ಪಾಕಿಸ್ಥಾನಕ್ಕೆ 2-1 ಏಕದಿನ ಸರಣಿ


Team Udayavani, Apr 13, 2017, 11:09 AM IST

PAK-champions.jpg

ಗಯಾನ: ಶೋಯಿಬ್‌ ಮಲಿಕ್‌ ಅವರ ಆಕರ್ಷಕ ಶತಕ ಮತ್ತು ಅವರು ಮೊಹಮ್ಮದ್‌ ಹಫೀಜ್‌ ಜತೆ ಮೂರನೇ ವಿಕೆಟಿಗೆ ಪೇರಿಸಿದ ಶತಕದ ಜತೆಯಾಟದಿಂದಾಗಿ ಪಾಕಿಸ್ಥಾನ ತಂಡವು ನಿರ್ಣಾಯಕ ಮೂರನೇ ಪಂದ್ಯದಲ್ಲಿ ವೆಸ್ಟ್‌ಇಂಡೀಸ್‌ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ನಡೆಸಿದ ವೆಸ್ಟ್‌ಇಂಡೀಸ್‌ ತಂಡವು ಶಾಯಿ ಹೋಪ್‌ ಮತ್ತು ಜಾಸನ್‌ ಮೊಹಮ್ಮದ್‌ ಅವರ ಅರ್ಧಶತಕದಿಂದಾಗಿ 9 ವಿಕೆಟಿಗೆ 233 ರನ್ನುಗಳ ಸಾಧಾರಣ ಮೊತ್ತ ಗಳಿಸಿತು. ಇದಕ್ಕುತ್ತರವಾಗಿ ಪಾಕಿಸ್ಥಾನ 36 ರನ್ನಿಗೆ ಮೂರು ವಿಕೆಟ್‌ ಕಳೆದುಕೊಂಡು ನಾಟಕೀಯ ಕುಸಿತ ಕಂಡರೂ ಮೊಹಮ್ಮದ್‌ ಹಫೀಜ್‌ ಮತ್ತು ಶೋಯಿಬ್‌ ಮಲಿಕ್‌ ಅವರ ತಾಳ್ಮೆಯ ಆಟದಿಂದಾಗಿ 43.1 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ನಷ್ಟದಲ್ಲಿ ಜಯಭೇರಿ ಬಾರಿಸಿತು.

ಹಫೀಜ್‌ ಮತ್ತು ಮಲಿಕ್‌ ನಾಲ್ಕನೇ ವಿಕೆಟಿಗೆ 113 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ತಂಡವನ್ನು ಸುಸ್ಥಿತಿಗೆ ತಲುಪಿಸಿದರು. ಹಫೀಜ್‌ 81 ರನ್‌ ಗಳಿಸಿ ಔಟಾದ ಬಳಿಕ ಮಲಿಕ್‌ ಅವರನ್ನು ಸಫ‌ìರಾಜ್‌ ಅಹ್ಮದ್‌ ಸೇರಿಕೊಂಡರು. ಅವರಿಬ್ಬರು ಮುರಿಯದ ಐದನೇ ವಿಕೆಟಿಗೆ 87 ರನ್‌ ಪೇರಿಸಿ ತಂಡದ ಜಯ ಸಾರಿದರು. ಈ ನಡುವೆ ಮಲಿಕ್‌ ಶತಕ ಸಿಡಿಸಿ ಸಂಭ್ರಮಿಸಿದರು. 111 ಎಸೆತ ಎದುರಿಸಿದ ಅವರು 10 ಬೌಂಡರಿ ಮತ್ತು 2 ಸಿಕ್ಸರ್‌ ಬಾರಿಸಿದರು.
 
ತಾಳ್ಮೆಯ ಆಟವಾಡಿದ ಹಫೀಜ್‌ ನನ್ನ ಮೇಲೆ ಯಾವುದೇ ಒತ್ತಡ ಬೀಳದಂತೆ ನೋಡಿಕೊಂಡರು. ಅದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವೆ ಎಂದು ಪಂದ್ಯಶ್ರೇಷ್ಠ ಮತ್ತು ಸರಣಿಶ್ರೇಷ್ಠ ಪ್ರಶಸ್ತಿ ಪುರಸ್ಕೃತ ಶೋಯಿಮ್‌ ಮಲಿಕ್‌ ತಿಳಿಸಿದರು.

ಸಂಕ್ಷಿಪ್ತ ಸ್ಕೋರು: ವೆಸ್ಟ್‌ಇಂಡೀಸ್‌ 9 ವಿಕೆಟಿಗೆ 233 (ಕೈರನ್‌ ಪೊವೆಲ್‌ 23, ಶಾಯಿ ಹೋಪ್‌ 71, ಜಾಸನ್‌ ಮೊಹಮ್ಮದ್‌ 59, ಮೊಹಮ್ಮದ್‌ ಆಮಿರ್‌ 41ಕ್ಕೆ 2, ಜುನೈದ್‌ ಖಾನ್‌ 60ಕ್ಕೆ 2, ಶಾದಾಬ್‌ ಖಾನ್‌ 57ಕ್ಕೆ 2); ಪಾಕಿಸ್ಥಾನ 43.1 ಓವರ್‌ಗಳಲ್ಲಿ 4 ವಿಕೆಟಿಗೆ 236 (ಮೊಹಮ್ಮದ್‌ ಹಫೀಜ್‌ 81, ಶೋಯಿಬ್‌ ಮಲಿಕ್‌ 101 ಔಟಾಗದೆ, ಸಫ‌ìರಾಜ್‌ ಅಹ್ಮದ್‌ 24 ಔಟಾಗದೆ, ಶಾನನ್‌ ಗ್ಯಾಬ್ರಿಯೆಲ್‌ 60ಕ್ಕೆ 2). 

ಪಂದ್ಯಶ್ರೇಷ್ಠ : ಶೋಯಿಬ್‌ ಮಲಿಕ್‌.
 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.