ಮಹೇಂದ್ರ ಸಿಂಗ್ ಧೋನಿಯಂತಹ ನಾಯಕ ನಮ್ಮಲ್ಲೂ ಇರಬೇಕಿತ್ತು: ಪಾಕ್ ಆಟಗಾರ
Team Udayavani, Aug 20, 2020, 11:57 AM IST
ಇಸ್ಲಾಮಾಬಾದ್: ಕ್ರಿಕೆಟ್ ವಿಶ್ವದಲ್ಲಿ ಈಗ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರದ್ದೇ ಮಾತುಗಳು. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ರಾಜೀನಾಮೆ ನೀಡುತ್ತಿದ್ದಂತೆ ಕೂಲ್ ಕ್ಯಾಪ್ಟನ್ ನ ಗುಣಗಾನ ಆರಂಭವಾಗಿದೆ. ಇದೀಗ ಪಾಕ್ ಆಟಗಾರನೋರ್ವ ಈ ಬಗ್ಗೆ ಮಾತನಾಡಿದ್ದು, ಪಾಕಿಸ್ಥಾನ ತಂಡದಲ್ಲೂ ಧೋನಿಯಂತಹ ನಾಯಕನೋರ್ವ ಇರಬೇಕಿತ್ತು ಎಂದು ಹೇಳಿಕೊಂಡಿದ್ದಾರೆ.
ಪಾಕ್ ನ ವಿಕೆಟ್ ಕೀಪರ್ ಕಮ್ರಾನ್ ಅಕ್ಮಲ್ ಇದೀಗ ಧೋನಿ ಬಗ್ಗೆ ಮಾತನಾಡಿದ್ದಾರೆ. ಧೋನಿ ತಂಡವನ್ನು ತನ್ನ ಜೊತೆಗೆ ಮುನ್ನಡೆಸುತ್ತಿದ್ದರು. ಇದು ಅವರ ವಿಶೇಷತೆಯಾಗಿತ್ತು ಎಂದು ಕಮ್ರಾನ್ ಅಕ್ಮಲ್ ಹೇಳಿಕೊಂಡಿದ್ದಾರೆ.
ತಂಡದ ನಾಯಕತ್ವ ಮಾಡುವುದು ಸುಲಭ. ತಂಡ ಗೆಲ್ಲಲಿ ಸೋಲಲಿ, ನಾಯಕನ ಸ್ಥಾನ ತಂಡದಲ್ಲಿ ಭದ್ರವಾಗಿರುತ್ತದೆ. ಅದರೆ ಧೋನಿ ತಂಡವನ್ನು ಗೆಲುವಿನಡೆಗೆ ಕೊಂಡೊಯ್ಯುತ್ತಿದ್ದರು. ಆಷ್ಟೇ ಅಲ್ಲದೆ ವೈಯಕ್ತಿಕವಾಗಿಯೂ ಉತ್ತಮ ಪ್ರದರ್ಶನ ನೀಡುತ್ತಿದ್ದರು ಎಂದು ಕಮ್ರಾನ್ ಹೇಳಿದ್ದಾರೆ.
ಧೋನಿ ನಾಯಕನಾಗಿ ಓರ್ವ ಉತ್ತಮ ಉದಾಹರಣೆ. ಪಾಕಿಸ್ಥಾನ ತಂಡಕ್ಕೂ ಭವಿಷ್ಯದಲ್ಲಿ ಮಹೇಂದ್ರ ಸಿಂಗ್ ಧೋನಿಯಂತಹ ನಾಯಕನ ಅಗತ್ಯವಿದೆ ಎಂದು ಹೇಳಿದ್ದಾರೆ. ಇದಲ್ಲದೆ ಧೋನಿಗೆ ವಿದಾಯ ಪಂದ್ಯವನ್ನು ಆಯೋಜಿಸಿ ಗೌರವ ಸಲ್ಲಿಸಬೇಕು ಎಂದು ಕಮ್ರಾನ್ ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ