ಪ್ರೊ ಕಬಡ್ಡಿ: ಡೆಲ್ಲಿ-ಬೆಂಗಾಲ್‌ ಫೈನಲ್‌ ಕಾಳಗ


Team Udayavani, Oct 17, 2019, 6:00 AM IST

kabbadi

ಅಹ್ಮದಾಬಾದ್‌: ಲೀಗ್‌ ಹಂತದ ಮೊದಲೆರಡು ಸ್ಥಾನ ಅಲಂಕರಿಸಿದ ದಬಾಂಗ್‌ ಡೆಲ್ಲಿ ಮತ್ತು ಬೆಂಗಾಲ್‌ ವಾರಿಯರ್ 7ನೇ ಪ್ರೊ ಕಬಡ್ಡಿ ಪಂದ್ಯಾವಳಿಯ ಪ್ರಶಸ್ತಿ ಕಾಳಗಕ್ಕೆ ಅಣಿಯಾಗಿವೆ. ಯಾರೇ ಗೆದ್ದರೂ ಮೊದಲ ಸಲ ಚಾಂಪಿಯನ್‌ ಆಗಿ ಹೊರಹೊಮ್ಮಲಿವೆ.

ಬುಧವಾರ ನಡೆದ ಸೆಮಿಫೈನಲ್‌ ಮುಖಾ ಮುಖೀಯಲ್ಲಿ ಹಾಲಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಮತ್ತು ಯು ಮುಂಬಾ ಪರಾಭವಗೊಂಡವು. ಮೊದಲ ಸೆಣಸಾಟದಲ್ಲಿ ದಬಾಂಗ್‌ ಡೆಲ್ಲಿ 44-38 ಅಂತರದಿಂದ ಬುಲ್ಸ್‌ ತಂಡವನ್ನು ಕೆಡವಿತು. ಅನಂತರದ ರೋಚಕ ಮುಖಾಮುಖೀಯಲ್ಲಿ ಬೆಂಗಾಲ್‌ 37-35 ಅಂಕಗಳಿಂದ ಮುಂಬಾವನ್ನು ಮನೆಗಟ್ಟಿತು.

ಪವನ್‌ ಹೋರಾಟ ವ್ಯರ್ಥ
ಪವನ್‌ ಸೆಹ್ರಾವತ್‌ (18 ರೈಡಿಂಗ್‌ ಅಂಕ) ಪ್ರಚಂಡ ರೈಡಿಂಗ್‌ ಪ್ರದರ್ಶಿಸಿದರು. ಬೆಂಗಳೂರು ಬುಲ್ಸ್‌ ತಂಡವನ್ನು ಗೆಲ್ಲಿಸುವ ಎಲ್ಲ ಪ್ರಯತ್ನ ನಡೆಸಿದರು. ಮತ್ತೂಮ್ಮೆ ವನ್‌ ಮ್ಯಾನ್‌ ಆರ್ಮಿಯಾಗಿ ಮಿಂಚಿದರು. ಡೆಲ್ಲಿಗೆ ಕಬ್ಬಿಣದ ಕಡಲೆಯಾದರು. ಆದರೆ ಉಳಿದ ಆಟಗಾರರು ಕಳಪೆ ಆಟವಾಡಿದರು.

ಬುಲ್ಸ್‌ಗೆ ತಿವಿದ ನವೀನ್‌, ಚಂದ್ರನ್‌
ಡೆಲ್ಲಿ ತನ್ನ ಸಾಮರ್ಥ್ಯವನ್ನು ಪಣಕ್ಕಿಟ್ಟು ಆಡಿತು. ನವೀನ್‌ ಕುಮಾರ್‌ (15 ರೈಡಿಂಗ್‌ ಅಂಕ) ಹಾಗೂ ಚಂದ್ರನ್‌ ರಂಜಿತ್‌ (9 ಆಲ್‌ರೌಂಡರ್‌ ಅಂಕ) ಭರ್ಜರಿ ಪ್ರದರ್ಶನವಿತ್ತರು.

ನವೀನ್‌ ಕುಮಾರ್‌ 22 ರೈಡಿಂಗ್‌ ಮಾಡಿದರು. 13 ಟಚ್‌ ಪಾಯಿಂಟ್‌ ಜತೆಗೆ 2 ಬೋನಸ್‌ ಅಂಕವನ್ನೂ ತಂದಿತ್ತರು. ಅವರಿಗೆ ಮತ್ತೂಂದು ತುದಿಯಲ್ಲಿ ಚಂದ್ರನ್‌ ರಂಜಿತ್‌ ಆಲ್‌ರೌಂಡ್‌ ಆಟದ ಮೂಲಕ ನೆರವು ನೀಡಿದರು.

ಉಳಿದಂತೆ ವಿಜಯ್‌ (3 ಅಂಕ), ರವೀಂದರ್‌ ಪಹಾಲ್‌ (3 ಟ್ಯಾಕಲ್‌ ಅಂಕ), ಜೋಗಿಂದರ್‌ ನರ್ವಾಲ್‌ (3 ಟ್ಯಾಕಲ್‌ ಅಂಕ) ಗೆಲುವಿಗಾಗಿ ಶ್ರಮಿಸಿದರು.

ಪವನ್‌ ಏಕಾಂಗಿ ಹೋರಾಟ
ಹಾಲಿ ಚಾಂಪಿಯನ್ಸ್‌ ಬುಲ್ಸ್‌ಗೆ ಪವನ್‌ ಸೆಹ್ರಾವತ್‌ ಎಂಬ ಬೆಂಕಿ ಬಿರುಗಾಳಿಯ ರೈಡರ್‌ ಪ್ರಮುಖ ಶಕ್ತಿಯಾಗಿದ್ದರು. ನಿರೀಕ್ಷೆಯಂತೆ ಅವರು ಅದ್ಭುತ ರೈಡಿಂಗ್‌ ಪ್ರದರ್ಶಿಸಿದರು.

ರಕ್ಷಣಾ ವಿಭಾಗದಲ್ಲಿ ಅನುಭವಿಸಿದ ಭಾರೀ ವೈಫ‌ಲ್ಯ ಬೆಂಗಳೂರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತು.

ಮಹೇಂದರ ಸಿಂಗ್‌ (2 ಟ್ಯಾಕಲ್‌ ಅಂಕ), ಸೌರಭ್‌ ನಂದಲ್‌ (2 ಟ್ಯಾಕಲ್‌ ಅಂಕ) ಹಾಗೂ ಅಂಕಿತ್‌ (0) ವೈಫ‌ಲ್ಯ ತಂಡವನ್ನು ಸೋಲಿನ ಸುಳಿಗೆ ಸಿಲುಕಿಸಿತು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.