ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿಗೆ ತಿವಿದೀತೇ ಬೆಂಗಳೂರು ಬುಲ್ಸ್‌?

ಯುಪಿ ಯೋಧಾಸ್‌-ತಮಿಳ್‌ ತಲೈವಾಸ್‌

Team Udayavani, Dec 13, 2022, 7:45 AM IST

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿಗೆ ತಿವಿದೀತೇ ಬೆಂಗಳೂರು ಬುಲ್ಸ್‌?

ಮುಂಬಯಿ: ಪ್ರೊ ಕಬಡ್ಡಿ ಪಂದ್ಯಾವಳಿಯ ಲೀಗ್‌ ಹಂತದ ಸ್ಪರ್ಧೆಗಳಿಗೆ ತೆರೆ ಬಿದ್ದಿದೆ. ಮಂಗಳವಾರ ಎಲಿಮಿನೇಟರ್‌ ಪಂದ್ಯಗಳು ನಡೆಯಲಿದ್ದು, ಬೆಂಗಳೂರು ಬುಲ್ಸ್‌ ಕೂಡ ರೇಸ್‌ನಲ್ಲಿದೆ.

ಒಟ್ಟು 6 ತಂಡಗಳು ದ್ವಿತೀಯ ಸುತ್ತು ತಲುಪಿವೆ. ಮೊದಲೆರಡು ಸ್ಥಾನ ಅಲಂಕರಿಸಿದ ಜೈಪುರ್‌ ಪಿಂಕ್‌ ಪ್ಯಾಂಥರ್ (82 ಅಂಕ) ಮತ್ತು ಪುನೇರಿ ಪಲ್ಟಾನ್‌ (80 ಅಂಕ) ನೇರವಾಗಿ ಸೆಮಿಫೈನಲ್‌ಗೆ ಬಂದಿವೆ. 3ರಿಂದ 6ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ ಸುತ್ತಿನಲ್ಲಿ ಅದೃಷ್ಟಪರೀಕ್ಷೆಗೆ ಇಳಿಯಲಿವೆ. ಇಲ್ಲಿ ಗೆದ್ದ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ. ಸೋತ ತಂಡದ ಅಭಿಯಾನ ಕೊನೆಗೊಳ್ಳಲಿದೆ.

ಎಲಿಮಿನೇಟರ್‌ ಸುತ್ತಿನಲ್ಲಿ ಸ್ಪರ್ಧೆಗೆ ಇಳಿಯುವ ತಂಡಗಳೆಂದರೆ ಬೆಂಗಳೂರು ಬುಲ್ಸ್‌ (74 ಅಂಕ), ಯುಪಿ ಯೋಧಾಸ್‌ (71 ಅಂಕ), ತಮಿಳ್‌ ತಲೈವಾಸ್‌ (66 ಅಂಕ) ಮತ್ತು ದಬಾಂಗ್‌ ಡೆಲ್ಲಿ (63 ಅಂಕ). ಹರ್ಯಾಣ ಸ್ಟೀಲರ್ ಸ್ವಲ್ಪದರಲ್ಲೇ ಈ ಅವಕಾಶವನ್ನು ಕಳೆದುಕೊಂಡಿತು. ಅದು 61 ಅಂಕಗಳೊಂದಿಗೆ 7ನೇ ಸ್ಥಾನಿಯಾಯಿತು.

ಮಂಗಳವಾರ ರಾತ್ರಿ ಮುಂಬಯಿಯಲ್ಲಿ ನಡೆಯಲಿರುವ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ಮತ್ತು ದಬಾಂಗ್‌ ಡೆಲ್ಲಿ ಮುಖಾಮುಖಿ ಆಗಲಿವೆ. ಅನಂತರ ಯುಪಿ ಯೋಧಾಸ್‌-ತಮಿಳ್‌ ತಲೈವಾಸ್‌ ಎದುರಾಗಲಿವೆ.

ಕೂಟದಲ್ಲಿ ಬಹಳಷ್ಟು ಸಲ ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌ ಕನ್ನಡಿಗರ ನೆಚ್ಚಿನ ತಂಡವಾಗಿದೆ. ರೈಡರ್‌ ಭರತ್‌ ಈ ತಂಡದ ಪ್ರಮುಖ ಆಕರ್ಷಣೆ. ಬುಲ್ಸ್‌ 22 ಲೀಗ್‌ ಪಂದ್ಯಗಳಲ್ಲಿ 13 ಪಂದ್ಯಗಳನ್ನು ಗೆದ್ದಿದೆ. ಎಂಟರಲ್ಲಿ ಸೋತಿದ್ದು, ಒಂದು ಪಂದ್ಯ ಡ್ರಾಗೊಂಡಿದೆ.

ದಬಾಂಗ್‌ ಡೆಲ್ಲಿ 6ನೇ ಸ್ಥಾನಿಯಾಗಿ ಲೀಗ್‌ ವ್ಯವಹಾರ ಮುಗಿಸಿದೆ. 10 ಪಂದ್ಯಗಳನ್ನು ಗೆದ್ದು, ಹತ್ತರಲ್ಲಿ ಸೋತಿದೆ. 2 ಪಂದ್ಯ ಡ್ರಾಗೊಂಡಿದೆ.

ಬುಲ್ಸ್‌ 2-0 ಮುನ್ನಡೆ
ಲೀಗ್‌ ಹಂತದಲ್ಲಿ ಡೆಲ್ಲಿ ವಿರುದ್ಧ ಆಡಿದ ಎರಡೂ ಪಂದ್ಯಗಳಲ್ಲಿ ಬುಲ್ಸ್‌ ಜಯ ಸಾಧಿಸಿದ್ದರಿಂದ ಸಹಜವಾಗಿಯೇ ಹೆಚ್ಚಿನ ಆತ್ಮವಿಶ್ವಾಸ ಹೊಂದಿದೆ. ಎರಡೂ ಪಂದ್ಯಗಳ ಆರಂಭದಲ್ಲಿ ಡೆಲ್ಲಿಯೇ ಮುಂದಿದ್ದರೂ ಕೊನೆಯಲ್ಲಿ ಬುಲ್ಸ್‌ ತಿರುಗಿ ಬಿದ್ದು ಗೆಲುವು ಕಾಣುವಲ್ಲಿ ಯಶಸ್ವಿಯಾಗಿತ್ತು.

ರೈಡರ್‌ ಭರತ್‌ ಪ್ರಮುಖ ಆಟಗಾರ. ವಿಕಾಸ್‌ ಕಂಡೋಲ ಗೇಮ್‌ ಚೇಂಜರ್‌ ಆಗಬೇಕಿದೆ. ಸೌರಭ್‌ ನಂದಲ್‌ ಉತ್ತಮ ಲಯದಲ್ಲಿದ್ದಾರೆ. ಅಮನ್‌ ಫಾರ್ಮ್ ಗೆ ಮರಳಿದ್ದರಿಂದ ಬುಲ್ಸ್‌ ಡಿಫೆನ್ಸ್‌ಗೆ ಹೆಚ್ಚಿನ ಬಲ ಬಂದಿದೆ. ರೈಟ್‌ ಕವರ್‌ ಮಾತ್ರ ದುರ್ಬಲ. ಇಲ್ಲಿ ನಾಯಕ ಮಹೇಂದರ್‌ ಸಿಂಗ್‌ ಮೇಲೆ ತುಸು ಒತ್ತಡವಿದೆ.

ರಕ್ಷಣ ವಿಭಾಗ ನಿರೀಕ್ಷಿತ ಯಶಸ್ಸು ಪಡೆಯದಿರುವುದು ಡೆಲ್ಲಿ ಪಾಲಿಗೆ ತುಸು ಹಿನ್ನಡೆಯಾಗಿ ಪರಿಣಮಿಸಿದೆ. ಅಮಿತ್‌ ಹೂಡಾ ಮತ್ತು ಸಂದೀಪ್‌ ಧುಲ್‌ ಮೇಲೆ ಹೆಚ್ಚಿನ ಭಾರ ಬಿದ್ದಿದೆ. ಆದರೆ ರೈಡಿಂಗ್‌ ವಿಭಾಗ ಬಲಿಷ್ಠವಾಗಿದೆ.
ಈ ಎರಡು ತಂಡಗಳು ಪ್ರೊ ಕಬಡ್ಡಿ ಇತಿಹಾಸದಲ್ಲಿ 19 ಸಲ ಎದುರಾಗಿವೆ. ಡೆಲ್ಲಿ 9, ಬುಲ್ಸ್‌ 8 ಗೆಲುವು ಕಂಡಿದೆ. 2 ಪಂದ್ಯ ಟೈ ಆಗಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.