ದ್ವಿತೀಯ ಟಿ-20 ಪಂದ್ಯ ವಿಶ್ವ ಇಲೆವೆನ್‌ಗೆ  7 ವಿಕೆಟ್‌ ಜಯ


Team Udayavani, Sep 15, 2017, 8:16 AM IST

15-sports-3.jpg

ಲಾಹೋರ್‌: “ಇಂಡಿಪೆಂಡೆನ್ಸ್‌ ಕಪ್‌’ ಸರಣಿಯ ದ್ವಿತೀಯ ಟಿ-20 ಪಂದ್ಯದಲ್ಲಿ ವಿಶ್ವ ಇಲೆವೆನ್‌ ತಂಡ ಪಾಕಿಸ್ಥಾನದ ಮೇಲೆ ಸೇಡು ತೀರಿಸಿಕೊಂಡಿದೆ. 7 ವಿಕೆಟ್‌ಗಳ ಭರ್ಜರಿ ಜಯದೊಂದಿಗೆ ಸರಣಿಯನ್ನು ಸಮ ಬಲಕ್ಕೆ ತಂದಿದೆ.

ಲಾಹೋರ್‌ನ “ಗದ್ದಾಫಿ ಸ್ಟೇಡಿಯಂ’ನಲ್ಲಿ ಬುಧವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಪಾಕಿಸ್ಥಾನ 6 ವಿಕೆಟಿಗೆ 176 ರನ್‌ ಪೇರಿಸಿದರೆ, ವಿಶ್ವ ಇಲೆವೆನ್‌ ತಂಡ 19.5 ಓವರ್‌ಗಳಲ್ಲಿ ಮೂರೇ ವಿಕೆಟಿಗೆ 175 ರನ್‌ ಬಾರಿಸಿ ವಿಜಯಿ ಯಾಯಿತು. ಮಂಗಳ ವಾರದ ಮೊದಲ ಪಂದ್ಯವನ್ನು ಪಾಕ್‌ 20 ರನ್ನುಗಳಿಂದ ಗೆದ್ದಿತ್ತು.

ರುಮ್ಮನ್‌ ರಯೀಸ್‌ ಪಾಲಾದ ಅಂತಿಮ ಓವರಿನಲ್ಲಿ ವಿಶ್ವ ಇಲೆವೆನ್‌ ಗೆಲುವಿಗೆ 13 ರನ್‌ ಅಗತ್ಯವಿತ್ತು. ಹಾಶಿಮ್‌ ಆಮ್ಲ-ತಿಸರ ಪೆರೆರ ಕ್ರೀಸಿನಲ್ಲಿದ್ದರು. ಮೊದಲ 4 ಎಸೆತಗಳಲ್ಲಿ ಇವರಿಬ್ಬರು ಸೇರಿ 6 ರನ್‌ ಗಳಿಸಿದರು. 5ನೇ ಎಸೆತವನ್ನು ಪೆರೆರ ಸಿಕ್ಸರ್‌ಗೆ ಅಟ್ಟಿ ತಂಡದ ಗೆಲುವನ್ನು ಸಾರಿದರು.

ವಿಜೇತ ತಂಡದ ಪರ ಆಮ್ಲ ಸರ್ವಾಧಿಕ 72 ರನ್‌ ಬಾರಿಸಿ ಅಜೇಯರಾಗಿ ಉಳಿದರು (55 ಎಸೆತ, 5 ಬೌಂಡರಿ, 2 ಸಿಕ್ಸರ್‌). ಪೆರೆರ ಕೇವಲ 19 ಎಸೆತಗಳಿಂದ 47 ರನ್‌ ಸಿಡಿಸಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 5 ಭರ್ಜರಿ ಸಿಕ್ಸರ್‌ ಒಳಗೊಂಡಿತ್ತು. ಬೌಲಿಂಗಿನಲ್ಲೂ ಮಿಂಚಿದ ಲಂಕಾ ಆಲ್‌ರೌಂಡರ್‌ 23 ರನ್‌ ವೆಚ್ಚದಲ್ಲಿ 2 ವಿಕೆಟ್‌ ಹಾರಿಸಿದ್ದರು. ಆಮ್ಲ-ಪೆರೆರ ಜೋಡಿ 5.5 ಓವರ್‌ಗಳಿಂದ 69 ರನ್‌ ಪೇರಿಸಿ ತಂಡವನ್ನು ದಡ ಮುಟ್ಟಿಸಿತು. ತಮಿಮ್‌ ಇಕ್ಬಾಲ್‌ 23, ನಾಯಕ ಡು ಪ್ಲೆಸಿಸ್‌ 20, ಪೇಯ್ನ 10 ರನ್‌ ಮಾಡಿ ಔಟಾದರು. 

ಪಾಕಿಸ್ಥಾನ ಪರ ಮತ್ತೆ ಮಿಂಚಿದ ಬಾಬರ್‌ ಆಜಂ 45 ರನ್‌ ಹೊಡೆದರು (38 ಎಸೆತ, 5 ಬೌಂಡರಿ). ಅಹ್ಮದ್‌ ಶೆಹಜಾದ್‌ 43, ಶೋಯಿಬ್‌ ಮಲಿಕ್‌ 39 ರನ್‌ ಮಾಡಿ ನಿರ್ಗಮಿಸಿದರು. ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯ ಶುಕ್ರವಾರ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್‌: ಪಾಕಿಸ್ಥಾನ-20 ಓವರ್‌ಗಳಲ್ಲಿ 6 ವಿಕೆಟಿಗೆ 174 (ಬಾಬರ್‌ 45, ಶೆಹಜಾದ್‌ 43, ಮಲಿಕ್‌ 39, ಬದ್ರಿ 31ಕ್ಕೆ 2, ಪೆರೆರ 23ಕ್ಕೆ 2). ವಿಶ್ವ ಇಲೆವೆನ್‌-19.5 ಓವರ್‌ಗಳಲ್ಲಿ 3 ವಿಕೆಟಿಗೆ 175 (ಆಮ್ಲ ಔಟಾಗದೆ 72, ಪೆರೆರ ಔಟಾಗದೆ 47, ಇಕ್ಬಾಲ್‌ 23, ನವಾಜ್‌ 25ಕ್ಕೆ 1, ಇಮಾದ್‌ 27ಕ್ಕೆ 1).
ಪಂದ್ಯಶ್ರೇಷ್ಠ: ತಿಸರ ಪೆರೆರ.

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.