Mumbai; ದಾಖಲೆಯ ಶತಕದೊಂದಿಗೆ ಕಮ್ ಬ್ಯಾಕ್ ಮಾಡಿದ ಪೃಥ್ವಿ ಶಾ


Team Udayavani, Feb 10, 2024, 9:30 AM IST

ದಾಖಲೆಯ ಶತಕದೊಂದಿಗೆ ಕಮ್ ಬ್ಯಾಕ್ ಮಾಡಿದ ಪೃಥ್ವಿ ಶಾ

ರಾಯ್ಪುರ: ಪ್ರತಿಭಾನ್ವಿತ ಆರಂಭಿಕ ಆಟಗಾರ ಪೃಥ್ವಿ ಶಾ ಅವರು ವೃತ್ತಿಪರ ಕ್ರಿಕೆಟ್ ಗೆ ಭರ್ಜರಿ ಶತಕದೊಂದಿಗೆ ಕಮ್ ಬ್ಯಾಕ್ ಮಾಡಿದ್ದಾರೆ. ಛತ್ತೀಸ್ ಗಢ್ ವಿರುದ್ಧ ಗ್ರೂಪ್ ಬಿ ರಣಜಿ ಟ್ರೋಫಿ ಪಂದ್ಯದಲ್ಲಿ ಪೃಥ್ವಿ ಶಾ ಭರ್ಜರಿ ಶತಕ ಸಿಡಿಸಿದ್ದಾರೆ.

ಮುಂಬೈ ತಂಡದ ಪರ ಆಡುವ 24 ವರ್ಷದ ಶಾ ಪ್ರಥಮ ಇನ್ನಿಂಗ್ಸ್ ನಲ್ಲಿ 185 ಎಸೆತಗಳಲ್ಲಿ 159 ರನ್ ಬಾರಿಸಿದರು. ಇದರಲ್ಲಿ ಅವರು 18 ಬೌಂಡರಿ ಮತ್ತು ಮೂರು ಸಿಕ್ಸರ್ ಚಚ್ಚಿದರು.

ಶಾ ಅವರು ಊಟದ ವಿರಾಮದ ಶತಕದ ಗಡಿ ದಾಟಿದರು. ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯದ ಮೊದಲ ದಿನದಾಟದ ಆರಂಭಿಕ ಅವಧಿಯಲ್ಲಿ ಎರಡು ಶತಕಗಳನ್ನು ಗಳಿಸಿದ ಮೊದಲ ಭಾರತೀಯರಾದರು.

ಈ ಹಿಂದೆ ರಣಜಿ ಟ್ರೋಫಿ ಪಂದ್ಯವೊಂದರಲ್ಲಿ ಅವರು 383 ಎಸೆತಗಳಲ್ಲಿ 379 ರನ್ ಗಳಿಸುವ ವೇಳೆ ಅಸ್ಸಾಂ ವಿರುದ್ಧ ಇದೇ ರೀತಿಯ ಸಾಧನೆಯನ್ನು ಮಾಡಿದ್ದರು. ಇದು ಸಾರ್ವಕಾಲಿಕ ಎರಡನೇ ಅತಿ ಹೆಚ್ಚು ರಣಜಿ ಟ್ರೋಫಿ ಸ್ಕೋರ್ ಆಗಿತ್ತು.

ಭೂಪೇನ್ ಲಾಲ್ವಾನಿ ಜೊತೆಗಿನ ಶಾ ಅವರ ಜೊತೆಯಾಟವು 244 ರನ್‌ಗಳ ಬೃಹತ್ ಆರಂಭಿಕ ಜೊತೆಯಾಟವನ್ನು ನಿರ್ಮಿಸಿತು. ಲಾಲ್ವಾನಿ 238 ಎಸೆತಗಳಲ್ಲಿ 102 ರನ್‌ ಗಳ ಕೊಡುಗೆ ನೀಡಿದರು.

41 ಬಾರಿ ರಣಜಿ ಚಾಂಪಿಯನ್‌ ಮುಂಬೈ ತಂಡವು ದಿನದಾಟ ಅಂತ್ಯಕ್ಕೆ ನಾಲ್ಕು ವಿಕೆಟ್ ನಷ್ಟಕ್ಕೆ 310 ರನ್ ಗಳಿಸಿದೆ.

ಕಳೆದ ವರ್ಷ ಆಗಸ್ಟ್ 13 ರ ನಂತರ ಅವರು ಮೊದಲು ಬಾರಿ ವೃತ್ತಿಪರ ಕ್ರಿಕೆಟ್ ಗೆ ಮರಳಿದ್ದಾರೆ. ಇಂಗ್ಲಿಷ್ ಕೌಂಟಿ ಚಾಂಪಿಯನ್‌ ಶಿಪ್‌ ನಲ್ಲಿ ನಾರ್ತಂಟ್ಸ್‌ ಪರವಾಗಿ ಕೊನೆಯದಾಗಿ ಆಡಿದ್ದರು. ಅವರು ಭಾರತಕ್ಕಾಗಿ ಕೊನೆಯ ಬಾರಿಗೆ ಜುಲೈ 2021 ರಲ್ಲಿ ಕಾಣಿಸಿಕೊಂಡಿದ್ದರು.

ಶಾ ಅವರು ಆಗಸ್ಟ್‌ನಲ್ಲಿ ಕೌಂಟಿ ಅವಧಿಯ ಸಮಯದಲ್ಲಿ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದರು, ಲಂಡನ್‌ ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.