ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
Team Udayavani, Mar 12, 2019, 12:30 AM IST
ಹೊಸದಿಲ್ಲಿ: ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕ್ರೀಡಾ ಸಾಧಕರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.
ಚಾಂಪಿಯನ್ ರೆಸ್ಲರ್ ಭಜರಂಗ್ ಪೂನಿಯ, ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್, ಚೆಸ್ ಗ್ರ್ಯಾನ್ಮಾಸ್ಟರ್ ದ್ರೋಣವಲ್ಲಿ ಹರೀಕಾ, ಭಾರತದ ಕಬಡ್ಡಿ ತಂಡದ ನಾಯಕ ಅಜಯ್ ಠಾಕೂರ್ ಅವರೆಲ್ಲ ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕೃತರಾದರು.
ಹಿರಿಯ ಪರ್ವತಾರೋಹಿ ಬಚೇಂದ್ರಿ ಪಾಲ್ ಪದ್ಮಭೂಷಣಕ್ಕೆ ಭಾಜನರಾದರು. ಉಳಿದವರಿಗೆ ಮಾ. 16ರಂದು ನಡೆಯುವ ಮತ್ತೂಂದು ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗೃಹ ಕಚೇರಿಯ ಪ್ರಕಟನೆ ತಿಳಿಸಿದೆ.
ಕಳೆದ ಗಣರಾಜ್ಯೋತ್ಸವದಂದು ಒಟ್ಟು 112 ಮಂದಿ ವಿವಿಧ ಸಾಧಕರನ್ನು ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಪದ್ಮಶ್ರೀಗೆ ಆಯ್ಕೆಯಾದ ಉಳಿದ ಕ್ರೀಡಾಪಟುಗಳೆಂದರೆ ಫುಟ್ಬಾಲಿಗ ಸುನೀಲ್ ಚೆಟ್ರಿ, ಕ್ರಿಕೆಟಿಗ ಗೌತಮ್ ಗಂಭೀರ್, ಬಿಲ್ಲುಗಾರ್ತಿ ಬೊಂಬಾಯ್ಲದೇವಿ ಲೈಶ್ರಮ್ ಮತ್ತು ಬಾಸ್ಕೆಟ್ಬಾಲ್ ಆಟಗಾರ್ತಿ ಪ್ರಶಾಂತಿ ಸಿಂಗ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!