ಮಿಥಾಲಿ ಪಡೆಗೆ ಗೋಯಲ್‌ ಸನ್ಮಾನ


Team Udayavani, Jul 28, 2017, 7:55 AM IST

modi-women-criket.jpg

ನವದೆಹಲಿ: ಕೇಂದ್ರ ಕ್ರೀಡಾ ಸಚಿವ ವಿಜಯ್‌ ಗೋಯೆಲ್‌ ಗುರುವಾರ ದೆಹಲಿಯಲ್ಲಿ ಭಾರತ ಮಹಿಳಾ ಕ್ರಿಕೆಟ್‌ ತಂಡವನ್ನು ಸನ್ಮಾನಿಸಿದರು. ಇತ್ತೀಚೆಗೆ ಇಂಗ್ಲೆಂಡ್‌ನ‌ಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ರೋಚಕ ಸೋಲನುಭವಿಸಿತ್ತು. ಟ್ರೋಫಿ ಕಳೆದುಕೊಂಡರೂ ತನ್ನ ಅತ್ಯದ್ಭುತ ಆಟದಿಂದ ಎಲ್ಲರ ಮನ ಸೆಳೆಯಲು ಯಶಸ್ವಿಯಾಗಿತ್ತು. ಈ ಹಿನ್ನೆಲೆಯಲ್ಲಿ ತಂಡವನ್ನು ಗೋಯಲ್‌ ಸನ್ಮಾನಿಸಿದ್ದಾರೆ.

ಈ ತಂಡದ ಸಾಧನೆ ಅದ್ಭುತವಾಗಿದೆ. ವಿಶೇಷವಾಗಿ ದೇಶದ ಸಾವಿರಾರು ಮಹಿಳೆಯರು ಕ್ರೀಡೆಯನ್ನು ತಮ್ಮ ವೃತ್ತಿಯಾಗಿ ತೆಗೆದುಕೊಳ್ಳಲು ಇದು ಪ್ರೇರಣೆಯಾಗಿದೆ.ಇತ್ತೀಚೆಗೆ ಭಾರತದ ಮಹಿಳಾ ಸ್ಪರ್ಧಿಗಳು ಎಲ್ಲ ಕ್ರೀಡೆಗಳಲ್ಲೂ ಮಿಂಚುತ್ತಿದ್ದಾರೆ. ಇದು ಭಾರತ ವಿಶ್ವಾದ್ಯಂತ ತನ್ನ ಛಾಪನ್ನು ಮೂಡಿಸಲು ನೆರವಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

10 ಆಟಗಾರ್ತಿಯರಿಗೆ
ರೈಲ್ವೇಯಿಂದ ತಲಾ 13 ಲಕ್ಷ ರೂ.

ಭಾರತ ಫೈನಲ್‌ಗೇರಿದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ರೈಲ್ವೇ ಸಚಿವಾಲಯ ತನ್ನಲ್ಲಿ ಉದ್ಯೋಗಿಗಳಾಗಿರುವ 10 ಆಟಗಾರ್ತಿಯರಿಗೆ ಬಡ್ತಿ ಘೋಷಿಸಿತ್ತು. ಇದೀಗ ಆ ಆಟಗಾರ್ತಿಯರಿಗೆತಲಾ 13 ಲಕ್ಷ ರೂ. ನಗದು ಬಹುಮಾನ ಪ್ರಕಟಿಸಿದ್ದಾರೆ. ಒಟ್ಟಾರೆ 1.30 ಕೋಟಿ ರೂ. ವಿತರಿ ಸುವುದಾಗಿ ರೈಲ್ವೆ ಸಚಿವ ಸುರೇಶ್‌ ಪ್ರಭು ತಿಳಿಸಿದ್ದಾರೆ.

ಸಚಿವರಿಗೆ ಸಹಿಸಹಿತ ಬ್ಯಾಟ್‌ ಉಡುಗೊರೆ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಸದಸ್ಯೆಯರು ತಮ್ಮ ವಿಶ್ವಕಪ್‌ ಫೈನಲ್‌ ಸಾಧನೆಯ ನೆನಪಿಗಾಗಿ ಸಚಿವ ಗೋಯಲ್‌ಗೆ ಎಲ್ಲ ಆಟಗಾರ್ತಿಯರು ಸಹಿ ಹಾಕಿದ ಬ್ಯಾಟ್‌ ಉಡುಗೊರೆಯಾಗಿ ನೀಡಿದ್ದಾರೆ.

ಹರ್ಮನ್‌ ಅಬ್ಬರಿಸುತ್ತಿದ್ದಾಗ
ಮಿಥಾಲಿ ರಾಜ್‌ ಪುಸ್ತಕ
ಓದುತ್ತಿದ್ದರಂತೆ !

ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಅಬ್ಬರದ 171 ರನ್‌ ಬಾರಿಸಿದ್ದರು. ಆದರೆ ನಾಯಕಿ
ಮಿಥಾಲಿ ರಾಜ್‌ ಶಾಂತವಾಗಿ ಕುಳಿತು ಇಂಗ್ಲೆಂಡ್‌ ಮಾಜಿ ನಾಯಕ ನಾಸಿರ್‌ ಹುಸೇನ್‌ ಆತ್ಮಕಥನವನ್ನು
ಓದುತ್ತಿದ್ದರಂತೆ. ಪಂದ್ಯದ ವೇಳೆ ಶಾಂತಚಿತ್ತತೆಯನ್ನು ಕಾಯ್ದುಕೊಳ್ಳಲು ಮಿಥಾಲಿ ಪುಸ್ತಕ ಓದುವ ಅಭ್ಯಾಸ
ಇಟ್ಟುಕೊಂಡಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ವೇದಾಗೆ ಸಂಗೀತ
ಕೇಳಿದರೆ ಕಾಲು ನಿಲ್ಲಲ್ಲ!

ಆಸೀಸ್‌ ವಿರುದಟಛಿ ಸೆಮಿಫೈನಲ್‌ನಲ್ಲಿ ವೇದಾ ಕೃಷ್ಣಮೂರ್ತಿ, ಮಿಥಾಲಿ ಕುಣಿಯುತ್ತಿದ್ದರು. ಇದರ ರಹಸ್ಯವನ್ನು ಮಿಥಾಲಿ ಬಿಡಿಸಿಟ್ಟಿದ್ದಾರೆ. ವೇದಾ ಉತ್ತಮ ನೃತ್ಯಪಟು. ಸಂಗೀತ ಕೇಳಿದಾಗ ತನ್ನಿಂತಾನೆ ಕುಣಿಯುತ್ತಾರೆ. ಈ ಪಂದ್ಯದಲ್ಲೂ ಹಾಗೆ ಆಯಿತು. ಆಗ ಅವರನ್ನು ನಾನೂ ಕೂಡಿಕೊಂಡೆ ಎಂದು ಮಿಥಾಲಿ ಹೇಳಿದ್ದಾರೆ.
 

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.