ರವಾಗಿದ್ದ ಡ್ರೆಸ್ಸಿಂಗ್‌ ಕೊಠಡಿ

ಟೀಮ್‌ ಇಂಡಿಯಾ ಸಂತೈಸಿದ ಮೋದಿ

Team Udayavani, Nov 21, 2023, 12:41 AM IST

ಒಂದೇ ಶೋಕ, ನೂರು ಭಾವ, ಆರ್ದ್ರವಾಗಿದ್ದ ಡ್ರೆಸ್ಸಿಂಗ್‌ ಕೊಠಡಿ

ಅಹ್ಮದಾಬಾದ್‌: ರವಿವಾರ ಭಾರತೀ ತಂಡದ ವಿಶ್ವಕಪ್‌ ಸೋಲು ಕೋಟ್ಯಂತರ ಅಭಿಮಾನಿಗಳ ಕಂಗಳನ್ನು ಒದ್ದೆಯಾಗಿಸಿದೆ. ಆಟಗಾರರ ಹೃದಯವನ್ನು ಹಿಂಡಿದೆ. ಹೇಳಿಕೊಳ್ಳಲಾಗದೆ, ಸುಮ್ಮನಿದ್ದು ಸಹಿಸಲೂ ಆಗದೆ ಆಟಗಾರರು ಡ್ರೆಸ್ಸಿಂಗ್‌ ಕೊಠಡಿಯೊಳಕ್ಕೆ ತಳಮಳಿಸಿದ್ದಾರೆ.

ಪಂದ್ಯ ಮುಗಿದ ಕೂಡಲೇ ತುಂಬಿಕೊಂಡಿದ್ದ ಕಣ್ಣುಗಳನ್ನು ಒರೆಸಲೂ ಹೋಗದೆ ನಾಯಕ ರೋಹಿತ್‌ ಶರ್ಮ ಹೊರಹೋದರು. ವಿರಾಟ್‌ ಕೊಹ್ಲಿ ಪತ್ರಿಕಾಗೋಷ್ಠಿಗೆ ಹೋಗಲಿಲ್ಲ. ತರಬೇತುದಾರ ರಾಹುಲ್‌ ದ್ರಾವಿಡ್‌ ಒಬ್ಬರೇ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಸ್ವತಃ ದ್ರಾವಿಡ್‌ ತಮ್ಮನ್ನು ತಾವು ಸಂತೈಸಿಕೊಳ್ಳುವುದೋ, ಎದುರಿದ್ದವರ ಕಣ್ಣೀರು ಒರೆಸುವುದೋ ಗೊತ್ತಾಗದೆ ಸಂದಿಗ್ಧದಲ್ಲಿದ್ದರು. 2021ರ ಕೊನೆಗೆ ಭಾರತ ತಂಡಕ್ಕೆ ಮುಖ್ಯ ತರಬೇತುದಾರರಾಗಿ ಆಯ್ಕೆಯಾದ ರಾಹುಲ್‌ ದ್ರಾವಿಡ್‌ ಅವಧಿ ಈ ವಿಶ್ವಕಪ್‌ ಅಂತ್ಯಕ್ಕೆ ಮುಗಿದಿದೆ. ಅವರು ಮತ್ತೆ ತರಬೇತುದಾರರಾಗಿ ಮುಂದುವರಿಯುತ್ತಾರೋ, ಮುಂದುವರಿಯುವ ಆಸಕ್ತಿ ಅವರಿಗಿದೆಯೋ ಇಲ್ಲವೋ ಯಾರಿಗೂ ಗೊತ್ತಿಲ್ಲ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ್ರಾವಿಡ್‌, ನಾನು ಈ ಆಟಗಾರರನ್ನು, ಅವರ ಪರಿಶ್ರಮ, ತ್ಯಾಗವನ್ನು ನೇರವಾಗಿ ನೋಡಿದ್ದೇನೆ. ಇಂತಹ ಪರಿಸ್ಥಿತಿಯನ್ನು ಎದುರಿಸುವುದು ಬಹಳ ಕಷ್ಟ. ಡ್ರೆಸ್ಸಿಂಗ್‌ ಕೊಠಡಿಯಲ್ಲಿ ಭಾವನೆಗಳು ಮಡುಗಟ್ಟಿವೆ ಎಂದು ಹೇಳಿದರು.

ಡ್ರೆಸ್ಸಿಂಗ್‌ ಕೊಠಡಿಯಲ್ಲಿ ಕೆಲವರು ಮೌನವಾಗಿದ್ದರು. ಕೆಲವರು ಅಳುತ್ತಿದ್ದರು. ಕೆಲವರು ಸಮಾಧಾನಿಸುತ್ತಿದ್ದರು. ನೂರಾರು ಭಾವಗಳು ಚದುರಿಹೋಗಿ, ಇಡೀ ಕೊಠಡಿ ತೋಯ್ದಿತ್ತು. ಸೋತು ಮೈದಾನದಿಂದ ಹೊರಬಂದ ವಿರಾಟ್‌ ಕೊಹ್ಲಿಯನ್ನು ಪತ್ನಿ ಅನುಷ್ಕಾ ಶರ್ಮ ತಬ್ಬಿಕೊಂಡು ಸಂತೈಸಿದರು.

ವೇಗಿ ಮೊಹಮ್ಮದ್‌ ಸಿರಾಜ್‌ ಮೈದಾನದಲ್ಲೇ ಅತ್ತರು. ಅದು ಸಹಜವೇ ಆಗಿತ್ತು. ವಿಶ್ವಕಪ್‌ ಗೆಲ್ಲುವುದು ಪ್ರತೀ ಆಟಗಾರನ ಕನಸು. ಅದಕ್ಕಾಗಿ ಸಾಧ್ಯವಾದ ಎಲ್ಲವನ್ನೂ ಮಾಡಿ ಕಡೆಗೆ ಅಸಹಾಯಕರಾದಾಗ ಕಣ್ಣೀರೇ…

ಪ್ರಧಾನಿ ಮೋದಿ ಸಾಂತ್ವನ
ಸೋತ ಭಾರತೀಯ ತಂಡದ ಪರಿಸ್ಥಿತಿ ಹೇಗಿರಬಹುದು ಎಂಬ ಅರಿವಿದ್ದೇ ಪ್ರಧಾನಿ ನರೇಂದ್ರ ಮೋದಿ ಡ್ರೆಸ್ಸಿಂಗ್‌ ಕೊಠಡಿಯನ್ನು ಪ್ರವೇಶಿಸಿದರು. ಉದ್ವೇಗಕ್ಕೊಳಗಾಗಿದ್ದ ವೇಗಿ ಮೊಹಮ್ಮದ್‌ ಶಮಿಯನ್ನು ಎದೆಗೊರಗಿಸಿಕೊಂಡು ಸಾಂತ್ವನ ಹೇಳಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಶಮಿ, ತಂಡದ ಬೆಂಬಲಕ್ಕೆ ನಿಂತಿರುವ ಎಲ್ಲ ಭಾರತೀಯರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಡ್ರೆಸ್ಸಿಂಗ್‌ ಕೊಠಡಿಗೆ ಆಗಮಿಸಿ ನಮಗೆ ಸಮಾಧಾನ ಹೇಳಿದ ಪ್ರಧಾನಿ ಮೋದಿ ಎಲ್ಲರ ಉತ್ಸಾಹವನ್ನು ಬಡಿದೆಬ್ಬಿಸಿದರು. ಅವರಿಗೂ ಧನ್ಯವಾದ, ನಾವು ಮತ್ತೆ ತಿರುಗಿ ಬೀಳುತ್ತೇವೆ ಎಂದಿದ್ದಾರೆ.
ಮೋದಿಗೆ ರವೀಂದ್ರ ಜಡೇಜ ಕೂಡ ಕೃತಜ್ಞತೆ ಅರ್ಪಿಸಿದ್ದಾರೆ. ನಮ್ಮೆಲ್ಲರ ಹೃದಯಗಳು ಒಡೆದುಹೋಗಿವೆ. ಆದರೆ ಜನರ ಬೆಂಬಲ ನಮ್ಮನ್ನು ಮುಂದಕ್ಕೆ ನಡೆಸುತ್ತಿದೆ. ಪ್ರಧಾನಿ ಮೋದಿ ಡ್ರೆಸ್ಸಿಂಗ್‌ ಕೊಠಡಿಗೆ ಆಗಮಿಸಿದ್ದು ವಿಶೇಷವಾಗಿತ್ತು, ಸ್ಫೂರ್ತಿದಾಯಕವಾಗಿತ್ತು ಎಂದು ಜಡೇಜ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-saass-d

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

1-sacdsadas

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

1-sadsdasd

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

raRabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

1-sadsadasd

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್

Mangaluru; ಸೋಮೇಶ್ವರ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Mangaluru; ಸೋಮೇಶ್ವರ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Kashvee Gautam bagged 2 crore in WPL Auction 2024

WPL Auction: ಕಳೆದ ವರ್ಷ ಅನ್ ಸೋಲ್ಡ್, ಈ ಬಾರಿ 2 ಕೋಟಿ ರೂ ಪಡೆದ ದಾಖಲೆ ಬರೆದ ಕಶ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kashvee Gautam bagged 2 crore in WPL Auction 2024

WPL Auction: ಕಳೆದ ವರ್ಷ ಅನ್ ಸೋಲ್ಡ್, ಈ ಬಾರಿ 2 ಕೋಟಿ ರೂ ಪಡೆದ ದಾಖಲೆ ಬರೆದ ಕಶ್ವಿ

vrinda dinesh

WPL Auction; ಬರೋಬ್ಬರಿ 1.3 ಕೋಟಿ ರೂ ಬಾಚಿದ ಕರ್ನಾಟಕದ 21 ವರ್ಷದ ವೃಂದಾ ದಿನೇಶ್

WPL Auction : 2 ಕೋಟಿ ಪಡೆದ ಸತರ್ಲ್ಯಾಂಡ್; ಸೇಲಾಗದ ವೇದಾ, ಪ್ರಿಯಾ ಪೂನಿಯಾ

WPL Auction : 2 ಕೋಟಿ ಪಡೆದ ಸತರ್ಲ್ಯಾಂಡ್; ಸೇಲಾಗದ ವೇದಾ, ಪ್ರಿಯಾ ಪೂನಿಯಾ

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1-saass-d

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

1-sacdsadas

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

1-sadsdasd

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

raRabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

1-sadsadasd

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.