ಜಯ್ ಶಾ ಹೇಳಿಕೆ ಬೆನ್ನಲ್ಲೇ ತುರ್ತು ಸಭೆ ಕರೆಯುವಂತೆ ಪಾಕ್ ಮನವಿ
ಏಷ್ಯಾ ಕಪ್ಗಾಗಿ ಪಾಕಿಸ್ಥಾನಕ್ಕೆ ಪ್ರಯಾಣಿಸುವುದಿಲ್ಲ...
Team Udayavani, Oct 19, 2022, 4:12 PM IST
ಲಾಹೋರ್: ಮುಂದಿನ ವರ್ಷ ನಡೆಯಲಿರುವ ಏಷ್ಯಾ ಕಪ್ಗಾಗಿ ಭಾರತ ತಂಡವು ಪಾಕಿಸ್ಥಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆಯ ಹಿನ್ನೆಲೆಯಲ್ಲಿ ‘ನಿರಾಶೆಗೊಂಡ’ ಪಾಕಿಸ್ಥಾನ ಕ್ರಿಕೆಟ್ ಮಂಡಳಿಯು ಬುಧವಾರ ಏಷ್ಯನ್ ಕ್ರಿಕೆಟ್ ಕೌನ್ಸಿಲ್ಗೆ ತುರ್ತು ಸಭೆ ಕರೆಯುವಂತೆ ಮನವಿ ಮಾಡಿದೆ.
ಭಾರತವು ತಟಸ್ಥ ಸ್ಥಳದಲ್ಲಿ ಕಾಂಟಿನೆಂಟಲ್ ಪಂದ್ಯಾವಳಿಯನ್ನು ಆಡಲು ಬಯಸುತ್ತದೆ ಆದರೆ ಪಾಕಿಸ್ಥಾನಕ್ಕೆ ಪ್ರವಾಸ ಮಾಡುವುದಿಲ್ಲ ಎಂಬ ಶಾ ಅವರ ಹೇಳಿಕೆಗೆ ತನ್ನ ಮೊದಲ ಅಧಿಕೃತ ಪ್ರತಿಕ್ರಿಯೆಯಲ್ಲಿ, ಪಿಸಿಬಿ “ಇಂತಹ ಹೇಳಿಕೆಗಳು ಏಷ್ಯನ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಸಮುದಾಯಗಳನ್ನು ಒಡೆಯಬಹುದು ಮತ್ತು 2023 ವಿಶ್ವಕಪ್ ಗಾಗಿ ಪಾಕಿಸ್ಥಾನದ ಭಾರತ ಭೇಟಿಯ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.
ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗೆ ಮುನ್ನ ನಡೆಯಲಿರುವ ಏಷ್ಯಾ ಕಪ್ನ ಆತಿಥ್ಯವನ್ನು ಪಾಕಿಸ್ಥಾನಕ್ಕೆ ನೀಡಲಾಗಿದೆ. ಕಳೆದ ತಿಂಗಳು ನಡೆದ ಟಿ20 ಏಷ್ಯಾಕಪ್ ಅನ್ನು ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಶ್ರೀಲಂಕಾದಿಂದ ಯುಎಇಗೆ ಸ್ಥಳಾಂತರಿಸಬೇಕಾಗಿತ್ತು.
ಉಭಯ ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ ಭಾರತ ಮತ್ತು ಪಾಕಿಸ್ಥಾನವು ಏಷ್ಯನ್ ಮತ್ತು ಐಸಿಸಿ ಈವೆಂಟ್ಗಳಲ್ಲಿ ಮಾತ್ರ ಪರಸ್ಪರ ಆಡುತ್ತವೆ. ಭಾರತ ಕೊನೆಯ ಬಾರಿಗೆ 2008 ರಲ್ಲಿ ಪಾಕಿಸ್ಥಾನಕ್ಕೆ ಪ್ರವಾಸ ಮಾಡಿದ್ದರೆ, 2012-13 ರಲ್ಲಿ ಭಾರತದಲ್ಲಿ ಪಾಕಿಸ್ಥಾನದ ಕೊನೆಯ ಸರಣಿಗಳು ನಡೆದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ