ಕಾಮನ್‌ವೆಲ್ತ್‌ ಗೇಮ್ಸ್‌ : ವನಿತಾ ತಂಡಕ್ಕೆ ದಿಯಾ ಚಿತಾಲೆ ಸೇರ್ಪಡೆ


Team Udayavani, Jun 7, 2022, 11:15 PM IST

ಕಾಮನ್‌ವೆಲ್ತ್‌ ಗೇಮ್ಸ್‌ : ವನಿತಾ ತಂಡಕ್ಕೆ ದಿಯಾ ಚಿತಾಲೆ ಸೇರ್ಪಡೆ

ಹೊಸದಿಲ್ಲಿ: ವನಿತೆಯರ ಕಾಮನ್‌ವೆಲ್ತ್‌ ಗೇಮ್ಸ್‌ ತಂಡದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ದಿಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಭಾರತದ ಯುವ ಟೇಬಲ್‌ ಟೆನಿಸ್‌ ಆಟಗಾರ್ತಿ ದಿಯಾ ಚಿತಾಲೆ ಅವರನ್ನು ಮಂಗಳವಾರ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಅವರಿಗಾಗಿ ಅರ್ಚನಾ ಕಾಮತ್‌ ಅವರನ್ನು ಕೈಬಿಡಲಾಗಿದೆ.

ಆದರೆ ಪುರುಷರ ತಂಡದಲ್ಲಿ ಯಾವುದೇ ಬದಲಾವಣೆ ಮಾಡ ಲಿಲ್ಲ. ಮನುಷ್‌ ಶಾ ಅವರು ಮೀಸಲು ಆಟಗಾರರಾಗಿ ಮುಂದುವರಿಯ ಲಿದ್ದಾರೆ. ಅವರು ಕೂಡ ತಂಡದಿಂದ ಕೈಬಿಟ್ಟ ಕಾರಣ ದಿಲ್ಲಿ ಹೈಕೋರ್ಟ್‌ ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ಪುರುಷರ ತಂಡವನ್ನು ಶರತ್‌ ಕಮಲ್‌ ಮುನ್ನಡೆಸಲಿದ್ದಾರೆ.

ಅಮಾನತುಗೊಂಡಿರುವ ಭಾರತೀಯ ಟೇಬಲ್‌ ಟೆನಿಸ್‌ ಫೆಡರೇ ಶನ್‌ನ ಆಡಳಿತ ವ್ಯವಹಾರ ನೋಡಿ ಕೊಳ್ಳುತ್ತಿರುವ ಆಡಳಿತಾಧಿಕಾರಿಗಳ ಸಮಿತಿ (ಸಿಒಎ) ಕಳೆದ ವಾರ ವನಿತೆಯರ ಸಂಭಾವ್ಯ ತಂಡವನ್ನು ಪ್ರಕಟಿಸಿತ್ತು. ಮನಿಕಾ ಬಾತ್ರಾ, ಕಾಮತ್‌, ಶ್ರೀಜಾ ಅಕುಲಾ ಮತ್ತು ರೀತ್‌ ರಿಶ್ಯ ತಂಡದಲ್ಲಿದ್ದರೆ 19ರ ಹರೆಯದ ದಿಯಾ ಚಿತಾಲೆ ಮೀಸಲು ಆಟಗಾರ್ತಿಯಾಗಿದ್ದರು.

ಈ ತಂಡವು ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಅನುಮತಿ ಪಡೆಯ ಬೇಕಿತ್ತು. ಆದರೆ ಸೋಮವಾರ ಕ್ರೀಡಾ ಸಚಿವಾಲಯವು ಚೆಂಡನ್ನು ಮತ್ತೆ ಸಿಒಎ ಅಂಗಳಕ್ಕೆ ಎಸೆದಿದ್ದು ತಂಡದ ಆಯ್ಕೆಯು ರಾಷ್ಟ್ರೀಯ ಕ್ರೀಡಾ ಫೆಡರೇ ಶನ್‌ನ ಜವಾಬ್ದಾರಿಯೆಂದು ಹೇಳಿದೆ.

ಸಿಒಎ ಸದಸ್ಯ ಎಸ್‌.ಡಿ. ಮೌದ್ಗಿಲ್‌ ಅಧ್ಯಕ್ಷತೆಯ ಆಯ್ಕೆ ಸಮಿತಿ ಸೋಮವಾರ ಮತ್ತೆ ಸಭೆ ಸೇರಿ ತಂಡ ವನ್ನು ಅಂತಿಮಗೊಳಿಸಿದೆ. ಮನಿಕಾ ಜತೆ ಡಬಲ್ಸ್‌ನಲ್ಲಿ ಆಡಬೇಕಿದ್ದ ಕಾಮತ್‌ ಅವರನ್ನು ತಂಡದಿಂದ ಕೈಬಿಡಲಾಗಿದ್ದು ಸ್ವಸ್ತಿಕಾ ಘೋಷ್‌ ಅವರನ್ನು ಮೀಸಲು ಆಟಗಾರ್ತಿಯನ್ನಾಗಿ ಹೆಸರಿಸಲಾಗಿದೆ.

ತಂಡದಲ್ಲಿ ಕೇವಲ ಒಂದು ಮಾತ್ರ ಬದಲಾವಣೆ ಮಾಡಲಾಗಿದೆ. ಅರ್ಚನಾ ಅವರ ಬದಲಿಗೆ ದಿಯಾ ನಾಲ್ಕನೇ ಆಟಗಾರ್ತಿಯಾಗಿ ತಂಡಕ್ಕೆ ಬಂದಿದ್ದಾರೆ. ಪದಕ ಗೆಲ್ಲುವ ಭರವಸೆ ಇದ್ದರೂ ಅರ್ಚನಾ ತಂಡಕ್ಕೆ ಆಯ್ಕೆಯಾಗಬೇಕಾದ ಮಾನದಂಡ ವನ್ನು ಪೂರೈಸಿಲ್ಲ.. ಹೀಗಾಗಿ ಅವರ ಆಯ್ಕೆ ಬಗ್ಗೆ ನಮ್ಮಲ್ಲಿ ಗೊಂದಲ ವಿತ್ತು. ಹೀಗಾಗಿ ಸಾಯ್‌ ಅವರ ಮಾರ್ಗ ದರ್ಶನ ಪಡೆಯಲು ತೀರ್ಮಾನಿಸಿದ್ದೆವು ಎಂದು ಮೌದ್ಗಿಲ್‌ ಹೇಳಿದರು.

ತಂಡಗಳು 
ಪುರುಷರು: ಶರತ್‌ ಕಮಲ್‌, ಜಿ. ಸಥಿಯನ್‌, ಹರ್ಮೀತ್‌ ದೇಸಾಯಿ, ಸನಿಲ್‌ ಶೆಟ್ಟಿ, ಮನುಷ್‌ ಶಾ (ಮೀಸಲು ಆಟಗಾರ).
ವನಿತೆಯರು: ಮನಿಕಾ ಬಾತ್ರಾ, ದಿಯಾ ಚಿತಾಲೆ, ರೀತ್‌ ರಿಶ್ಯ, ಶ್ರೀಜಾ ಅಕುಲಾ, ಸ್ವಸ್ತಿಕಾ ಘೋಷ್‌ (ಮೀಸಲು ಆಟಗಾರ್ತಿ).

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.