ಅಂಧರ ಟಿ-20 ವಿಶ್ವಕಪ್‌ ಕ್ರಿಕೆಟ್‌ ಪಾಕಿಸ್ಥಾನವನ್ನು ಮಣಿಸಿದ ಭಾರತ 


Team Udayavani, Feb 13, 2017, 3:45 AM IST

PTI2_12_2017_000119B.jpg

ಬೆಂಗಳೂರು: ಲೀಗ್‌ ಹಂತದಿಂದಲೂ ಸೋಲಿಲ್ಲದ ಸರದಾರನಾಗಿ ಮಿಂಚಿದ್ದ ಪಾಕಿಸ್ಥಾನ ತಂಡವನ್ನು ರವಿವಾರದ ಪ್ರಶಸ್ತಿ ಕಾಳಗದಲ್ಲಿ 9 ವಿಕೆಟ್‌ಗಳಿಂದ ಮಣಿಸಿದ ಭಾರತ ಸತತ 2ನೇ ಬಾರಿಗೆ ಅಂಧರ ಟಿ-20 ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಆಗಿದೆ.

ರವಿವಾರ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಮೊದಲು  ಬ್ಯಾಟಿಂಗ್‌ ಮಾಡಿದ ಪಾಕಿಸ್ಥಾನ ಅಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿ 9 ವಿಕೆಟಿಗೆ 197 ರನ್‌ ಪೇರಿಸಿತು. ಜವಾಬಿತ್ತ ಭಾರತ 17.4 ಓವರ್‌ಗಳಲ್ಲಿ ಒಂದೇ ವಿಕೆಟ್‌ ನಷ್ಟಕ್ಕೆ 200 ರನ್‌ ಬಾರಿಸಿ ವಿಜಯೋತ್ಸವ ಆಚರಿಸಿತು.

ಭಾರತ 2012ರ ಪ್ರಥಮ ಅಂಧರ ಟಿ-20 ವಿಶ್ವಕಪ್‌ ಪಂದ್ಯಾವಳಿಯಲ್ಲೂ ಪಾಕಿಸ್ಥಾನವನ್ನೇ ಮಣಿಸಿ ಚಾಂಪಿಯನ್‌ ಆಗಿತ್ತು. 5 ವರ್ಷಗಳ ಬಳಿಕ ನಡೆದ ಹೋರಾಟದಲ್ಲಿ ಪಾಕಿಗೆ ಸೇಡು ತೀರಿಸಿಕೊಳ್ಳಲಾಗಲಿಲ್ಲ. ಬದಲಿಗೆ, ಲೀಗ್‌ ಹಂತದಲ್ಲಿ ಪಾಕಿಸ್ಥಾನ ವಿರುದ್ಧ ಅನುಭವಿಸಿದ ಸೋಲಿಗೆ ಭಾರತವೇ ಸೇಡು ತೀರಿಸಿಕೊಂಡಿತು! ಪಾಕಿಸ್ಥಾನ ಅಜೇಯವಾಗಿ ಫೈನಲ್‌ ಪ್ರವೇಶಿಸಿತ್ತು. ಆದರೆ ನಿರ್ಣಾಯಕ ಹಂತದಲ್ಲಿ ಎಡವಿತು.

ಫೈನಲ್‌ನಲ್ಲಿ ಭಾರತೀಯ ಆಟಗಾರರು ಅತ್ಯುತ್ತಮ ಕ್ಷೇತ್ರರಕ್ಷಣೆ ಮೂಲಕ ಗಮನ ಸೆಳೆದರು. ಬಿಗು ಫೀಲ್ಡಿಂಗ್‌ ಸಂಘಟಿಸಿ ಸಾಕಷ್ಟು ರನ್‌ ನಿಯಂತ್ರಿಸಿದರು. ಹೀಗಾಗಿ ಪಾಕ್‌ ಸ್ಕೋರ್‌ 197 ರನ್ನಿಗೆ ನಿಂತಿತು.

ಪ್ರಕಾಶ್‌, ಅಜಯ್‌ ಮತ್ತೆ ಮಿಂಚು
ಚೇಸಿಂಗ್‌ ಹಾದಿಯಲ್ಲಿ ಆರಂಭಿಕಾರಾದ ಕನ್ನಡಿಗ ಪ್ರಕಾಶ್‌ ಜಯರಾಮಯ್ಯ (ಅಜೇಯ 99) ಮತ್ತು ಅಜಯ್‌ ಕುಮಾರ್‌ ರೆಡ್ಡಿ (43) ಭಾರತಕ್ಕೆ ಮತ್ತೂಮ್ಮೆ ನೆರವಾದರು. ಲೀಗ್‌ ಹಂತದಿಂದಲೂ ಅತ್ಯುತ್ತಮ ಪ್ರದರ್ಶನ ನೀಡುತ್ತ ಬಂದಿದ್ದ ಪ್ರಕಾಶ್‌ ಕೇವಲ ಒಂದು ರನ್ನಿನಿಂದ ಶತಕ ವಂಚಿತರಾದರು. ಅಷ್ಟರಲ್ಲಿ ಭಾರತದ ಜಯಭೇರಿ ಮೊಳಗಲ್ಪಟ್ಟಿತತ್ತು.

ಅಜಯ್‌ ಕುಮಾರ್‌ ರೆಡ್ಡಿ ಜತೆಗೂಡಿದ ಪ್ರಕಾಶ್‌ ಮೊದಲ ವಿಕೆಟಿಗೆ 110 ರನ್‌ ಜತೆಯಾಟ ನಡೆಸಿ ಭಾರತದ ಗೆಲುವನ್ನು ಖಾತ್ರಿ ಪಡಿಸಿದ್ದರು. ತಂಡದ ಮೊತ್ತ 110  ರನ್‌ ಆಗಿದ್ದಾಗ ಅಜಯ್‌ ರನೌಟಾದರು. ಅನಂತರ ಬಂದ ಕೇತನ್‌ ಪಟೇಲ್‌ 26 ರನ್‌ ಮಾಡಿ ಗಾಯಾಳಾಗಿ ಹೊರ ನಡೆದರು. ಬಳಿಕ ಡಿ. ವೆಂಕಟೇಶ್‌ ಅವರನ್ನು ಕೂಡಿಕೊಂಡ ಪ್ರಕಾಶ್‌ ತಂಡವನ್ನು ದಡ ಸೇರಿಸಿದರು. ಪಾಕಿಸ್ಥಾನದ ಯಾವುದೇ ಬೌಲರಿಗೂ ಭಾರತವನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ.

ಪಾಕಿಸ್ಥಾನದ ಆರಂಭಿಕರಾದ ಬಾದರ್‌ ಮುನೀರ್‌ (57  ರನ್‌) ಮತ್ತು ಮೊಹಮ್ಮದ್‌ ಜಮೀಲ್‌ (5 ರನ್‌) 58 ರನ್‌ ಜತೆಯಾಟ ನೀಡಿದರು. ಇವರಿಬ್ಬರು ಕ್ರೀಸ್‌ ಆಕ್ರಮಿಸಿಕೊಂಡು ನಿಂತರು ಎನ್ನುವಷ್ಟರಲ್ಲಿ ಗಣೇಶ್‌ ಮಿಂಚಿನ ಕ್ಷೇತ್ರರಕ್ಷಣೆ ನಡೆಸಿ ಜಮೀಲ್‌ ಅವರನ್ನು ರನೌಟ್‌ ಮಾಡಿದರು. ಅನಂತರ ಬಾದರ್‌ ಬಿರುಸಿನ ಬ್ಯಾಟಿಂಗ್‌ ಪ್ರದರ್ಶಿಸಿದರಾದರೂ ಅವರಿಗೆ ಸೂಕ್ತ ಜತೆಗಾರನ ಕೊರತೆ ಕಾಡಿತು. ಅರ್ಧ ಶತಕ ದಾಖಲಿಸಿದ ಬಾದರ್‌ (57) ತಂಡದ ಮೊತ್ತ 118 ರನ್‌ ಆಗಿದ್ದಾಗ ಬೌಂಡರಿ ಬಳಿ ಕೇತನ್‌ ಪಟೇಲ್‌ ಪಡೆದ ಅದ್ಭುತ ಕ್ಯಾಚ್‌ಗೆ ಔಟಾಗುತ್ತಿದ್ದಂತೆ ಪಾಕಿಸ್ಥಾನ ನಾಟಕೀಯ ಕುಸಿತ ಕಂಡಿತು.

ಸಂಕ್ಷಿಪ್ತ ಸ್ಕೋರ್‌:  ಪಾಕಿಸ್ಥಾನ- 20 ಓವರ್‌ಗಳಲ್ಲಿ 9 ವಿಕೆಟಿಗೆ 197 (ಬಾದರ್‌ 57, ಆಮಿರ್‌ 20, ಕೇತನ್‌ 29ಕ್ಕೆ 2). ಭಾರತ-17.4 ಓವರ್‌ಗಳಲ್ಲಿ ಒಂದು ವಿಕೆಟಿಗೆ 200 (ಪ್ರಕಾಶ್‌ ಅಜೇಯ 99, ಅಜಯ್‌ 43).

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.