ಐಸಿಸಿ ಕಿವುಡರ ವಿಶ್ವಕಪ್ ಕ್ರಿಕೆಟ್ -2022 : ಸಂಭಾವ್ಯರಲ್ಲಿ ಗೋಳಿಹೊಳೆಯ ಪೃಥ್ವಿರಾಜ್
Team Udayavani, Mar 12, 2021, 7:10 AM IST
ಕುಂದಾಪುರ: ಮುಂದಿನ ವರ್ಷ ನಡೆಯಲಿರುವ ಐಸಿಸಿ ಕಿವುಡರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಾಗಿ ಆರಿಸಲಾದ ಭಾರತದ ಸಂಭಾವ್ಯ ತಂಡದಲ್ಲಿ ಕೊಲ್ಲೂರು ಸಮೀಪದ ಗೋಳಿಹೊಳೆಯ ಪೃಥ್ವಿರಾಜ್ ಶೆಟ್ಟಿ ಹುಂಚನಿ ಸ್ಥಾನ ಪಡೆದಿದ್ದಾರೆ.
ತಂಡದ ಅಂತಿಮ 16 ಮಂದಿಯ ಆಯ್ಕೆ ಪ್ರಕ್ರಿಯೆ ಅಕ್ಟೋಬರ್ನಲ್ಲಿ ನಡೆಯಲಿದ್ದು, ಇದಕ್ಕೂ ಮೊದಲು ಅಂತಿಮ 41 ಮಂದಿಯ ಸಂಭಾವ್ಯ ತಂಡವನ್ನು ಪ್ರಕಟಿಸಲಾಗಿದೆ. ಇದರಲ್ಲಿ 30 ವರ್ಷದ ಪೃಥ್ವಿರಾಜ್ ಶೆಟ್ಟಿ ಕಾಣಿಸಿಕೊಂಡಿದ್ದು, ಭಾರತ ತಂಡ ದಲ್ಲಿ ಸ್ಥಾನ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇವರೊಂದಿಗೆ ರಾಜ್ಯದ ಅನ್ಸಿಲ್ ಪಿಂಟೋ ಮತ್ತು ಶೋಯಿಬ್ ಮಹಮ್ಮದ್ ಕೂಡ ಆಯ್ಕೆಯಾಗಿದ್ದಾರೆ.
ಪ್ರತಿಭಾವಂತ ಆಟಗಾರ :
ಗೋಳಿಹೊಳೆ ಗ್ರಾಮದ ಹುಂಚನಿಯ ಸುಭಾಶ್ಚಂದ್ರ ಶೆಟ್ಟಿ- ಶೀಲಾವತಿ ದಂಪತಿಯ ಮೂವರು ಮಕ್ಕಳಲ್ಲಿ ಎರಡನೆಯವರಾದ ಪೃಥ್ವಿ ರಾಜ್ ಹುಟ್ಟು ಕಿವುಡರಾದರೂ ಕ್ರಿಕೆಟ್ ಸಾಧನೆಗೆ ಅಡ್ಡಿಯಾಗಲಿಲ್ಲ. ಅಂಪಾರು ಮೂಡುಬಗೆಯ “ವಾಗ್ಜೋತಿ ವಿಶೇಷ ಮಕ್ಕಳ ಶಾಲೆ’ಯ ಹಳೆ ವಿದ್ಯಾರ್ಥಿಯಾದ ಇವರು, ವೇಗದ ಬೌಲಿಂಗ್ ಜತೆಗೆ ಕೆಳ ಕ್ರಮಾಂಕದ ಬ್ಯಾಟ್ಸ್ಮನ್ ಆಗಿಯೂ ಮಿಂಚುತ್ತಿದ್ದಾರೆ. ಪ್ರಸ್ತುತ ಕರ್ನಾಟಕ ಮೂಗರ ಕ್ರಿಕೆಟ್ ತಂಡದ ಆಟಗಾರನಾಗಿದ್ದಾರೆ. ಕರ್ನಾಟಕ ತಂಡದ ನಾಯಕನಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಗ್ರಾಫಿಕ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ ಪೃಥ್ವಿರಾಜ್ ಕ್ರಿಕೆಟಿಗಾಗಿ ಈ ವೃತ್ತಿಯನ್ನು ತ್ಯಜಿಸಿದ್ದಾರೆ. ವಿಶೇಷ ಕ್ರಿಕೆಟ್ ಟೂರ್ನಿಗಳಲ್ಲಿ ಮಾತ್ರವಲ್ಲದೆ ಎಲ್ಲರಂತೆ ಎಂಪಿಲ್ನಲ್ಲಿ ಐಕಾನ್ ಆಟಗಾರನಾಗಿ, ಕುಂದಾಪುರದ ಟಾರ್ಪಡೋಸ್ ತಂಡದ ಆಟಗಾರ ನಾಗಿಯೂ ಮಿಂಚಿದ್ದಾರೆ.
ಹೊಸದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ವಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಪೃಥ್ವಿರಾಜ್ ಭಾರತೀಯ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.
ನನಗೆ ಬೆಂಬಲವಿತ್ತ ಎಲ್ಲರಿಗೂ ಧನ್ಯವಾದಗಳು. ಭಾರತ ತಂಡಕ್ಕೆ ಆಯ್ಕೆಯಾಗುವ ನನ್ನ ಬಹು ದಿನಗಳ ಕನಸು ಈಡೇರುವ ಹಂತದಲ್ಲಿದೆ. ನಿಮ್ಮ ಶುಭ ಹಾರೈಕೆಗಳಿರಲಿ. -ಪೃಥ್ವಿರಾಜ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ