ಟಿ20 ವಿಶ್ವಕಪ್ಗೆ ಸಿದ್ಧತೆ; ಭಾರತ-ಆಸ್ಟ್ರೇಲಿಯ ಟಿ20 ಸರಣಿ ಇಂದಿನಿಂದ
Team Udayavani, Sep 20, 2022, 8:00 AM IST
ಮೊಹಾಲಿ: ಮುಂಬರುವ ಟಿ20 ವಿಶ್ವಕಪ್ಗೆ ಸಿದ್ಧತೆ ನಡೆಸುವ ಸಲುವಾಗಿ ಭಾರತ ಮತ್ತು ಆಸ್ಟ್ರೇಲಿಯ ತಂಡಗಳು ಮಂಗಳವಾರದಿಂದ 3 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿವೆ. ಈ ಸರಣಿಯಲ್ಲಿ ಭಾಗವಹಿಸಲು ಆಸ್ಟ್ರೇಲಿಯ ತಂಡವು ಈಗಾಗಲೇ ಭಾರತದಲ್ಲಿ ಇದ್ದು ಮೊಹಾಲಿಯಲ್ಲಿ ತರಬೇತಿ ನಡೆಸುತ್ತಿದೆ.
ಈ ಸರಣಿಯ ಮೊದಲ ಪಂದ್ಯವು ಮಂಗಳವಾರ ಮೊಹಾಲಿಯ ಇಂದರ್ಜಿತ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯ ಲಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಸರಣಿಯ ಇನ್ನುಳಿದ ಎರಡು ಪಂದ್ಯಗಳು ಅನುಕ್ರಮವಾಗಿ ನಾಗ್ಪುರ ಮತ್ತು ಹೈದರಾಬಾದ್ನಲ್ಲಿ ನಡೆಯಲಿದೆ. ಈ ಸರಣಿಯ ಬಳಿಕ ಭಾರತೀಯ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಸರಣಿಯಲ್ಲಿ ಆಡಲಿದೆ.
ಭಾರತೀಯ ತಂಡವನ್ನು ರೋಹಿತ್ ಶರ್ಮ ಮತ್ತು ಆಸ್ಟ್ರೇಲಿಯ ತಂಡವನ್ನು ಆರನ್ ಫಿಂಚ್ ಮುನ್ನಡೆಸಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯ ಇಷ್ಟರ ವರೆಗೆ 23 ಟಿ20 ಪಂದ್ಯಗಳಲ್ಲಿ ಮುಖಾ ಮುಖೀಯಾಗಿದ್ದು ಭಾರತ 13ರಲ್ಲಿ ಗೆಲುವು ಸಾಧಿಸಿದೆ. ಸಮಗ್ರವಾಗಿ ಆಸ್ಟ್ರೇಲಿಯ ಇಷ್ಟರವರೆಗೆ 162 ಟಿ20 ಪಂದ್ಯಗಳನ್ನಾಡಿದ್ದು 85ರಲ್ಲಿ ಗೆದ್ದಿದ್ದರೆ 71 ಪಂದ್ಯಗಳಲ್ಲಿ ಸೋತಿದೆ. ಇದೇ ವೇಳೆ ಭಾರತ 174 ಟಿ20 ಪಂದ್ಯಗಳಲ್ಲಿ ಆಡಿದ್ದು 111ರಲ್ಲಿ ಜಯ ಸಾಧಿಸಿದ್ದರೆ 55ರಲ್ಲಿ ಸೋಲನ್ನು ಕಂಡಿದೆ. ಈ ಸಂಖ್ಯೆಯನ್ನು ಗಮನಿಸಿದರೆ ಟಿ20ಯಲ್ಲಿ ಭಾರತವು ಆಸ್ಟ್ರೇಲಿಯಕ್ಕಿಂತ ಬಲಿಷ್ಠವಾಗಿದೆ ಎಂಬು ದನ್ನು ಹೇಳಬಹುದು. ಮಾತ್ರವಲ್ಲದೇ ಈ ಸರಣಿ ಭಾರತದಲ್ಲಿ ನಡೆಯುವ ಕಾರಣ ಭಾರತ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ.
3ನೇ ಕ್ರಮಾಂಕದಲ್ಲಿ ಸ್ಮಿತ್
ಗಾಯಗೊಂಡಿರುವ ಮಿಚೆಲ್ ಮಾರ್ಷ್ ಈ ಸರಣಿಯಲ್ಲಿ ಆಡುವು ದಿಲ್ಲ. ಅವರ ಬದಲಿಗೆ ಸ್ಟೀವನ್ ಸ್ಮಿತ್ 3ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ ಎಂದು ಆರನ್ ಫಿಂಚ್ ಹೇಳಿದ್ದಾರೆ. ಆದರೆ ಸ್ಮಿತ್ ಅವರು ವಿಶ್ವಕಪ್ನ ಪ್ರಥಮ ಆಯ್ಕೆಯ ಹನ್ನೊಂದರ ಬಳಗದಲ್ಲಿ ಸೇರಿಕೊಳ್ಳುವುದು ಅನುಮಾನವೆಂದು ಹೇಳಲಾಗಿದೆ.
ಸಂಭಾವ್ಯ ತಂಡಗಳು
ಭಾರತ:
ಕೆಎಲ್ ರಾಹುಲ್, ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ರಿಷಬ್ ಪಂತ್/ದಿನೇಶ್ ಕಾರ್ತಿಕ್, ಸೂರ್ಯಕುಮಾರ್ ಯಾದವ್, ಹಾರ್ದಿಇಕ್ ಪಾಂಡ್ಯ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಆರ್. ಅಶ್ವಿನ್/ಯಜುವೇಂದ್ರ ಚಹಲ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ
ಆಸ್ಟ್ರೇಲಿಯ:
ಆರನ್ ಫಿಂಚ್, ಮ್ಯಾಥ್ಯೂ ವೇಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್ವೆಲ್, ಟಿಮ್ ಡೇವಿಡ್, ಕ್ಯಾಮರಾನ್ ಗ್ರೀನ್, ಆಸ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಡೇನಿಯಲ್ ಸ್ಯಾಮ್ಸ್, ಆ್ಯಡಂ ಝಂಪ, ಜೋಶ್ ಹ್ಯಾಝೆಲ್ವುಡ್.
ಪಂದ್ಯ ಆರಂಭ: ಸಂಜೆ 7.30
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ