ವಿದೇಶಿ ಆಟಗಾರನಲ್ಲಿ ಕೊರೊನಾ ಸೋಂಕು ಪತ್ತೆ ಶಂಕೆ: ಪಾಕಿಸ್ಥಾನ ಸೂಪರ್ ಲೀಗ್ ಮುಂದೂಡಿಕೆ
Team Udayavani, Mar 18, 2020, 9:32 AM IST
ಕರಾಚಿ: ವಿದೇಶಿ ಆಟಗಾರನೋರ್ವನಲ್ಲಿ ಅಪಾಯಕಾರಿ ಕೋವಿಡ್-19 ಸೋಂಕು ಪತ್ತೆಯಾದ ಕಾರಣ ಸದ್ಯ ಸಾಗುತ್ತಿರುವ ಪಾಕಿಸ್ಥಾನ ಸೂಪರ್ ಲೀಗ್ (ಪಿಎಸ್ಎಲ್) ಕೂಟವನ್ನು ಮುಂದೂಡಲು ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನಿರ್ಧರಿಸಿದೆ.
ಪಿಎಸ್ಎಲ್ ನಾಕೌಟ್ ಹಂತಕ್ಕೆ ತಲುಪಿತ್ತು ಮತ್ತು ಮಂಗಳವಾರ ಮತ್ತು ಬುಧವಾರ ಲಾಹೋರ್ನಲ್ಲಿ ಸೆಮಿಫೈನಲ್ಸ್ ಮತ್ತು ಫೈನಲ್ ಪಂದ್ಯ ನಡೆಯಬೇಕಿತ್ತು. ಕೊರೊನಾದಿಂದಾಗಿ ಲೀಗ್ ಹಂತದ ಪಂದ್ಯಗಳನ್ನು ನಾಲ್ಕು ದಿನಗಳಿಗೆ ಕಡಿಮೆಗೊಳಿಸಲಾಗಿತ್ತು. ಆದರೆ ವಿದೇಶಿ ಆಟಗಾರನೋರ್ವನಲ್ಲಿ ಸೋಂಕು ಪತ್ತೆಯಾದ ಕಾರಣ ಇದೀಗ ಕೂಟವನ್ನು ಮುಂದೂಡಬೇಕಾಯಿತು.
ಪಾಕಿಸ್ಥಾನವನ್ನು ತೊರೆದ ಆಟಗಾರ ಸೋಂಕಿಗೆ ಒಳಗಾಗಿರುವ ವಿಷಯ ತಿಳಿಸಿದ್ದರಿಂದ ಯಾರೂ ಕೂಡ ಆತಂಕಕ್ಕೆ ಒಳಗಾಗದಿರಲು ಸುದೀರ್ಘ ಚರ್ಚೆಯ ಬಳಿಕ ಕೂಟವನ್ನು ಮುಂದೂಡಲು ನಿರ್ಧರಿಸಲಾಯಿತು ಎಂದು ಪಿಸಿಬಿ ಸಿಇಒ ವಸೀಮ್ ಖಾನ್ ಹೇಳಿದ್ದಾರೆ.
ಅಲೆಕ್ಸ್ ಹೇಲ್ಸ್ ಅವರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಪಾಕಿಸ್ಥಾನದ ಮಾಜಿ ಟೆಸ್ಟ್ ನಾಯಕ ಮತ್ತು ವೀಕ್ಷಣೆಗಾರ ರಮೀಜ್ ರಾಜಾ ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪಿಎಸ್ಎಲ್ನ ಆಟಗಾರರು ಮತ್ತು ವೀಕ್ಷಣೆಗಾರರೆಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
ಹೇಲ್ಸ್ ಅವರು ಇನ್ನೂ ಪರೀಕ್ಷೆಗೆ ಒಳಗಾಗಬೇಕಾಗಿದೆ. ಅವರಲ್ಲಿರುವ ಸೋಂಕು ಕೋವಿಡ್ಗೆ ಸಂಬಂಧಿಸಿದ ಬಗ್ಗೆ ಗೊತ್ತಿಲ್ಲ. ಆದರೆ ನಾವು ಬಹಳ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ ಎಂದು ರಾಜಾ ತಿಳಿಸಿದರು.
ಇಂಗ್ಲೆಂಡಿಗೆ ತೆರಳಿದ ಬಳಿಕ ಹೇಲ್ಸ್ ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ ಸರಕಾರದ ಸಲಹೆಯಂತೆ ತಪಾಸಣೆ ನಡೆಸಿ ನಿಗಾದಲ್ಲಿ ಇಡಲಾಗಿದೆ. ಅವರ ಚಿಕಿತ್ಸೆಯ ವರದಿ ಇನ್ನೂ ಬರಬೇಕಾಗಿದೆ. ಹಾಗಾಗಿ ಈ ಹಂತದಲ್ಲಿ ಏನೂ ಹೇಳಲು ಸಾಧ್ಯವಿಲ್ಲ
ಸುರಕ್ಷತೆ ಮುಖ್ಯ
ಕೊರೊನದಿಂದಾಗಿ ಆಟಗಾರರ ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡಿದ್ದೇವೆ. ಕೂಟ ಮುಂದೂಡುವ ಮೊದಲು ಸರಕಾರ ಮತ್ತು ಆರೋಗ್ಯ ಇಲಾಖೆಯ ಸಲಹೆ ಪಡೆದಿದ್ದೇವೆ ಎಂದು ವಸೀಮ್ ಖಾನ್ ತಿಳಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಲೀಗ್ನಿಂದ ಯಾವುದೇ ಹಂತದಲ್ಲೂ ಹಿಂದೆ ಸರಿಯಬಹುದೆಂದು ಪಿಸಿಬಿ ವಿದೇಶಿ ಆಟಗಾರರಿಗೆ ಸೂಚಿಸಿತ್ತು. ಪಿಎಸ್ಎಲ್ನಲ್ಲಿ 34 ವಿದೇಶಿ ಆಟಗಾರರು ಆಡಿದ್ದರು ಮತ್ತು ಕಳೆದ ವಾರವೇ ಹೆಚ್ಚಿನ ಆಟಗಾರರು ತವರಿಗೆ ಮರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್ ರಾಯಲ್ಸ್ ಸವಾಲು
CSK; ಬಸ್ ಕಂಡಕ್ಟರ್ಗಳಿಗೆ ಚೆನ್ನೈ ಕಿಂಗ್ಸ್ನಿಂದ 8 ಸಾವಿರ ಅಗತ್ಯ ಗಿಫ್ಟ್ !
Central government ಒಪ್ಪಿದರೆ ಪಾಕ್ಗೆ ಭಾರತ ಕ್ರಿಕೆಟ್ ತಂಡ: ರಾಜೀವ್ ಶುಕ್ಲ
T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್ ಗೆಲುವು: 4-0 ಮುನ್ನಡೆ
Pakistan ಟಿ20 ವಿಶ್ವಕಪ್ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್ ಬಹುಮಾನ
MUST WATCH
ಹೊಸ ಸೇರ್ಪಡೆ
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ