ಪಿಂಕ್‌ ಬಾಲ್‌ ಟೆಸ್ಟ್‌ : ಇಂಗ್ಲೆಂಡಿಗೆ ಆರಂಭಿಕ ಆಘಾತ

ಮಾರ್ನಸ್‌ ಲಬುಶೇನ್‌ ಶತಕ, ಸ್ಟೀವನ್‌ ಸ್ಮಿತ್‌ 93

Team Udayavani, Dec 18, 2021, 5:01 AM IST

ಪಿಂಕ್‌ ಬಾಲ್‌ ಟೆಸ್ಟ್‌ : ಇಂಗ್ಲೆಂಡಿಗೆ ಆರಂಭಿಕ ಆಘಾತ

ಅಡಿಲೇಡ್‌: ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯದಲ್ಲೂ ಇಂಗ್ಲೆಂಡಿನ ಬ್ಯಾಟಿಂಗ್‌ ಪತನದ ಮುನ್ಸೂಚನೆಯೊಂದು ಲಭಿಸಿದೆ. 17 ರನ್‌ ಆಗುವಷ್ಟರಲ್ಲಿ ಆರಂಭಿಕರಿಬ್ಬರನ್ನೂ ಕಳೆದುಕೊಂಡು ಗಂಡಾಂತರಕ್ಕೆ ಸಿಲುಕಿದೆ. ಆಸ್ಟ್ರೇಲಿಯ 9ಕ್ಕೆ 473 ರನ್‌ ಪೇರಿಸಿ ಮೊದಲ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿದ್ದು, ಪಿಂಕ್‌ ಬಾಲ್‌ ಟೆಸ್ಟ್‌ನಲ್ಲಿ ಅಜೇಯ ಓಟ ಬೆಳೆಸುವ ಸಾಧ್ಯತೆಯನ್ನು ತೆರೆದಿರಿಸಿದೆ.

ಇಂಗ್ಲೆಂಡ್‌ ರೋರಿ ಬರ್ನ್ಸ್ (4) ಮತ್ತು ಹಸೀಬ್‌ ಹಮೀದ್‌ (6) ಅವರನ್ನು ಅಗ್ಗಕ್ಕೆ ಕಳೆದುಕೊಂಡಿದ್ದು, ಶನಿವಾರದ ಆಟದಲ್ಲಿ ಅಗ್ನಿಪರೀಕ್ಷೆ ಎದುರಾಗುವುದರಲ್ಲಿ ಅನುಮಾನವಿಲ್ಲ. ಭಾರೀ ಮಿಂಚು ಗುಡುಗಿನಿಂದಾಗಿ ದ್ವಿತೀಯ ದಿನದ ಆಟವನ್ನು ಬಹಳ ಬೇಗನೇ ಕೊನೆಗೊಳಿಸಲಾಯಿತು.

ಲಬುಶೇನ್‌ 103
95 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದು ಕೊಂಡಿದ್ದ ಮಾರ್ನಸ್‌ ಲುಬುಶೇನ್‌ ತಮ್ಮ 6ನೇ ಟೆಸ್ಟ್‌ ಶತಕವನ್ನು ಪೂರ್ತಿಗೊಳಿಸುವಲ್ಲಿ ಯಶಸ್ವಿಯಾದರು. ಆದರೆ ನಾಯಕ ಸ್ಮಿತ್‌ ಕೇವಲ 7 ರನ್ನಿನಿಂದ ಈ ಅವಕಾಶವನ್ನು ಕಳೆದುಕೊಂಡರು. ಮೊದಲ ದಿನ ವಾರ್ನರ್‌ ಕೂಡ ಶತಕ ತಪ್ಪಿಸಿಕೊಂಡಿದ್ದರು.

ಲಬುಶೇನ್‌ ಶತಕ ಪೂರೈಸಿದ ಬಳಿಕ ಹೆಚ್ಚು ಹೊತ್ತು ಉಳಿಯಲಿಲ್ಲ. 103 ರನ್‌ ಮಾಡಿ ರಾಬಿನ್ಸನ್‌ಗೆ ಲೆಗ್‌ ಬಿಫೋರ್‌ ಆದರು. ಇದಕ್ಕಾಗಿ ಎದುರಿಸಿದ್ದು ಬರೋಬ್ಬರಿ 305 ಎಸೆತ, ಹೊಡೆದದ್ದು 8 ಬೌಂಡರಿ.

ಇದನ್ನೂ ಓದಿ:ಕಾಮನ್ವೆಲ್ತ್‌ ವೇಟ್‌ಲಿಫ್ಟಿಂಗ್‌: ಚಿನ್ನ ಗೆದ್ದ ಪೂರ್ಣಿಮಾ ಪಾಂಡೆ

ಸ್ಮಿತ್‌ ಬಹಳ ಕಾಲದ ಬಳಿಕ ದೊಡ್ಡ ಇನ್ನಿಂಗ್ಸ್‌ ಒಂದನ್ನು ಕಟ್ಟಿದರು. ಇನ್ನೇನು 28ನೇ ಶತಕ ಒಲಿಯಲಿದೆ ಎನ್ನುವಾಗಲೇ ಆ್ಯಂಡರ್ಸನ್‌ ಎಲ್‌ಬಿ ಬಲೆಗೆ ಬೀಳಿಸಿದರು. 201 ಎಸೆತಗಳ ಈ ಆಟದಲ್ಲಿ 12 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸೇರಿತ್ತು.

ಕಳೆದ ಪಂದ್ಯದ ಶತಕವೀರ ಹೆಡ್‌ 18, ಗ್ರೀನ್‌ ಕೇವಲ 2 ರನ್‌ ಮಾಡಿ ಔಟಾದರು. ಕೀಪರ್‌ ಅಲೆಕ್ಸ್‌ ಕ್ಯಾರಿ 51, ಸ್ಟಾರ್ಕ್‌ ಔಟಾಗದೆ 39. ನೆಸೆರ್‌ 35 ರನ್‌ ಬಾರಿಸಿ ಆಸೀಸ್‌ ಸರದಿಯನ್ನು ವಿಸ್ತರಿಸಿದರು.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-9 ವಿಕೆಟಿಗೆ 473 ಡಿಕ್ಲೇರ್‌ (ಲಬುಶೇನ್‌ 103, ವಾರ್ನರ್‌ 95, ಸ್ಮಿತ್‌ 93, ಕ್ಯಾರಿ 51, ಸ್ಟೋಕ್ಸ್‌ 113ಕ್ಕೆ 3, ಆ್ಯಂಡರ್ಸನ್‌ 58ಕ್ಕೆ 2). ಇಂಗ್ಲೆಂಡ್‌-2 ವಿಕೆಟಿಗೆ 17.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.