Asia Cup ವಿಚಾರದಲ್ಲಿ ಮೊಂಡು ಹಠ ಹಿಡಿದ ಪಾಕ್: ವಿಶ್ವಕಪ್ ನಲ್ಲಿ ಆಡುವುದೂ ಡೌಟ್


Team Udayavani, Jul 9, 2023, 11:25 AM IST

Pakistan May Withdraw From ICC Cricket World Cup 2023

ಲಾಹೋರ್: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಬಿಸಿಸಿಐ ಮತ್ತು ಐಸಿಸಿ ತಯಾರಿಯಲ್ಲಿ ತೊಡಗಿದೆ. ಆದರೆ ನೆರ ರಾಷ್ಟ್ರ ಪಾಕಿಸ್ತಾನವು ಮತ್ತೆ ತನ್ನ ಬುದ್ದಿ ತೋರಿಸಿದ್ದು, ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ತಗಾದೆ ತೆಗೆದಿದೆ.

ಐಸಿಸಿ ಈಗಾಗಲೇ ವಿಶ್ವಕಪ್ ಕೂಟದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಾಕಿಸ್ತಾನವು ಭಾರತದ ವಿರುದ್ಧ ಪಂದ್ಯವನ್ನು ಅಹಮದಾಬಾದ್ ನಲ್ಲಿ ಆಡಲಿದೆ. ಬೆಂಗಳೂರು, ಚೆನ್ನೈ ಸೇರಿ ಐದು ನಗರಗಳಲ್ಲಿ ತನ್ನ ಲೀಗ್ ಪಂದ್ಯಗಳನ್ನು ಆಡಲಿದೆ. ಆದರೆ ಇದೀಗ ಪಾಕಿಸ್ತಾನವು ಈ ಕೂಟದಲ್ಲಿ ಆಡುವುದೇ ಅನುಮಾನ ಎನ್ನಲಾಗಿದೆ.

ಪಾಕಿಸ್ತಾನದ ಕ್ರೀಡಾ ಸಚಿವ ಎಹ್ಸಾನ್ ಮಜಾರಿ ಅವರು ಭಾರತೀಯ ಪತ್ರಿಕೆಯೊಂದಿಗೆ ಮಾತನಾಡುತ್ತಾ, ಏಷ್ಯಾಕಪ್ ಆಡಲು ಭಾರತವು ಗಡಿ ದಾಟಿ ಪಾಕ್ ಗೆ ಬರದಿದ್ದರೆ, ನಾವೂ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಹೇಳಿದ್ದಾರೆ.

ರಕ್ಷಣಾ ಕಾರಣದಿಂದ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ಕಾರಣದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಮಾಜಿ ಮುಖ್ಯಸ್ಥ ನಜಮ್ ಸೇಥಿ ಅವರು ಏಷ್ಯಾ ಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಡಲು ಒಪ್ಪಿಕೊಂಡಿದ್ದರು. ಈ ಮಾದರಿಯ ಅಡಿಯಲ್ಲಿ, ಆತಿಥ್ಯ ಹಕ್ಕು ಹೊಂದಿರುವ ಪಾಕಿಸ್ತಾನವು ಈಗ ಕೇವಲ 4 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ ಮತ್ತು ಶ್ರೀಲಂಕಾ ಏಷ್ಯಾ ಕಪ್‌ನ 9 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ.

ಆದರೆ ಇದೀಗ ಕ್ರೀಡಾ ಸಚಿವ ಮಜಾರಿ ಅವರು ಹೈಬ್ರಿಡ್ ಮಾದರಿಯನ್ನು ಬಯಸುವುದಿಲ್ಲ ಎಂದು ಹೇಳುತ್ತಿದ್ದು, ಪಾಕಿಸ್ತಾನವು ಆತಿಥ್ಯ ಹಕ್ಕು ಹೊಂದಿದ್ದು, ದೇಶದಲ್ಲಿ ಎಲ್ಲಾ ಪಂದ್ಯಗಳನ್ನು ನಡೆಸುವ ಹಕ್ಕಿದೆ ಎಂದು ಹೇಳಿದರು.

ಒಂದು ವೇಳೆ ಭಾರತವು ಏಷ್ಯಾಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲು ಬಯಸಿದರೆ, ನಾವು ಕೂಡಾ ವಿಶ್ವಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲೇ ಆಡುತ್ತೇವೆ ಎಂದು ಎಹ್ಸಾನ್ ಮಜಾರಿ ಹೇಳಿದರು.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಏಕದಿನ ವಿಶ್ವಕಪ್‌ ನಲ್ಲಿ ಪಾಕಿಸ್ತಾನ ಭಾಗವಹಿಸುತ್ತದೆಯೇ ಎಂದು ನಿರ್ಣಯಿಸಲು ಸಚಿವರ ಸಮಿತಿಯನ್ನು ರಚಿಸಿದರು. ಸಮಿತಿಯ ನೇತೃತ್ವವನ್ನು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ವಹಿಸಲಿದ್ದಾರೆ.

ಭಾರತವು ‘ರಾಜಕೀಯಕ್ಕೆ ಕ್ರೀಡೆಯನ್ನು’ ತರುತ್ತಿದೆ ಎಂದು ಆರೋಪಿಸಿದ ಮಜಾರಿ, ಇತರ ಕ್ರೀಡಾ ಸಂಬಂಧಗಳು ಈಗಾಗಲೇ ಉತ್ತಮವಾಗಿ ನಡೆಯುತ್ತಿರುವಾಗ ಭಾರತ ಸರ್ಕಾರ ತಮ್ಮ ಪುರುಷರ ಕ್ರಿಕೆಟ್ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಯಾವುದೇ ಸರಿಯಾದ ಕಾರಣವನ್ನು ಕಾಣುತ್ತಿಲ್ಲ ಎಂದು ಹೇಳಿದರು. ಪಾಕಿಸ್ತಾನದಲ್ಲಿ ಆಡುವಾಗ ಭಾರತ ಸರ್ಕಾರದ ‘ಭದ್ರತಾ ಕಾಳಜಿ’ಯನ್ನು ನಂಬಲು ನಿರಾಕರಿಸಿದ ಅವರು, ಇತ್ತೀಚೆಗೆ ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡರು ಮತ್ತು ಅವರಿಗೆ ಅಧ್ಯಕ್ಷೀಯ ಭದ್ರತೆಯನ್ನು ನೀಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.