Asia Cup ; 2 ವಿಕೆಟ್ ಕಳೆದುಕೊಂಡ ಪಾಕ್: ಮತ್ತೆ ಮಳೆ ಅಡ್ಡಿ
Team Udayavani, Sep 11, 2023, 8:30 PM IST
ಕೊಲಂಬೊ: ಇಲ್ಲಿನ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ- ಪಾಕಿಸ್ಥಾನ ನಡುವಿನ ಏಷ್ಯಾ ಕಪ್ ಸೂಪರ್ ಫೋರ್ ಮೀಸಲು ದಿನದ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಯಾಗಿದೆ.357 ರನ್ ಗಳ ಸವಾಲು ಪಡೆದಿರುವ ಪಾಕಿಸ್ಥಾನ 11ಓವರ್ ಗಳಲ್ಲಿ 44 ರನ್ ಗಳಿಗೆ 2 ವಿಕೆಟ್ ಕಳೆದು ಕೊಂಡಿದೆ.ಈ ವೇಳೆ ಮಳೆ ಸುರಿದು ಪಂದ್ಯಕ್ಕೆ ಅಡಚಣೆಯಾಗಿದೆ.
9 ರನ್ ಗಳಿಸಿದ್ದ ವೇಳೆ ಇಮಾಮ್-ಉಲ್-ಹಕ್ ಅವರನ್ನು ಬುಮ್ರಾ ಔಟ್ ಮಾಡಿದರು. ಬುಮ್ರಾ ಎಸೆದ ಚೆಂಡು ಹಕ್ ಬ್ಯಾಟ್ ಗೆ ತಗುಲಿ ಶುಭ್ ಮನ್ ಗಿಲ್ ಅವರ ಕೈಸೇರಿತು. 10 ರನ್ ಗಳಿಸಿದ್ದ ನಾಯಕ ಬಾಬರ್ ಆಜಂ ಅವರನ್ನು ಹಾರ್ದಿಕ್ ಪಾಂಡ್ಯ ಬೌಲ್ಡ್ ಮಾಡಿ ಶಾಕ್ ನೀಡಿದರು.
ಭಾನುವಾರ ಭಾರಿ ಮಳೆಯ ಕಾರಣದಿಂದಾಗಿ ಭಾನುವಾರ ನಡೆಯಬೇಕಾಗಿದ್ದ ಪಂದ್ಯ ಮೀಸಲು ದಿನವಾದ ಸೋಮವಾರ ಆಡಲಾಗುತ್ತಿದೆ.
ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಅತ್ಯಮೋಘ ಶತಕಗಳನ್ನು ಸಿಡಿಸಿ ಭಾರತದ ಬ್ಯಾಟಿಂಗ್ ಬಲ ಸಾಬೀತುಪಡಿಸಿದ್ದಾರೆ. ಭಾರತ 50 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 356 ರನ್ ಗಳ ಸವಾಲಿನ ಮೊತ್ತವನ್ನು ಕಲೆಹಾಕಿತು.ನಾಯಕ ರೋಹಿತ್ ಶರ್ಮಾ 56 ರನ್ ಶುಭಮನ್ ಗಿಲ್ 58 ರನ್ ಗಳಿಸಿ ಔಟಾಗಿದ್ದರು.
ಕೊಹ್ಲಿ 122 ರನ್ ಗಳಿಸಿ ಅಜೇಯರಾಗಿ ಉಳಿದರು.93 ಎಸೆತಗಳಲ್ಲಿ ಆಕರ್ಷಕ 9 ಬೌಂಡರಿ ಮತ್ತು 3 ಸಿಕ್ಸರ್ ಅವರ ಇನ್ನಿಂಗ್ಸ್ ನ ಆಕರ್ಷಣೆಯಾಗಿತ್ತು. ಜವಾಬ್ದಾರಿಯುತ ಆಟವಾಡಿದ ರಾಹುಲ್ ಅಜೇಯ 111 ರನ್ ಗಳಿಸಿದರು.106 ಎಸೆತಗಳಲ್ಲಿ 12 ಬೌಂಡರಿ ಮತ್ತು 2 ಸಿಕ್ಸರ್ ಅವರ ಆಟದ ಆಕರ್ಷಣೆಯಾಗಿತ್ತು. 3 ನೇ ವಿಕೆಟ್ ಗೆ ಇಬ್ಬರು 233 ರನ್ ಜತೆಯಾಟವಾಡಿದ್ದು ಇದು ಏಷ್ಯಾ ಕಪ್ ಇತಿಹಾಸದಲ್ಲಿ ಭಾರತದ ಅತೀ ದೊಡ್ಡ ಜತೆಯಾಟವಾಗಿದೆ.
ನಿನ್ನೆ ಪಂದ್ಯ ಮುಂದೂಡಿಕೆಯಾದ ವೇಳೆ 24.1 ಓವರ್ ಗಳಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು. 8 ರನ್ ಗಳಿಸಿದ್ದ ಕೊಹ್ಲಿ ಮತ್ತು 17 ರನ್ ಗಳಿಸಿದ್ದ ರಾಹುಲ್ ಆಕರ್ಷಕ ಜತೆಯಾಟವನ್ನು ಆಡಿದರು.ಪಾಕಿಸ್ಥಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ