ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಶುಭಾಶಯ
Team Udayavani, Jun 24, 2021, 6:45 AM IST
ಹೊಸದಿಲ್ಲಿ: “ವಿಶ್ವ ಒಲಿಂಪಿಕ್ ದಿನ’ವಾದ ಬುಧವಾರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳಲಿರುವ ದೇಶದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದರು.
“ಇಂದು ಒಲಿಂಪಿಕ್ ದಿನ. ಇನ್ನು ಕೆಲವೇ ದಿನಗಳಲ್ಲಿ ಟೋಕಿಯೊ ಒಲಿಂಪಿಕ್ಸ್ ಆರಂಭವಾಗಲಿದೆ. ನಮ್ಮ ಶ್ರೇಷ್ಠ ಕ್ರೀಡಾಪಟುಗಳು ಇದರಲ್ಲಿ ಪಾಲ್ಗೊಳ್ಳಲಿದ್ದು, ಇವರೆಲ್ಲರಿಗೂ ಶುಭ ಹಾರೈಕೆಗಳು’ ಎಂದು ಮೋದಿ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ರವಾನಿಸಿದರು. ಇದೇ ಸಂದರ್ಭದಲ್ಲಿ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಪದಕಗಳನ್ನು ತಂದಿತ್ತ ಮಾಜಿ ಕ್ರೀಡಾಪಟುಗಳಿಗೂ ಮೋದಿ ಗೌರವ ಸಲ್ಲಿಸಿದರು.
“ಹಿಂದಿನ ಒಲಿಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಎಲ್ಲ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಇವರೆಲ್ಲರ ಸಾಧನೆ ಪ್ರಶಂಸನೀಯ. ಕ್ರೀಡೆಗೆ ಇವರು ಸಲ್ಲಿಸಿದ ಕೊಡುಗೆಯಿಂದ, ಇತರರಿಗೆ ತುಂಬಿದ ಸ್ಫೂರ್ತಿಯಿಂದ ದೇಶವೇ ಹೆಮ್ಮೆಪಟ್ಟಿದೆ’ ಎಂದು ಮೋದಿ ಗುಣಗಾನ ಮಾಡಿದರು.
ಒಲಿಂಪಿಕ್ಸ್ ಸ್ಥಳಗಳಲ್ಲಿ ಮದ್ಯ ನಿಷೇಧ :
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ಗೆ ಸರಿಯಾಗಿ ಒಂದು ತಿಂಗಳು ಬಾಕಿ ಇರುವಾಗಲೇ ಕ್ರೀಡಾಕೂಟ ನಡೆಯುವ ಪ್ರಮುಖ ಸ್ಥಳಗಳಲ್ಲಿ ಮಧ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ.
“ತಜ್ಞರ ಸಲಹೆಯನ್ನು ಅನುಸರಿಸಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಒಲಿಂಪಿಕ್ಸ್ ಕ್ರೀಡೆಗಳು ನಡೆಯುವ ಟೋಕಿಯೊ, ಒಸಾಕ ಮತ್ತಿತರ ಸ್ಥಳಗಳಲ್ಲಿ ಕ್ರೀಡಾಕೂಟ ಮುಗಿಯುವ ವರೆಗೆ ಮದ್ಯ ಸೇವನೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಕೂಟದ ಸಂಘಟನಾ ಸಮಿತಿ ನಿರ್ಧರಿಸಿದೆ’ ಎಂದು ಟೋಕಿಯೊ ಒಲಿಂಪಿಕ್ಸ್ ಅಧ್ಯಕ್ಷ ಸೀಕೊ ಹಶಿಮೊಟೊ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ