ಇಂಗ್ಲೆಂಡ್ ಅಂಗಳದಲ್ಲಿ ದಾಖಲೆ ಬರೆದ ಪಂತ್- ಜಡ್ಡು; ಕಂಗಾಲಾದ ಆ್ಯಂಡರ್ಸನ್


Team Udayavani, Jul 2, 2022, 9:10 AM IST

Pant and Jadeja shatter record with 222-run partnership

ಬರ್ಮಿಂಗ್ ಹ್ಯಾಂ: ಆತಿಥೇಯ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನ ಭಾರತ ತಂಡ ದಿನದ ಗೌರವ ಸಂಪಾದಿಸಿದೆ. ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ ಅದ್ಭುತ ಜೊತೆಯಾಟದ ಕಾರಣದಿಂದ ಭಾರತ ತಂಡ ದಿನದ ಅಂತ್ಯಕ್ಕೆ ಏಳು ವಿಕೆಟ್ ನಷ್ಟಕ್ಕೆ 338 ರನ್ ಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡ ಆರಂಭದಲ್ಲಿ ಸತತ ವಿಕೆಟ್ ಕಳೆದುಕೊಂಡಿತು. ಕೇವಲ 98 ರನ್ ಗೆ ಐದು ವಿಕೆಟ್ ಕಳೆದುಕೊಂಡಿದ್ದ ವೇಳೆ ಜೊತೆಯಾದ ಪಂತ್ ಮತ್ತು ಜಡೇಜಾ ಆರನೇ ವಿಕೆಟ್ ಗೆ 222 ರನ್ ಜೊತೆಯಾಟವಾಡಿದರು.

ತನ್ನ ಎಂದಿನ ಶೈಲಿಯಲ್ಲೇ ಆಡಿದ ರಿಷಭ್ ಪಂತ್ ಕೇವಲ 111 ಎಸೆತಗಳಲ್ಲಿ 146 ರನ್ ಗಳಿಸಿದರು. ಮೊದಲ ಸೆಶನ್ ನಲ್ಲಿ ತಂಡವನ್ನು ಕಾಡಿದ್ದ ಜೇಮ್ಸ್ ಆ್ಯಂಡರ್ಸನ್ ರನ್ನು ಬಳಿಕ ಪಂತ್ ಕಾಡಿದರು. ಪಂತ್ ಈ ಇನ್ನಿಂಗ್ಸ್ ನಲ್ಲಿ ಬರೋಬ್ಬರಿ 20 ಬೌಂಡರಿ ಮತ್ತು ನಾಲ್ಕು ಭರ್ಜರಿ ಸಿಕ್ಸರ್ ಬಾರಿಸಿದರು. ರವೀಂದ್ರ ಜಡೇಜಾ ಅಜೇಯ 83 ರನ್ ಗಳಿಸಿ ಆಡುತ್ತಿದ್ದಾರೆ.

ಇವರಿಬ್ಬರು ಆರನೇ ವಿಕೆಟ್‌ಗೆ 222 ರನ್‌ಗಳ ಬೃಹತ್ ಮೊತ್ತವನ್ನು ಸೇರಿಸಿದರು. ಇದು ಆರನೇ ವಿಕೆಟ್‌ಗೆ ಇಂಗ್ಲೆಂಡ್‌ನಲ್ಲಿ ಭಾರತ ತಂಡ ಮಾಡಿದ ಗರಿಷ್ಠ ಜೊತೆಯಾಟವಾಗಿದೆ. ಅಲ್ಲದೆ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಜಂಟಿ ನಾಲ್ಕನೇ ಅತ್ಯುನ್ನತ ಜೊತೆಯಾಟವಾಗಿದೆ.

ಇದನ್ನೂ ಓದಿ:ಬಾಸ್ಕೆಟ್‌ಬಾಲ್‌ ತಂಡಕ್ಕೆ ಇವರನ್ನು ಹುಡುಕಿಕೊಡಿ- ವಿಡಿಯೋ ವೈರಲ್‌

ವಾಂಖೆಡೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ದಿಲೀಪ್ ವೆಂಗ್‌ಸರ್ಕರ್ ಮತ್ತು ರವಿಶಾಸ್ತ್ರಿ ಅವರ 298* ರನ್‌ ಗಳ ಜೊತೆಯಾಟ ದಾಖಲೆಯಾಗಿ ಉಳಿದಿದೆ.

ಏಷ್ಯಾದಿಂದ ಹೊರಕ್ಕೆ ಅತೀ ವೇಗದ ಶತಕ ಬಾರಿಸಿದ ಮೂರನೇ ಭಾರತೀಯ ಎಂಬ ಸಾಧನೆಯನ್ನು ಪಂತ್ ಮಾಡಿದರು. ಪಂತ್ 89 ಎಸೆತಗಳಲ್ಲಿ ಶತಕ ಪೂರೈಸಿದರು. ವೆಸ್ಟ್ ಇಂಡೀಸ್ ವಿರುದ್ಧ ಸೆಹ್ವಾಗ್ 78 ಎಸೆತಗಳಲ್ಲಿ ಶತಕ ಬಾರಿಸಿದ್ದು ದಾಖಲೆಯಾಗಿದೆ. ಎರಡನೇ ಸ್ಥಾನದಲ್ಲಿ ಮೊಹ್ಮಮದ್ ಅಜರುದ್ದೀನ್ ಇದ್ದಾರೆ. (88 ಎಸೆತ)

ವಿದೇಶಿ ಟೆಸ್ಟ್ ಗಳಲ್ಲಿ ಆರು ಅಥವಾ ಕೆಳ ಕ್ರಮಾಂಕದಲ್ಲಿ ಪಂತ್ ಮತ್ತು ಜಡೇಜಾ ಭಾರತದ ಪರ ಅತ್ಯುತ್ತಮ ಜೊತೆಯಾಟ ದಾಖಲೆಯನ್ನು ಸರಿಗಟ್ಟಿದರು. ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಮೊಹಮ್ಮದ್ ಅಜರುದ್ದೀನ್ ಕೂಡಾ ಆರನೇ ವಿಕೆಟ್ ಗೆ 222 ರನ್ ಜೊತೆಯಾಟವಾಡಿದ್ದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

1-weewqe

IPL; 89 ಕ್ಕೆ ಆಲೌಟಾದ ಟೈಟಾನ್ಸ್ ; ಡೆಲ್ಲಿಗೆ ಸುಲಭ ಜಯ

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.