ಪ್ರೊ ಕಬಡ್ಡಿ ಸೀಸನ್‌-9 ಆರಂಭ; ಬೆಂಗಳೂರು ಬುಲ್ಸ್‌ , ದಬಾಂಗ್‌ ಡೆಲ್ಲಿ ಗೆಲುವಿನ ಆರಂಭ


Team Udayavani, Oct 7, 2022, 11:16 PM IST

ಪ್ರೊ ಕಬಡ್ಡಿ ಸೀಸನ್‌-9 ಆರಂಭ; ಬೆಂಗಳೂರು ಬುಲ್ಸ್‌ , ದಬಾಂಗ್‌ ಡೆಲ್ಲಿ ಗೆಲುವಿನ ಆರಂಭ

ಬೆಂಗಳೂರು: ಪ್ರೊ ಕಬಡ್ಡಿ ಸೀಸನ್‌-9ರ ಮೊದಲೆರಡು ಪಂದ್ಯಗಳಲ್ಲಿ ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿ ಮತ್ತು ಆತಿಥೇಯ ಬೆಂಗಳೂರು ಬುಲ್ಸ್‌ ಗೆಲುವು ಸಾಧಿಸಿವೆ. ಆರಂಭಿಕ ಪಂದ್ಯದಲ್ಲಿ ಡೆಲ್ಲಿ 41-27ರಿಂದ ಯು ಮುಂಬಾವನ್ನು, ಬಳಿಕ ಬುಲ್ಸ್‌ 34-29ರಿಂದ ತೆಲುಗು ಟೈಟಾನ್ಸ್‌ಗೆ ಸೋಲುಣಿಸಿತು.

ಬೆಂಗಳೂರು-ಟೈಟಾನ್ಸ್‌ ಪಂದ್ಯ ಜಿದ್ದಾಜಿದ್ದಿಯಿಂದ ಕೂಡಿತ್ತು. ಡಿಫೆನ್ಸ್‌ನಲ್ಲಿ ಅಮೋಘ ನಿರ್ವಹಣೆ ತೋರುವ ಮೂಲಕ ಬುಲ್ಸ್‌ ಗೆಲುವು ಕಂಡಿತು. ಆರಂಭದಲ್ಲಿ ಹಿನ್ನಡೆಯಲ್ಲಿದ್ದ ಬುಲ್ಸ್‌ಗೆ ವಿಕಾಸ್‌ ಖಂಡೋಲ ಲೀಡ್‌ ತಂದುಕೊಡುವಲ್ಲಿ ಯಶಸ್ವಿಯಾದರು. ವಿರಾಮದ ವೇಳೆ ಪಂದ್ಯ 17-17 ಸಮಬಲದಲ್ಲಿತ್ತು.

ರೈಡರ್‌ ನೀರಜ್‌ ನರ್ವಾಲ್‌ ಅತ್ಯಧಿಕ 7 ಅಂಕ, ವಿಕಾಸ್‌ ಖಂಡೋಲ 5 ಅಂಕ, ಡಿಫೆಂಡರ್‌ಗಳಾದ ಮಹೇಂದರ್‌ ಸಿಂಗ್‌ ಮತ್ತು ಸೌರಭ್‌ ನಂದಲ್‌ ತಲಾ 4 ಅಂಕ ಗಳಿಸಿದರು.

ತೆಲುಗು ಟೈಟಾನ್ಸ್‌ ಪರ ರೈಡರ್‌ ವಿನಯ್‌ 7 ಅಂಕ, ಸಿದ್ಧಾರ್ಥ್ ದೇಸಾಯಿ 4 ಅಂಕ ತಂದಿತ್ತರು.

ಮುಂಬಾ ಮೇಲೆ ನವೀನ್‌ ರೈಡ್‌
ಕೂಟದ ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿ ಗೆಲುವಿನ ಆರಂಭ ಪಡೆಯಿತು. ಅದು ಯು ಮುಂಬಾವನ್ನು 41-27 ಅಂಕಗಳಿಂದ ಮಣಿಸಿತು.

ನವೀನ್‌ ಕುಮಾರ್‌ ನೇತೃತ್ವದ ಡೆಲ್ಲಿ ಆರಂಭದಿಂದಲೇ ಮುಂಬಾ ಮೇಲೆ ಸವಾರಿ ಮಾಡತೊಡಗಿತು. ಸ್ವತಃ ನವೀನ್‌ ಕುಮಾರ್‌ ಮುಂಚೂಣಿಯಲ್ಲಿ ಕಾಣಿಸಿಕೊಂಡರು. ಇನ್ನೊಂದೆಡೆ ಮುಂಬಾಗೆ ಫ‌ಜಲ್‌ ಅಟ್ರಾಚಲಿ ಅವರ ಅನುಪಸ್ಥಿತಿ ಭಾರೀ ಹಿನ್ನಡೆಯಾಗಿ ಪರಿಣಮಿಸಿತು. ವಿರಾಮದ ವೇಳೆ ಡೆಲ್ಲಿ 19-10 ಅಂತರದ ಮುನ್ನಡೆಯೊಂದಿಗೆ ಸಂಪೂರ್ಣ ಹಿಡಿತ ಸಾಧಿಸಿತು.

ದ್ವಿತೀಯಾರ್ಧದಲ್ಲೂ ಡೆಲ್ಲಿ ಇದೇ ಲಯದಲ್ಲಿ ಸಾಗಿತು. ಸರಾಸರಿ 10 ಅಂಕಗಳ ಮುನ್ನಡೆಯನ್ನು ಕಾಯ್ದು ಕೊಂಡೇ ಬಂದಿತು. ಸೂಪರ್‌ ರೈಡರ್‌ ನವೀನ್‌ ಪ್ರೊ ಕಬಡ್ಡಿಯ 43ನೇ “ಸೂಪರ್‌ ಟೆನ್‌’ನೊಂದಿಗೆ ಗಮನ ಸೆಳೆದರು. ಈ ಪಂದ್ಯದಲ್ಲಿ ಅವರು ತಂದುಕೊಟ್ಟ ಅಂಕ 13. ಇದರಲ್ಲಿ 11 ಟಚ್‌ ಪಾಯಿಂಟ್‌, 2 ಬೋನಸ್‌ ಪಾಯಿಂಟ್‌ ಸೇರಿತ್ತು.

ಮತ್ತೋರ್ವ ರೈಡರ್‌ ಆಶು ಮಲಿಕ್‌ ಉತ್ತಮ ಪ್ರದರ್ಶನ ನೀಡಿ 7 ಅಂಕ ಗಳಿಸಿದರು. ಡಿಫೆಂಡರ್‌ಗಳಾದ ಸಂದೀಪ್‌ ಧುಲ್‌, ಕೃಶನ್‌, ವಿಶಾಲ್‌ ತಲಾ 4 ಅಂಕ ಸಂಪಾದಿಸಿದರು.

ಮುಂಬಾ ಪರ ಮಿಂಚಿದವರೆಂದರೆ ರೈಡರ್‌ ಆಶಿಷ್‌ (7 ಅಂಕ), ಗುಮಾನ್‌ ಸಿಂಗ್‌ (4 ಅಂಕ) ಮಾತ್ರ. ಡಿಫೆಂಡರ್‌ ರಿಂಕು ಗಳಿಸಿದ್ದು 3 ಅಂಕ ಮಾತ್ರ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.