ಲಾಹೋರ್‌ನಲ್ಲೂ ಪಾಕ್‌ ಪರಾಕ್ರಮ


Team Udayavani, Oct 31, 2017, 6:25 AM IST

PAk-win-30.jpg

ಲಾಹೋರ್‌: ಎಂಟು ವರ್ಷಗಳ ಹಿಂದೆ ಕ್ರಿಕೆಟ್‌ ದುರಂತವೊಂದಕ್ಕೆ ಸಾಕ್ಷಿಯಾದ ಲಾಹೋರ್‌ನಲ್ಲಿ ನಿರ್ವಿಘ್ನವಾಗಿ ಟಿ20 ಪಂದ್ಯವೊಂದು ನಡೆದಿದೆ. ಆದರೆ ಅಂದು ಭಯೋತ್ಪಾದಕ ದಾಳಿಗೊಳಗಾದ ಶ್ರೀಲಂಕಾ ತಂಡ ಮಾತ್ರ ಈ ಪಂದ್ಯವನ್ನೂ ಕಳೆದುಕೊಂಡು 3-0 ಕ್ಲೀನ್‌ ಸ್ವೀಪ್‌ ದುರಂತಕ್ಕೆ ಸಿಲುಕಿದೆ.

ಇಲ್ಲಿನ “ಗದ್ದಾಫಿ ಸ್ಟೇಡಿಯಂ’ನಲ್ಲಿ ರವಿವಾರ ರಾತ್ರಿ ನಡೆದ ಪಂದ್ಯದಲ್ಲಿ ಪಾಕಿಸ್ಥಾನ 36 ರನ್ನುಗಳ ಜಯ ಸಾಧಿಸಿತು. ತವರಿನ ಅಪರೂಪದ ಅಂತಾರಾಷ್ಟ್ರೀಯ ಪಂದ್ಯವನ್ನು ಕಾಣಲು ಕಿಕ್ಕಿರಿದು ನೆರೆದಿದ್ದ ವೀಕ್ಷಕರ ಸಮ್ಮುಖದಲ್ಲಿ ಮೊದಲು ಬ್ಯಾಟ್‌ ಮಾಡಿದ ಪಾಕಿಸ್ಥಾನ 3 ವಿಕೆಟಿಗೆ 180 ರನ್‌ ಪೇರಿಸಿ ಸವಾಲೊಡ್ಡಿದರೆ, ಶ್ರೀಲಂಕಾ 9ಕ್ಕೆ 144 ರನ್‌ ಗಳಿಸಿ ಶರಣಾಯಿತು. ಸರಣಿಯ ಮೊದಲೆರಡು ಪಂದ್ಯ ಅಬುದಾಭಿಯಲ್ಲಿ ನಡೆದಿತ್ತು. 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡ ಶ್ರೀಲಂಕಾ ಅನಂತರ ಸತತವಾಗಿ ಸೋಲನ್ನೇ ಕಾಣುತ್ತ ಬಂದಿತ್ತು. ಇದಕ್ಕೂ ಹಿಂದಿನ ಏಕದಿನ ಸರಣಿಯನ್ನೂ ಪಾಕ್‌ 5-0 ಅಂತರದಿಂದ ಗೆದ್ದಿತ್ತು.

ಮಲಿಕ್‌ ಮಿಂಚಿನ ಆಟ
ಪಾಕಿಸ್ಥಾನದ ದೊಡ್ಡ ಮೊತ್ತಕ್ಕೆ ಕಾರಣವಾದದ್ದು ಶೋಯಿಬ್‌ ಮಲಿಕ್‌ ಅವರ ಬಿರುಸಿನ ಬ್ಯಾಟಿಂಗ್‌. 4ನೇ ಕ್ರಮಾಂಕದಲ್ಲಿ ಆಡಲಿಳಿದ ಮಲಿಕ್‌ ಕೇವಲ 24 ಎಸೆತಗಳಿಂದ 51 ರನ್‌ ಸಿಡಿಸಿದರು (5 ಬೌಂಡರಿ, 2 ಸಿಕ್ಸರ್‌). ಫ‌ಕರ್‌ ಜಮಾನ್‌ (31) ಮತ್ತು ಉಮರ್‌ ಅಮಿನ್‌ (45) ಮೊದಲ ವಿಕೆಟಿಗೆ 8 ಓವರ್‌ಗಳಿಂದ 57 ರನ್‌ ಪೇರಿಸಿದರು. ಬಾಬರ್‌ ಆಜಂ ಗಳಿಕೆ ಅಜೇಯ 34 ರನ್‌. ಪಾಕ್‌ ಬ್ಯಾಟಿಂಗಿಗೆ ಕಡಿವಾಣ ಹಾಕಲು ಲಂಕಾ 8 ಮಂದಿಯನ್ನು ದಾಳಿಗಿಳಿಸಿತಾದರೂ ಯಶಸ್ಸು ಕಾಣಲಿಲ್ಲ.

4 ಓವರ್‌ ಆಗುವಷ್ಟರಲ್ಲಿ 21 ರನ್ನಿಗೆ 3 ವಿಕೆಟ್‌ ಉದುರಿಸಿಕೊಂಡ ಶ್ರೀಲಂಕಾವನ್ನು ದಸುನ್‌ ಶಣಕ (51) ಮೇಲೆತ್ತುವ ಪ್ರಯತ್ನ ಮಾಡಿದರೂ ಇವರದು ಏಕಾಂಗಿ ಹೋರಾಟವೆನಿಸಿತು. ಚತುರಂಗ ಡಿ ಸಿಲ್ವ 21 ರನ್‌ ಮಾಡಿದರು. ವೇಗಿ ಮೊಹಮ್ಮದ್‌ ಆಮಿರ್‌ 13 ರನ್ನಿಗೆ 4 ವಿಕೆಟ್‌ ಹಾರಿಸಿ ಘಾತಕವಾಗಿ ಪರಿಣಮಿಸಿದರು.

ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ ಪ್ರಶಸ್ತಿಗಳೆರಡು ಶೋಯಿಬ್‌ ಮಲಿಕ್‌ ಪಾಲಾದವು.

ಸಂಕ್ಷಿಪ್ತ ಸ್ಕೋರ್‌: ಪಾಕಿಸ್ಥಾನ-3 ವಿಕೆಟಿಗೆ 180 (ಮಲಿಕ್‌ 51, ಅಮಿನ್‌ 45, ಬಾಬರ್‌ 34, ಮುನವೀರ 26ಕ್ಕೆ 1). ಶ್ರೀಲಂಕಾ-9 ವಿಕೆಟಿಗೆ 144 (ಶಣಕ 54, ಚತುರಂಗ 21, ಆಮಿರ್‌ 13ಕ್ಕೆ 4, ಅಶ್ರಫ್ 19ಕ್ಕೆ 2).
 
ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ:
ಶೋಯಿಬ್‌ ಮಲಿಕ್‌.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.