T20 World Cup; ಹ್ಯಾಟ್ರಿಕ್ ವಿಕೆಟ್ ಕಿತ್ತ ಕಮಿನ್ಸ್; 17 ವರ್ಷದ ಬಳಿಕ ಆಸೀಸ್ ಬೌಲರ್ ಸಾಧನೆ


Team Udayavani, Jun 21, 2024, 12:39 PM IST

Pat Cummins becomes the 2nd Australian to pick a hat-trick in the T20 World Cup history

ಆ್ಯಂಟಿಗುವಾ: ಐಸಿಸಿ ಟಿ20 ವಿಶ್ವಕಪ್ ನ ಗುಂಪು ಹಂತದಲ್ಲಿ ಅಜೇಯ ಆಟವಾಡಿದ್ದ ಆಸ್ಟ್ರೇಲಿಯಾ ಸೂಪರ್ 8 ಹಂತದಲ್ಲಿ ತನ್ನ ಗೆಲುವಿನ ಓಟ ಮುಂದುವರಿಸಿದೆ. ಆ್ಯಂಟಿಗುವಾದ ಸರ್ ವಿವಿಯನ್ ರಿಚರ್ಡ್ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಆಸ್ಟ್ರೇಲಿಯಾ 28 ರನ್ ಅಂತರದಿಂದ ಸೋಲಿಸಿತು.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್ ಪ್ಯಾಟ್ ಕಮಿನ್ಸ್ ಅವರು ಹ್ಯಾಟ್ರಿಕ್ ವಿಕೆಟ್ ತೆಗೆದು ಮಿಂಚಿದರು. ಬಾಂಗ್ಲಾದ ಮೊಹಮದುಲ್ಲಾ, ಮೆಹದಿ ಹಸನ್ ಮತ್ತು ತೌಹಿದ್ ಹ್ರದೋಯ್ ಅವರ ವಿಕೆಟ್ ಗಳನ್ನು ಕಿತ್ತ ಕಮಿನ್ಸ್ ಸಂಭ್ರಮಿಸಿದರು.

ನಾಲ್ಕು ಓವರ್ ಎಸೆದ ಪ್ಯಾಟ್ ಕಮಿನ್ಸ್ 29 ರನ್ ನೀಡಿ ಮೂರು ವಿಕೆಟ್ ಪಡೆದರು. ಸ್ಪಿನ್ನರ್ ಆ್ಯಡಂ ಜಂಪಾ ನಾಲ್ಕು ಓವರ್ ನಲ್ಲಿ 24 ರನ್ ನೀಡಿ ಎರಡು ವಿಕೆಟ್ ಕಿತ್ತರು.

ಕಮಿನ್ಸ್ ಅವರು ಟಿ20 ವಿಶ್ವಕಪ್‌ ನ ಇತಿಹಾಸದಲ್ಲಿ ಹ್ಯಾಟ್ರಿಕ್ ಪಡೆದ ಎರಡನೇ ಆಸ್ಟ್ರೇಲಿಯಾ ಆಟಗಾರನಾಗಿದ್ದಾರೆ. 2007ರ ಆವೃತ್ತಿಯಲ್ಲಿ ಬ್ರೆಟ್ ಲಿ ಅವರು ವಿಶ್ವಕಪ್ ಹ್ಯಾಟ್ರಿಕ್ ಪಡೆದಿದ್ದರು.

ಈ ಮಧ್ಯೆ ಮಿಚೆಲ್ ಸ್ಟಾರ್ಕ್ ಅವರು ಆರಂಭಿಕ ಓವರ್‌ನಲ್ಲಿ ತಂಜಿದ್ ಹಸನ್ ಅವರನ್ನು ಔಟ್ ಮಾಡುವ ಮೂಲಕ ವೈಟ್ ಬಾಲ್ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆದರು. ತಂಜಿದ್ ಹಸನ್ ವಿಕೆಟ್ ಸ್ಟಾರ್ಕ್ ಅವರ 95 ನೇ ವಿಶ್ವಕಪ್ ವಿಕೆಟ್‌ ಆಗಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡವು 8 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಆಸೀಸ್ 11.2 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 100 ರನ್ ಗಳಿಸಿದ್ದಾಗ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಈ ಸಮಯದಲ್ಲಿ ಆಸೀಸ್ 28 ರನ್ ಗಳಿಂದ ಮುಂದಿತ್ತು. ಹೀಗಾಗಿ ಮಾರ್ಷ್ ಪಡೆಯನ್ನು ವಿಜಯಿ ಎಂದು ಘೋಷಿಸಲಾಯಿತು.

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

eng

T20: ಸರಣಿ ವಶಕ್ಕೆ ಭಾರತ ಮರು ಯತ್ನ

Nat Sciver Brunt return to ODI series

INDWvsENGW: ಏಕದಿನ ಸರಣಿಗೆ ಮರಳಿದ ನ್ಯಾಟ್‌ ಸ್ಕಿವರ್‌ ಬ್ರಂಟ್‌

Is the Lord’s pitch conducive to speed?

INDvsENG: ಲಾರ್ಡ್ಸ್‌ ಪಿಚ್‌ ವೇಗಕ್ಕೆ ಪೂರಕ?

T20 Bowling Ranking: No.1 Saniha Deepti Sharma

Deepti Sharma: ಟಿ20 ಬೌಲಿಂಗ್‌ ರ್‍ಯಾಂಕಿಂಗ್‌: ನಂ.1 ಸನಿಹ ದೀಪ್ತಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.