ಲಂಕೆಗೆ ಮತ್ತೆ ಸೋಲು; ಪಾಕಿಗೆ ಸರಣಿ


Team Udayavani, Oct 29, 2017, 6:55 AM IST

AP10_28_2017_000015A.jpg

ಅಬುದಾಭಿ: ದ್ವಿತೀಯ ಟಿ20 ಪಂದ್ಯದಲ್ಲೂ ಸಾಮಾನ್ಯ ಮಟ್ಟದ ಬ್ಯಾಟಿಂಗ್‌ ಪ್ರದರ್ಶಿಸಿದ ಶ್ರೀಲಂಕಾ 2 ವಿಕೆಟ್‌ಗಳಿಂದ ಪಾಕಿಸ್ಥಾನಕ್ಕೆ ಶರಣಾಗಿ ಸರಣಿಯನ್ನು ಕಳೆದುಕೊಂಡಿದೆ. ಸರಣಿಯ 3ನೇ ಹಾಗೂ ಅಂತಿಮ ಪಂದ್ಯ ರವಿವಾರ ಲಾಹೋರ್‌ನ “ಗದ್ದಾಫಿ ಸ್ಟೇಡಿಯಂ’ನಲ್ಲಿ ನಡೆಯಲಿದೆ. 8 ವರ್ಷಗಳ ಹಿಂದೆ ಲಾಹೋರ್‌ನಲ್ಲಿ ಭಯೋತ್ಪಾದಕ ದಾಳಿಗೆ ತುತ್ತಾದ ಶ್ರೀಲಂಕಾ ಕ್ರಿಕೆಟಿಗರಿಂದಲೇ ಪಾಕಿಸ್ಥಾನದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನೂತನ ಆರಂಭ ಲಭಿಸುವುದೊಂದು ವಿಶೇಷ.

ಅಬುದಾಭಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾಕ್ಕೆ ಗಳಿಸಲು ಸಾಧ್ಯವಾದದ್ದು 9ಕ್ಕೆ 124 ರನ್‌ ಮಾತ್ರ. ಆದರೆ ಇದನ್ನು ಬೆನ್ನಟ್ಟುವ ಹಾದಿಯಲ್ಲಿ ಪಾಕಿಸ್ಥಾನ ತೀವ್ರ ಸಂಕಟ ಹಾಗೂ ಒತ್ತಡಕ್ಕೆ ಸಿಲುಕಿತು. ಕೊನೆಗೂ ಒಂದು ಎಸೆತ ಬಾಕಿ ಉಳಿದಿರುವಾಗ 8 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು.

ಅಂತಿಮ ಓವರ್‌ ರೋಮಾಂಚನ
ವಿಕುಮ್‌ ಸಂಜಯ ಪಾಲಾದ ಆಂತಿಮ ಓವರಿನಲ್ಲಿ ಪಾಕ್‌ ಜಯಕ್ಕೆ 3 ವಿಕೆಟ್‌ಗಳಿಂದ 12 ರನ್‌ ಅಗತ್ಯವಿತ್ತು. ಮೊದಲ ಎಸೆತದಲ್ಲೇ ಫಾಹಿಮ್‌ ಅಶ್ರಫ್ ವಿಕೆಟ್‌ ಬಿತ್ತು. 2ನೇ ಎಸೆತದಲ್ಲಿ ಶಾದಾಬ್‌ ಖಾನ್‌ ಒಂದು ರನ್‌ ತೆಗೆದರು. ಬಳಿಕ ಹಸನ್‌ ಅಲಿಗೆ ಲಾಂಗ್‌ಆಫ್ನಲ್ಲೊಂದು ಜೀವದಾನ ಲಭಿಸಿತು. ಇದರಿಂದ 3 ರನ್‌ ಕೂಡ ಬಂತು. 4ನೇ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದ ಶಾದಾಬ್‌, ಮುಂದಿನ ಎಸೆತದಲ್ಲಿ 2 ರನ್‌ ಬಾರಿಸಿ ಲಂಕೆಯ ಕೈಯಿಂದ ಗೆಲುವನ್ನು ಕಸಿದೇ ಬಿಟ್ಟರು!
ಶಾದಾಬ್‌ ಗಳಿಕೆ 8 ಎಸೆತಗಳಿಂದ 16 ರನ್‌. 

ಬೌಲಿಂಗಿನಲ್ಲೂ ಮಿಂಚಿದ ಅವರು 4 ಓವರ್‌ಗಳಲ್ಲಿ ಕೇವಲ 14 ರನ್‌ ನೀಡಿ ಒಂದು ವಿಕೆಟ್‌ ಉರುಳಿಸಿದ್ದರು. ಈ ಸಾಧನೆಗಾಗಿ ಶಾದಾಬ್‌ಗ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿದು ಬಂತು. 28 ರನ್‌ ಮಾಡಿದ ನಾಯಕ ಸಫ‌ìರಾಜ್‌ ಅಹ್ಮದ್‌ ಪಾಕ್‌ ಸರದಿಯ ಟಾಪ್‌ ಸ್ಕೋರರ್‌. ಅಹ್ಮದ್‌ ಶೆಹಜಾದ್‌ 27 ರನ್‌ ಮಾಡಿದರು.

ಶ್ರೀಲಂಕಾದ ಅಗ್ರ ಕ್ರಮಾಂಕದ ಬ್ಯಾಟಿಂಗ್‌ ಉತ್ತಮ ಮಟ್ಟದಲ್ಲೇ ಇತ್ತು. ಆರಂಭಿಕರಾದ ಗುಣತಿಲಕ 51, ಮುನವೀರ 19 ಹಾಗೂ ವನ್‌ಡೌನ್‌ ಬ್ಯಾಟ್ಸ್‌ಮನ್‌ ಸಮರವಿಕ್ರಮ 32 ರನ್‌ ಬಾರಿಸಿದರು. ಉಳಿದವರೆಲ್ಲ ಸೇರಿ ಗಳಿಸಿದ್ದು ಕೇವಲ 18 ರನ್‌ ಮಾತ್ರ. 16ನೇ ಓವರ್‌ ಮುಕ್ತಾಯಕ್ಕೆ ಒಂದು ವಿಕೆಟಿಗೆ 106 ರನ್‌ ಮಾಡಿದ್ದ ಲಂಕಾ ಬಳಿಕ ನಾಟಕೀಯ ಕುಸಿತಕ್ಕೆ ಸಿಲುಕಿತು.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-9 ವಿಕೆಟಿಗೆ 124 (ಗುಣತಿಲಕ 51, ಸಮರವಿಕ್ರಮ 32, ಮುನವೀರ 19, ಫಾಹಿಮ್‌ ಅಶ್ರಫ್ 16ಕ್ಕೆ 3, ಹಸನ್‌ ಅಲಿ 31ಕ್ಕೆ 2). ಪಾಕಿಸ್ಥಾನ-19.5 ಓವರ್‌ಗಳಲ್ಲಿ 8 ವಿಕೆಟಿಗೆ 125 (ಸಫ‌ìರಾಜ್‌ 28, ಶೆಹಜಾದ್‌ 27, ಶಾದಾಬ್‌ ಔಟಾಗದೆ 16, ತಿಸರ ಪೆರೆರ 24ಕ್ಕೆ 3). ಪಂದ್ಯಶ್ರೇಷ್ಠ: ಶಾದಾಬ್‌ ಖಾನ್‌.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.