ಪ್ರಶಸ್ತಿ ಗೆಲ್ಲುವುದೇ ನಮ್ಮ ಗುರಿ: ಪುನೇರಿ ಕೋಚ್ ಬಿ.ಸಿ. ರಮೇಶ್‌


Team Udayavani, Oct 5, 2017, 6:45 AM IST

Ramesh-05.jpg

ಚೆನ್ನೈ: ಪುನೇರಿ ಪಲ್ಟಾನ್ಸ್‌ ತಂಡ ಪ್ರೊ ಕಬಡ್ಡಿ ಲೀಗ್‌ ಐದರ ಪ್ರಶಸ್ತಿ ಗೆಲ್ಲುವ ಫೇವರಿಟ್‌ ತಂಡಗಳಲ್ಲಿ ಒಂದಾಗಿದೆ. ಕಡಿಮೆ ಪಂದ್ಯಗಳಲ್ಲಿ ಗರಿಷ್ಠ ಗೆಲುವು ದಾಖಲಿಸಿರುವ ಪುನೇರಿ ಈವರೆಗೆ ಆಡಿದ 14 ಪಂದ್ಯಗಳಲ್ಲಿ ಕೇವಲ ಮೂರರಲ್ಲಿ ಸೋತಿದೆ. 11 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದ್ದು 57 ಅಂಕಗಳೊಂದಿಗೆ “ಎ’ ಬಣದಲ್ಲಿ 3ನೇ ಸ್ಥಾನದಲ್ಲಿದೆ.

ಚೆನ್ನೈ ಚರಣದಲ್ಲಿ ಆಡಿದ 2 ಪಂದ್ಯಗಳಲ್ಲಿ ಪುನೇರಿ ಪಲ್ಟಾನ್ಸ್‌ ತಂಡ ಆತಿಥೇಯ ತಮಿಳ್‌ ತಲೈವಾಸ್‌ ಮತ್ತು ಯುಪಿ ಯೋಧಾ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಕನ್ನಡಿಗ ಕೋಚ್‌ ಬಿ.ಸಿ. ರಮೇಶ್‌ ಅವರ ಸಮರ್ಥ ಮಾರ್ಗದರ್ಶನದಿಂದಲೇ ಪುನೇರಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ “ಉದಯವಾಣಿ’ ಬಿ.ಸಿ. ರಮೇಶ್‌ ಜತೆ ಮಾತುಕತೆ ನಡೆಸಿತು.

11 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದೀರಿ ಹೇಗನಿಸುತ್ತಿದೆ?
   “ನಮ್ಮ ಆಟಗಾರರು ಅಮೋಘ ರೀತಿಯಲ್ಲಿ ಆಡುತ್ತಿದ್ದಾರೆ. ದೀಪಕ್‌ ಹೂಡ ನಮ್ಮ ಸ್ಟಾರ್‌ ರೈಡರ್‌. ಅವರೊಬ್ಬರ ಆಟದಿಂದಲೇ ನಾವು ಕೆಲವು ಪಂದ್ಯಗಳಲ್ಲಿ ಗೆದ್ದಿದ್ದೇವೆ. ಸಂದೀಪ್‌ ನರ್ವಾಲ್‌, ಮೊನು, ರವಿ ಕುಮಾರ್‌, ರಾಜೇಶ್‌ ಉತ್ತಮವಾಗಿ ಆಡುತ್ತಿದ್ದಾರೆ. ಸಂಘಟಿತ ಪ್ರಯತ್ನದಿಂದ ಕಡಿಮೆ ಪಂದ್ಯಗಳಲ್ಲಿ ಗರಿಷ್ಠ 11 ಪಂದ್ಯ ಗೆದ್ದಿದ್ದೇವೆ. ಕೇವಲ ಮೂರರಲ್ಲಿ ಸೋತಿದ್ದೇವೆ’.

ನಿಮ್ಮ  ಮುಂದಿನ ಗುರಿ ಏನು?
   “ನಾವು ಈರವರೆಗೆ ಬಿ ವಲಯದಲ್ಲಿ ಬೆಂಗಳೂರು ಬುಲ್ಸ್‌ ಸಹಿತ ಜೈಪುರ ಮತ್ತು ಗುಜರಾತ್‌ ವಿರುದ್ಧ ಸೋತಿದ್ದೇವೆ. ಜೈಪುರ ಚರಣದಲ್ಲಿ ನಾವು ಬೆಂಗಾಲ್‌ ವಾರಿಯರ್ ಮತ್ತು ಜೈಪುರ ಮತ್ತೆ ತವರಿನಲ್ಲಿ ಗುಜರಾತ್‌ ವಿರುದ್ಧ ಜಯ ಪಡೆದು ಎ ವಲಯದಲ್ಲಿ ಅಗ್ರಸ್ಥಾನದೊಂದಿಗೆ ಸೂಪರ್‌ ಪ್ಲೇ ಆಫ್ಗೆ ಹೋಗುವುದು ಮತ್ತು ಚೊಚ್ಚಲ ಬಾರಿ ಪ್ರಶಸ್ತಿ ಗೆಲ್ಲುವುದು ನಮ್ಮ ಗುರಿಯಾಗಿದೆ. ನಾವು ಈ ಹಿಂದಿನ ಪ್ರೊ ಕಬಡ್ಡಿ ಲೀಗ್‌ನಲ್ಲಿ ಎರಡು ಬಾರಿ ಸೆಮಿಫೈನಲ್‌ ತಲುಪಿದ್ದೇವೆ. ಇಷ್ಟರವರೆಗಿನ ನಿರ್ವಹಣೆಯನ್ನು ನೋಡಿದರೆ ನಮಗೆ ಗೆಲ್ಲುವ ಉತ್ತಮ ಅವಕಾಶವಿದೆ. ಹಾಗಾಗಿ ಪ್ರಶಸ್ತಿ ಗೆಲ್ಲುವುದೇ ನಮ್ಮ ಏಕೈಕ ಗುರಿಯಾಗಿದೆ.

ತವರಿನಲ್ಲಿ ನಿಮ್ಮ ಹೋರಾಟಕ್ಕೆ ಹೇಗೆ ತಯಾರಿ ನಡೆಸಿದ್ದೀರಿ?
    “ನಮ್ಮ ಆಟಗಾರರು ದಿನವೂ ಕಠಿನ ತರಬೇತಿ ನಡೆಸುತ್ತಿದ್ದಾರೆ. ತವರಿನಲ್ಲಿ ಪ್ರೇಕ್ಷಕರ ಭಾರೀ ಬೆಂಬಲ ನಮಗಿರುವ ಕಾರಣ ಉತ್ತಮ ನಿರ್ವಹಣೆ ನೀಡಲು ಪ್ರೇರಣೆಯಾಗಲಿದೆ. ಹಾಗಾಗಿ ಗರಿಷ್ಠ ಗೆಲುವು ದಾಖಲಿಸಲು ಶಕ್ತಿಮೀರಿ ಪ್ರಯತ್ನ ನಡೆಸಲಿದ್ದೇವೆ’.

ನಿಮ್ಮ ವಲಯದಲ್ಲಿ ಯಾವ ತಂಡ ಸೂಪರ್‌ ಪ್ಲೇ ಆಫ್ಗೆ ತೇರ್ಗಡೆಯಾಗಬಹುದು ?
     “ತವರಿನಲ್ಲಿ  ನಾವು ಗುಜರಾತ್‌ ವಿರುದ್ಧ ಆಡಬೇಕಾಗಿದೆ. ಗುಜರಾತ್‌ ವಿರುದ್ಧ ಗೆದ್ದರೆ ನಾವು ಅಗ್ರಸ್ಥಾನಿಯಾಗಿ ಮುನ್ನಡೆಯಬಹುದು. ಗುಜರಾತ್‌, ಹರಿಯಾಣ ಮುನ್ನಡೆಯಬಹುದು’.

ಪ್ರೊ ಕಬಡ್ಡಿ ಲೀಗ್‌ ಕುರಿತು ಎರಡು ಮಾತು…
     “ಪ್ರೊ ಕಬಡ್ಡಿ ಲೀಗ್‌ ಆರಂಭವಾದ ಬಳಿಕ ಕಬಡ್ಡಿ ಕ್ರೀಡೆ ದೇಶದಾದ್ಯಂತ ಬಹಳಷ್ಟು  ಜಯಪ್ರಿಯಗೊಂಡಿದೆ. ಹಿಂದೆ ನಮ್ಮನ್ನು ಗುರುತಿಸುವವರಿರಲಿಲ್ಲ. ಆದರೆ ಇದೀಗ ನಾವು ಯಾರೆಂದು ಹೆಚ್ಚಿನವರಿಗೆ ತಿಳಿದಿದೆ. ಹಳ್ಳಿ ಹಳ್ಳಿಗಳಲ್ಲೂ ಎಳೆಯ ಮಕ್ಕಳು ಕಬಡ್ಡಿ ಆಟ ಆಡುತ್ತಿದ್ದಾರೆ. ಯುವ ಕಬಡ್ಡಿ ಆಟಗಾರರು ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿದ್ದಾರೆ. ಅವರಿಗೆ ಬಹಳಷ್ಟು ಪ್ರೋತ್ಸಾಹ ಸಿಕ್ಕಿದೆ. ಮಾತ್ರವಲ್ಲದೇ ಆಟಗಾರರ ಆರ್ಥಿಕ ಸ್ಥಿತಿ ಸುಧಾರಿಸಿದೆ, ಜೀವನಶೈಲಿ ಬದಲಾಗಿದೆ. ಕ್ರಿಕೆಟ್‌ ಬಿಟ್ಟರೆ ಕಬಡ್ಡಿಯೇ ದೇಶದ ಎರಡನೇ ಜನಪ್ರಿಯ ಕ್ರೀಡೆಯಾಗಿದೆ. ಪ್ರೊ ಕಬಡ್ಡಿಯಲ್ಲಿ ದೇಶ ವಿದೇಶದ ಆಟಗಾರರು ಭಾಗವಹಿಸುತ್ತಿರುವ ಕಾರಣ ಭವಿಷ್ಯದಲ್ಲಿ ಕಬಡ್ಡಿ ಒಲಿಂಪಿಕ್ಸ್‌ಗೆ ಸೇರ್ಪಡೆಯಾಗುವುದರಲ್ಲಿ ಸಂದೇಹವಿಲ್ಲ’.

– ಶಂಕರನಾರಾಯಣ ಪಿ.

ಟಾಪ್ ನ್ಯೂಸ್

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.