ತಿರುಗೇಟು ನೀಡಲು ಮುಂಬಾ ಪ್ರಯತ್ನ


Team Udayavani, Aug 29, 2017, 1:08 PM IST

29-SPORTS-8.jpg

ಮುಂಬಯಿ: ಪ್ರೊ ಕಬಡ್ಡಿ ಲೀಗ್‌ ಐದರಲ್ಲಿ ಬಲಿಷ್ಠ ತಂಡಗಳಲ್ಲಿ ಒಂದಾದ ಯು ಮುಂಬಾ ಸತತ ಸೋಲಿನಿಂದ ಕಂಗೆಟ್ಟಿದೆ. ತವರಿನಲ್ಲಿ ನಡೆಯುತ್ತಿರುವ ಪಂದ್ಯಗಳಲ್ಲಿ ಮುಂಬಾ ತಂಡ ತೀವ್ರ ಪೈಪೋಟಿ ನಡೆಸಿಯೂ ಸೋಲುತ್ತಿರುವುದು ಮುಂಬಾಗೆ ಆಘಾತ ನೀಡಿದೆ. 

ಮುಂಬಾ ತಂಡ ತವರಿನಲ್ಲಿ ಇನ್ನು ಮೂರು ಪಂದ್ಯ ಆಡಲಿದ್ದು ತಿರುಗೇಟು ನೀಡಲು ಪ್ರಯತ್ನಿಸಲಿದೆ. ಆದರೆ ಮುಂಬಾ ಗೆಲುವು ಸಾಧಿಸಲು ಬಹಳಷ್ಟು ಶ್ರಮ ವಹಿಸುವ ಅಗತ್ಯವಿದೆ. ಮುಂಬಾ ಮಂಗಳವಾರದ ಪಂದ್ಯದಲ್ಲಿ “ಎ’ ವಲಯದ ಅಗ್ರಸ್ಥಾನಿ ಗುಜರಾತ್‌ ತಂಡವನ್ನು ಎದುರಿಸಲಿದೆ. ಗುಜರಾತ್‌ ತಾನಾಡಿದ 10 ಪಂದ್ಯಗಳಲ್ಲಿ ಏಳರಲ್ಲಿ ಗೆದ್ದು 41 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಮುಂಬಾ ತಾನಾಡಿದ 9 ಪಂದ್ಯಗಳಲ್ಲಿ ಕೇವಲ ಮೂರರಲ್ಲಿ ಗೆದ್ದು 19 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಹಾಗಾಗಿ ಮುಂಬಾ ಗೆಲುವು ಸಾಧಿಸಲು ಗುಜರಾತ್‌ ವಿರುದ್ಧ ಭರ್ಜರಿ ಆಟ ಪ್ರದರ್ಶಿಸಬೇಕಾಗಿದೆ. ಗುಜರಾತ್‌ ಇಷ್ಟರವರೆಗೆ ಸೋಲನ್ನು ಕಾಣದ ಏಕೈಕ ತಂಡವಾಗಿದೆ. 

ತವರಿನ ಮುಂದಿನೆರಡು ಪಂದ್ಯಗಳಲ್ಲಿ ಮುಂಬಾ ಅನುಕ್ರಮವಾಗಿ ಹರಿಯಾಣ ಮತ್ತು ಜೈಪುರ ತಂಡವನ್ನು ಎದುರಿಸಲಿದೆ. ಈ ಎರಡು ತಂಡಗಳು ಅಂಕಪಟ್ಟಿಯಲ್ಲಿ ಅನುಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನದಲ್ಲಿದೆ. ರಕ್ಷಣಾ ಆಟದಲ್ಲಿನ ವೈಫ‌ಲ್ಯದಿಂದ ರವಿವಾರ ನಡೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ನಾವು ಸ್ವಲ್ಪದರಲ್ಲಿ ಸೋಲು ಕಾಣುವಂತಾಯಿತು ಎಂದು ಅನೂಪ್‌ ಹೇಳಿದ್ದಾರೆ. ನಮ್ಮ ರೈಡಿಂಗ್‌ ಪರವಾಗಿಲ್ಲ. ಆದರೆ ರಕ್ಷಣಾ ಆಟ ಬಿಗುವಾಗಿರಲಿಲ್ಲ. ಕೊನೆ ಕ್ಷಣದಲ್ಲಿ ಮಾಡಿದ ಕೆಲವೊಂದು ತಪ್ಪಿನಿಂದ ಪಂದ್ಯವನ್ನು ಕಳೆದುಕೊಳ್ಳಬೇಕಾಯಿತು ಎಂದು ಅವರು ತಿಳಿಸಿದರು.

ಇರಾನಿನ ಆಟಗಾರರಾದ ಮಿರಾಜ್‌ ಶೇಖ್‌ (11 ಅಂಕ) ಮತ್ತು ಅಬೋಲ್‌ಫಾಜಲ್‌ ಮಗ್ಸೋಡ್ಲು  (8 ಅಂಕ) ಅವರ ಅಮೋಘ ಆಟದಿಂದಾಗಿ ನಾವು ಮುಂಬಾ ತಂಡವನ್ನು 33-32 ಅಂಕಗಳಿಂದ ಸೋಲಿಸುವಂತಾಯಿತು ಎಂದು ಡೆಲ್ಲಿ ತಂಡದ ಕೋಚ್‌ ಡಾ| ರಮೇಶ್‌ ಭೆಂಡಿಗಿರಿ ಹೇಳಿದ್ದಾರೆ. ನಾವು ಅನೂಪ್‌ ಅವರನ್ನು ಕಟ್ಟಿಹಾಕಲು ಯೋಜನೆ ರೂಪಿಸಿದ್ದೆವು. ಅವರನ್ನು ಸಾಧ್ಯ ವಾದಷ್ಟು ಬೇಗ ಔಟ್‌ ಮಾಡಿಸಿದರೆ ಮುಂಬಾ ಮೇಲೆ ಒತ್ತಡ ಹೇರಲು ಸಾಧ್ಯವಾಗುತ್ತದೆ. ಮಿರಾಜ್‌ ಮತ್ತು ಅಬೋಲ್‌ಫಾಜಲ್‌ ಉತ್ತಮವಾಗಿ ರೈಡ್‌ ಮಾಡಿದರು. ನಮ್ಮ ರಕ್ಷಣಾ ಆಟ ಚೆನ್ನಾಗಿತ್ತು ಎಂದವರು ತಿಳಿಸಿದರು.

ಪ್ರೊ ಕಬಡ್ಡಿ  ಲೀಗ್‌: ಇಂದಿನ ಪಂದ್ಯಗಳು
ಬೆಂಗಳೂರು ಬುಲ್ಸ್‌- ಯುಪಿ ಯೋಧಾಸ್‌
ಆರಂಭ: ರಾತ್ರಿ 8.00

ಯು ಮುಂಬಾ- ಗುಜರಾತ್‌
ಆರಂಭ: ರಾತ್ರಿ 9.00

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.