Ranji; ತಮಿಳುನಾಡು ವಿರುದ್ಧ ಪಡಿಕ್ಕಲ್‌ ಅಜೇಯ 151 ರನ್‌ ಪರಾಕ್ರಮ


Team Udayavani, Feb 10, 2024, 12:04 AM IST

1-dsasads

ಚೆನ್ನೈ: ಭಾರತ “ಎ’ ತಂಡದ ಪರ ಯಶಸ್ವಿ ಅಭಿಯಾನ ಮುಗಿಸಿ ಬಂದ ಕರ್ನಾಟಕದ ಎಡಗೈ ಬ್ಯಾಟರ್‌ ದೇವದತ್ತ ಪಡಿಕ್ಕಲ್‌ ರಣಜಿಯಲ್ಲಿ ಶತಕದ ಆಟವನ್ನು ಮುಂದುವರಿಸಿದ್ದಾರೆ. ಆತಿಥೇಯ ತಮಿಳುನಾಡು ವಿರುದ್ಧ ಆರಂಭಗೊಂಡ “ಸಿ’ ವಿಭಾಗದ ರಣಜಿ ಪಂದ್ಯದಲ್ಲಿ ಅಜೇಯ 151 ರನ್‌ ಬಾರಿಸಿ ಕರ್ನಾಟಕದ ರಕ್ಷಣೆಗೆ ನಿಂತಿದ್ದಾರೆ. ಮೊದಲ ದಿನದಾಟದಲ್ಲಿ ಅಗರ್ವಾಲ್‌ ಪಡೆ 5 ವಿಕೆಟಿಗೆ 288 ರನ್‌ ಪೇರಿಸಿ ಸುಸ್ಥಿತಿಯಲ್ಲಿ ನೆಲೆಸಿದೆ.

ವನ್‌ಡೌನ್‌ನಲ್ಲಿ ಬ್ಯಾಟ್‌ ಹಿಡಿದು ಬಂದ ಪಡಿಕ್ಕಲ್‌ ತಮಿಳುನಾಡು ಬೌಲರ್‌ಗಳಿಗೆ ಸವಾಲಾಗುತ್ತಲೇ ಹೋದರು. 216 ಎಸೆತಗಳನ್ನು ನಿಭಾಯಿಸಿದ ಅವರು 12 ಬೌಂಡರಿ ಮತ್ತು 6 ಪ್ರಚಂಡ ಸಿಕ್ಸರ್‌ ನೆರವಿನಿಂದ 151 ರನ್‌ ಬಾರಿಸಿದ್ದಾರೆ. ಇದು ಪ್ರಸಕ್ತ ರಣಜಿ ಋತುವಿನಲ್ಲಿ ಪಡಿಕ್ಕಲ್‌ ಹೊಡೆದ 3ನೇ ಶತಕ. ಈ ನಡುವೆ ಇಂಗ್ಲೆಂಡ್‌ ಲಯನ್ಸ್‌ ಎದುರಿನ 2 ಪಂದ್ಯಗಳಲ್ಲಿ ಒಂದು ಶತಕ ಹಾಗೂ ಅರ್ಧ ಶತಕ ಬಾರಿಸಿ ತಮ್ಮ ಉಜ್ವಲ ಬ್ಯಾಟಿಂಗ್‌ ಫಾರ್ಮ್ ತೆರೆದಿರಿಸಿದ್ದರು.

132 ರನ್‌ ಜತೆಯಾಟ
ಆರಂಭಕಾರ ಆರ್‌. ಸಮರ್ಥ್ 57 ರನ್‌ ಕೊಡುಗೆ ಸಲ್ಲಿಸಿದರು (159 ಎಸೆತ, 5 ಬೌಂಡರಿ). ಸಮರ್ಥ್-ಪಡಿಕ್ಕಲ್‌ ಜೋಡಿಯಿಂದ 2ನೇ ವಿಕೆಟಿಗೆ 132 ರನ್‌ ಹರಿದು ಬಂತು. ಅಗರ್ವಾಲ್‌ 20, ನಿಕಿನ್‌ ಜೋಸ್‌ 13, ಮನೀಷ್‌ ಪಾಂಡೆ 1, ಕಿಶನ್‌ ಬೆಡಾರೆ 3 ರನ್‌ ಮಾಡಿ ಪೆವಿಲಿಯನ್‌ ಸೇರಿಕೊಂಡಿದ್ದಾರೆ. ಪಡಿಕ್ಕಲ್‌ ಅವರೊಂದಿಗೆ ಬ್ಯಾಟಿಂಗ್‌ ಕಾಯ್ದುಕೊಂಡಿರುವವರು 35 ರನ್‌ ಮಾಡಿರುವ ಹಾರ್ದಿಕ್‌ ರಾಜ್‌. ಇವರಿಬ್ಬರು ಸೇರಿ 6ನೇ ವಿಕೆಟಿಗೆ 54 ರನ್‌ ಒಟ್ಟುಗೂಡಿಸಿದ್ದಾರೆ.

ತಮಿಳುನಾಡು ಪರ ಆರ್‌. ಸಾಯಿ ಕಿಶೋರ್‌ 3, ಎಸ್‌. ಅಜಿತ್‌ ರಾಮ್‌ 2 ವಿಕೆಟ್‌ ಉರುಳಿಸಿದರು. ಕೊನೆಯ ಅವಧಿಯಲ್ಲಿ ತಮಿಳುನಾಡು 3 ವಿಕೆಟ್‌ ಉರುಳಿಸಿದ ಕಾರಣ ಒಂದಿಷ್ಟು ಸಮಾಧಾನಪಟ್ಟಿತು.
ಇದು “ಸಿ’ ವಿಭಾಗದಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳ ಮುಖಾಮುಖೀಯಾದ ಕಾರಣ ತೀವ್ರ ಕುತೂಹಲ ಮೂಡಿಸಿದೆ.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ-5 ವಿಕೆಟಿಗೆ 288 (ಪಡಿಕ್ಕಲ್‌ ಬ್ಯಾಟಿಂಗ್‌ 151, ಸಮರ್ಥ್ 57, ಹಾರ್ದಿಕ್‌ ಬ್ಯಾಟಿಂಗ್‌ 35, ಅಗರ್ವಾಲ್‌ 20, ಸಾಯಿ ಕಿಶೋರ್‌ 94ಕ್ಕೆ 3, ಅಜಿತ್‌ ರಾಮ್‌ 53ಕ್ಕೆ 2).

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.