ಅಗ್ರಸ್ಥಾನಕ್ಕೆ ನೆಗೆದ ಬೆಂಗಾಲ್‌ ವಾರಿಯರ್ಸ್‌


Team Udayavani, Sep 26, 2019, 5:35 AM IST

e-19

ಜೈಪುರ: ಜೈಪುರ ಚರಣದ ಬುಧವಾರದ ಮೊದಲ ಪ್ರೊ ಕಬಡ್ಡಿ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ಸ್‌ ತಂಡ ತೆಲುಗು ಟೈಟಾನ್ಸ್‌ ವಿರುದ್ಧ ಒಂದಂಕದ ರೋಚಕ ಗೆಲುವು ಸಾಧಿಸಿದೆ. ಈ ಜಿದ್ದಾಜಿದ್ದಿ ಮುಖಾಮುಖೀಯಲ್ಲಿ ಬೆಂಗಾಲ್‌ 40-39 ಅಂಕಗಳಿಂದ ಗೆದ್ದು ಬಂದಿತು.

ಈ ಜಯದ ಬಳಿಕ ಬೆಂಗಾಲ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ (73). ಸುದೀರ್ಘ‌ ಸಮಯದ ತನಕ ಅಗ್ರ ಸ್ಥಾನದಲ್ಲಿದ್ದ ದಬಾಂಗ್‌ ಡೆಲ್ಲಿ ದ್ವಿತೀಯ ಸ್ಥಾನಕ್ಕೆ ಇಳಿದಿದೆ (72). ಈ ಎರಡೂ ತಂಡಗಳು ಈಗಾಗಲೇ ಪ್ಲೇ-ಆಫ್ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿವೆ. ಮತ್ತೂಂದು ಕಡೆ ಸೋತ ತೆಲುಗು ಟೈಟಾನ್ಸ್‌ ಕೂಟದಿಂದ ಹೊರಬಿದ್ದಿದೆ. ಸದ್ಯ ಅದು ಅಂಕಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದೆ (34). ಇದು ಪ್ರೊ ಕಬಡ್ಡಿ ಆವೃತ್ತಿಗಳಲ್ಲೇ ಟೈಟಾನ್ಸ್‌ ತಂಡದ ಅತ್ಯಂತ ಕಳಪೆ ನಿರ್ವಹಣೆಯಾಗಿದೆ.

ಬೆಂಗಾಲ್‌ ಪರ ಮಣಿಂದರ್‌ ಸಿಂಗ್‌ ದಾಳಿಯಲ್ಲಿ ಅಮೋಘ ಪ್ರದರ್ಶನ ನೀಡಿದರು. 22 ಬಾರಿ ಎದುರಾಳಿ ಕೋಟೆಗೆ ನುಗ್ಗಿದ ಅವರು 17 ಅಂಕ ಗಳಿಸಿದರು. ಇವರಿಗೆ ಸರಿಸಮನಾಗಿ ದಾಳಿ ಮಾಡಿದ ತೆಲುಗು ತಂಡದ ಸಿದ್ಧಾರ್ಥ್ ದೇಸಾಯಿ, 16 ಯತ್ನದಲ್ಲಿ 15 ಅಂಕ ಸಂಪಾದಿಸಿದರು. ಇವರು ಎದುರಾಳಿ ಕೋಟೆಗೆ ಪ್ರವೇಶ ಮಾಡಿದ ಸಂದರ್ಭದಲ್ಲೆಲ್ಲ ಯಶಸ್ಸನ್ನೇ ಕಂಡರು. ಹೀಗಾಗಿ ಎರಡೂ ತಂಡಗಳ ನಡುವೆ ನಿಕಟ ಕಾದಾಟ ಸಾಧ್ಯವಾಯಿತು.

8 ಪಂದ್ಯಗಳ ಬಳಿಕ ಜಯ!
ದಿನದ ದ್ವಿತೀಯ ಪಂದ್ಯದಲ್ಲಿ ಜೈಪುರ್‌ ಪಿಂಕ್‌ ಪ್ಯಾಂಥರ್ 43-34 ಅಂತರದಿಂದ ಪುನೇರಿ ಪಲ್ಟಾನ್‌ಗೆ ಸೋಲುಣಿಸಿತು. ಇದು 8 ಪಂದ್ಯಗಳ ಬಳಿಕ ಜೈಪುರ ಸಾಧಿಸಿದ ಮೊದಲ ಗೆಲುವು. ಈ ಅವಧಿಯ 6 ಪಂದ್ಯಗಳಲ್ಲಿ ಸೋಲನುಭವಿಸಿದರೆ, 2 ಪಂದ್ಯ ಟೈ ಆಗಿತ್ತು. ಇದು ಜೈಪುರಕ್ಕೆ ತವರಿನ ಅಂಗಳದಲ್ಲಿ ಒಲಿದ ಮೊದಲ ಜಯವೆಂಬುದು ವಿಶೇಷ.

ನಾಯಕ ದೀಪಕ್‌ ಹೂಡಾ (12), ದೀಪಕ್‌ ನರ್ವಾಲ್‌ (11) ಜೈಪುರ ಪರ ಉತ್ತಮ ಪ್ರದರ್ಶನವಿತ್ತರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.