ಪ್ರೊ ಕಬಡ್ಡಿ: ತವರಲ್ಲಿ  ಬಿದ್ದ ಯುಪಿ ಯೋಧಾ


Team Udayavani, Aug 19, 2017, 12:19 PM IST

19-Sports6.jpg

ಲಕ್ನೋ: ಪ್ರೊ ಕಬಡ್ಡಿ ಲೀಗ್‌ನ ಲಕ್ನೋ ಚರಣದಲ್ಲಿ ರಿಷಾಂಕ್‌ ದೇವಾಡಿಗ (14 ಅಂಕ) ಅವರ ಮಿಂಚಿನ ದಾಳಿ ಹೊರತಾಗಿಯೂ ಯುಪಿ ಯೋಧಾ ತಂಡ 34-37 ಅಂಕಗಳ ಅಂತರದಿಂದ ಯು ಮುಂಬಾ ವಿರುದ್ಧ ಸೋಲು ಕಂಡಿತು. ಇದರೊಂದಿಗೆ ಆತಿಥೇಯ ತಂಡ ತವರಿನಲ್ಲಿ ಮೊದಲ ಮುಖಭಂಗ ಅನುಭವಿಸಿತು. ಒಟ್ಟಾರೆ ಕೂಟದಲ್ಲಿ ಯುಪಿಗೆ 2ನೇ ಸೋಲು ಎದುರಾಯಿತು. ಯು ಮುಂಬಾಗೆ ಇದು ಕೂಟದಲ್ಲಿ ಸಿಕ್ಕಿದ 3ನೇ ಗೆಲುವು ಆಗಿದೆ.

ಮುಂಬಾದ ಶಬ್ಬೀರ್‌ ಮಿಂಚು: ಇಲ್ಲಿನ ಬಾಬು ಬನಾರಸಿ ದಾಸ್‌ ಒಳಾಂಗಣ ಕ್ರೀಡಾಂಗಣ ದಲ್ಲಿ ಶುಕ್ರವಾರ ನಡೆದ ಮೊದಲ ಪಂದ್ಯದಲ್ಲಿ ಯುಪಿ ಯೋಧಾ ಮೊದಲಾರ್ಧದಲ್ಲಿ 15 ಅಂಕ ಗಳಿಸಿ ಮುನ್ನಡೆಯಲ್ಲಿತ್ತು. ಆದರೆ ದ್ವಿತೀಯಾರ್ಧದಲ್ಲಿ ಯುಪಿ ಕುಸಿಯಿತು. ಯು ಮುಂಬಾ ತಿರುಗೇಟು ನೀಡಲು ಆರಂಭಿಸಿತು. ಮುಂಬಾ ತಂಡದ ಸ್ಟಾರ್‌ ಆಟಗಾರ ಶಬ್ಬೀರ್‌ ಬಾಪು (13 ಅಂಕ) ಶ್ರೇಷ್ಠ ರೈಡಿಂಗ್‌ ಮಾಡಿದರು. ಇವರಿಗೆ ನಾಯಕ ಅನೂಪ್‌ (8 ಅಂಕ) ಸಾಥ್‌ ನೀಡಿದರು. ಅನೂಪ್‌ 5 ಬೋನಸ್‌ ಅಂಕ  ಕಲೆ ಹಾಕಿದರು ಎನ್ನುವುದು ವಿಶೇಷ. ಅನುಭವಿ ಸುರೇಂದ್ರ ಸಿಂಗ್‌ 5 ಯಶಸ್ವಿ ಕ್ಯಾಚ್‌ ಮೂಲಕ ಮುಂಬಾ ತಂಡದ ಗೆಲುವಿಗೆ ನೆರವಾದರು. ಯುಪಿ ಯೋಧಾ ಸೋತರೂ ತಂಡದ ನಾಯಕ ನಿತಿನ್‌ ತೋಮರ್‌ (7 ಅಂಕ) ಮತ್ತು ಆಟಗಾರ ಕನ್ನಡಿಗ ರಿಷಾಂಕ್‌ ದೇವಾಡಿಗ ಅದ್ಭುತ ಆಟದ ಮೂಲಕ ಗಮನ ಸೆಳೆದರು.

ತವರಿನಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಯುಪಿಗೆ ಈ ಸೋಲು ತೀವ್ರ ಆಘಾತವನ್ನುಂಟು ಮಾಡಿದೆ. ಈ ಸೋಲಿನಿಂದ ಯುಪಿ ತಾನಾಡಿದ ಆರು ಪಂದ್ಯಗಳಿಂದ ಮೂರರಲ್ಲಿ ಜಯ ಸಾಧಿಸಿ 18 ಅಂಕ ಗಳಿಸಿದ್ದರೆ ಮತ್ತೆ ಗೆಲುವಿನ ಲಯಕ್ಕೆ ಮರಳಿದ ಮುಂಬಾ ತಾನಾಡಿದ ಐದು ಪಂದ್ಯಗಳಲ್ಲಿ ಮೂರನೇ ಜಯ ಸಾಧಿಸಿತು. ಮುಂಬಾ ಈ ಹಿಂದಿನ ಪಂದ್ಯದಲ್ಲಿ ಗುಜರಾತ್‌ ತಂಡಕ್ಕೆ 21-39 ಅಂಕಗಳ ಭಾರೀ ಅಂತರದಿಂದ ಸೋತಿತ್ತು.

ಮುಂಬಾ ತಂಡವು ಶನಿವಾರ ನಡೆಯುವ ಪಂದ್ಯದಲ್ಲಿ ತೆಲುಗು ತಂಡವನ್ನು ಎದುರಿಸಲಿದೆ. ದಿನದ ಇನ್ನೊಂದು ಪಂದ್ಯವು ಯುಪಿ ಯೋಧಾ ಮತ್ತು ಹರಿಯಾಣ ನಡುವೆ ನಡೆಯಲಿದೆ.

ಹರ್ಷವರ್ಧನ ಸುಳ್ಯ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.