ಕೇವಲ 16 ವರ್ಷದ ಮನುಗೆ ಎರಡನೇ ಚಿನ್ನ


Team Udayavani, Mar 7, 2018, 8:20 AM IST

s-19.jpg

ನವದೆಹಲಿ: ಕೇವಲ 16 ವರ್ಷದ ಭಾರತದ ಮಹಿಳಾ ಶೂಟರ್‌ ಮನು ಭಾಕರ್‌ ಈ ಬಾರಿಯ ಐಎಸ್‌ಎಸ್‌ಎಫ್ ವಿಶ್ವಕಪ್‌
ಶೂಟಿಂಗ್‌ನಲ್ಲಿ ಸತತ 2ನೇ ಚಿನ್ನದ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಈ ಮೂಲಕ ಹಿರಿಯರ ವಿಭಾಗದಲ್ಲಿ ಬಲವಾದ ಹೆಜ್ಜೆ ಗುರುತು
ಮೂಡಿಸಿದ್ದಾರೆ. ಆದರೆ ಈ ಸಾಧನೆ ಮಾಡಿದ ಅತೀ ಕಿರಿಯ ಶೂಟರ್‌ ಹೌದೋ? ಅಲ್ಲವೋ? ಅನ್ನುವುದರ ಬಗ್ಗೆ ಅಖೀಲ
ಭಾರತೀಯ ರಾಷ್ಟ್ರೀಯ ರೈಫ‌ಲ್‌ ಸಂಸ್ಥೆ (ಎನ್‌ಆರ್‌ಎಐ) ಖಚಿತಪಡಿಸಿಲ್ಲ.

ಮಂಗಳವಾರ ನಡೆದ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ವಿಭಾಗದಲ್ಲಿ ಮನು ಭಾಕರ್‌ ಮತ್ತು ಓಂ ಪ್ರಕಾಶ್‌ ಮಿತರ್ವಾಲ್‌ ಜೋಡಿ 
ಚಿನ್ನದ ಪದಕ ಗೆದ್ದಿದ್ದಾರೆ. ಇದಕ್ಕೂ ಮುನ್ನ ಮನು ಮಹಿಳೆಯರ ವೈಯಕ್ತಿಕ 10 ಮೀ. ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಭಾಕರ್‌ ಮತ್ತು ಓಂ ಪ್ರಕಾಶ್‌ ಅರ್ಹತಾ ಸುತ್ತಿನಲ್ಲಿ 770 ಅಂಕ ಪಡೆದು ದ್ವಿತೀಯ ಸ್ಥಾನಿಯಾಗಿ ಫೈನಲ್‌ಗೇರಿದ್ದರು. ಭಾರತದ ಮಹಿಮಾ ಅಗರ್ವಾಲ್‌ ಮತ್ತು ಶಹjರ್‌ ರಿಜ್ವಿ ನಾಲ್ಕನೇ ಸ್ಥಾನ ಪಡೆದು ಫೈನಲ್‌ ತಲುಪಿದ್ದರು. ಐದು ತಂಡಗಳ ಫೈನಲ್‌ನಲ್ಲಿ ಭಾರತಕ್ಕೆ ಜರ್ಮನಿಯ ಜೋಡಿ ಪ್ರಬಲ ಸವಾಲು ನೀಡಿತ್ತು. ಅಂತಿಮ ಆರು ಶೂಟ್‌ಗಳು ಬಾಕಿ ಉಳಿದಿರುವಾಗ ಜರ್ಮನಿ 0.1 ಅಂಕದಿಂದ ಮುನ್ನಡೆಯಲ್ಲಿತ್ತು. ಆದರೆ ಭಾಕರ್‌ ಮತ್ತು ಓಂ ಪ್ರಕಾಶ್‌ ಭರ್ಜರಿಯಾಗಿ ಗುರಿಯಿಟ್ಟು ಜರ್ಮನಿ 
ಜೋಡಿಗಿಂತ ಒಂದಂಕ ಮುನ್ನಡೆ ಸಾಧಿಸಿ ಚಿನ್ನ ಗೆಲ್ಲುವಲ್ಲಿ ಯಶಸ್ವಿಯಾಯಿತು. 

ಭಾಕರ್‌ ಸಾಹಸ: ಹರ್ಯಾಣದ ಜಾಜರ್‌ ಮೂಲದ ಮನು ಭಾಕರ್‌ ವಿಶ್ವಮಟ್ಟದ ಈ ಸ್ಪರ್ಧೆಯಲ್ಲಿ ಸತತ ಎರಡು ಚಿನ್ನ ಗೆಲ್ಲುವ 
ಮೂಲಕ ಎಲ್ಲರನ್ನೂ ಆಶ್ಚರ್ಯಗೊಳಿಸಿದ್ದಾರೆ. ಬರೀ ಎರಡು ವರ್ಷಗಳ ಹಿಂದೆ ಶೂಟಿಂಗ್‌ ಕ್ಷೇತ್ರ ಆಯ್ದುಕೊಂಡಿದ್ದ ಭಾಕರ್‌ ಇದೀಗ ಚಿನ್ನ ಗೆದ್ದಿರುವುದು ಸಣ್ಣ ಸಾಧನೆಯೇನೂ ಅಲ್ಲ. ದಾಖಲೆಯೊಂದಿಗೆ ಚಿನ್ನ ಗೆದ್ದಿರುವುದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಮನು, ಇದು ಕೇವಲ ನಡೆದು ಹೋಗಿದೆ. ಪದಕ ಗೆಲ್ಲುವ ಬಗ್ಗೆ ಆಲೋಚನೆ ಮಾಡಿರಲಿಲ್ಲ. ಮಾತ್ರವಲ್ಲದೇ ದಾಖಲೆಯ ಬಗ್ಗೆ ನನಗೇನೂ ತಿಳಿದಿಲ್ಲ ಎಂದರು.

ಕಳೆದ ಡಿಸೆಂಬರ್‌ನಲ್ಲಿ ತಿರುವನಂತಪುರದಲ್ಲಿ ನಡೆದ 61ನೇ ರಾಷ್ಟ್ರೀಯ ಶೂಟಿಂಗ್‌ ಸ್ಪರ್ಧೆಯ 10 ಮೀ. ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಮನು ಅನುಭವಿ ಹೀನಾ ಸಿಧು ಅವರನ್ನು ಹಿಂದಿಕ್ಕಿ ಚಿನ್ನದ ಪದಕ ಗೆದ್ದಿದ್ದರು. ಸಿಧು ಅವರ ಹೆಸರಲ್ಲಿದ್ದ ದೀರ್ಘ‌ ಕಾಲದ ರಾಷ್ಟ್ರೀಯ ದಾಖಲೆಯನ್ನು ಕೂಡ ಮುರಿದಿದ್ದರು. 

ದೀಪಕ್‌, ಮೆಹುಲಿಗೆ ಕಂಚು: ದೀಪಕ್‌ ಕುಮಾರ್‌ ಮತ್ತು ಮೆಹುಲಿ ಘೋಷ್‌ 10 ಮೀ. ಏರ್‌ ರೈಫ‌ಲ್‌ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ
ಪದಕ ಗೆದ್ದಿದ್ದಾರೆ. ಇದು ಭಾರತಕ್ಕೆ ಲಭಿಸಿದ ಆರನೇ ಪದಕವಾಗಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.