ಈ ಸಲವೂ ಬೆಂಗಳೂರಿಗಿಲ್ಲ ಪ್ರೊ ಕಬಡ್ಡಿ ಆತಿಥ್ಯ


Team Udayavani, Oct 16, 2018, 6:00 AM IST

z-35.jpg

ಬೆಂಗಳೂರು: ಆರನೇ ಆವೃತ್ತಿ ಪ್ರೊ ಕಬಡ್ಡಿ ಕೂಟ ಶುರುವಾಗಿ 16 ಪಂದ್ಯಗಳು ಮುಗಿದಿವೆ. ಇದರ ನಡುವೆ ಬೆಂಗಳೂರು ಬುಲ್ಸ್‌ ತಂಡದ ಅಭಿಮಾನಿಗಳಿಗೊಂದು ಕಹಿ ಸುದ್ದಿ. ಈ ಬಾರಿಯಾದರೂ ಬೆಂಗಳೂರಿನಲ್ಲಿ ಕಬಡ್ಡಿ ಪಂದ್ಯಗಳು ನಡೆಯಬಹುದೆನ್ನುವ ಭರವಸೆ ಸುಳ್ಳಾಗಿದೆ. ಅನಿವಾರ್ಯ ಕಾರಣಗಳಿಂದ ಬೆಂಗಳೂರಿನಲ್ಲಿ ಪಂದ್ಯ ನಡೆಯುವುದಿಲ್ಲವೆಂದು ಸ್ವತಃ ಬೆಂಗಳೂರು ಬುಲ್ಸ್‌ ತಂಡದ ಸಿಇಒ ಉದಯ್‌ ಸಿನ್ಹಾ “ಉದಯವಾಣಿ’ಗೆ ಖಚಿತಪಡಿಸಿದ್ದಾರೆ.

ನ. 23ರಿಂದ ನ. 29ರ ವರೆಗೆ ಬೆಂಗಳೂರು ಚರಣದ ಪಂದ್ಯಗಳು ನಡೆಯಬೇಕಿತ್ತು. ವೇಳಾಪಟ್ಟಿ ಪ್ರಕಟಗೊಂಡಿದ್ದರೂ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುತ್ತದೋ, ಇಲ್ಲವೋ ಎನ್ನುವುದು ಖಾತ್ರಿಯಾಗಿರಲಿಲ್ಲ. ಆದರೀಗ ಸತತ 2ನೇ ವರ್ಷವೂ ಬೆಂಗಳೂರಿನಲ್ಲಿ ಪಂದ್ಯ ನಡೆಯದಿರುವುದು ಖಚಿತವಾಗಿದೆ. ಪ್ರೊ ಕಬಡ್ಡಿ ಆರಂಭಿಕ ಆವೃತ್ತಿಯ ಬೆಂಗಳೂರು ಚರಣದ ಪಂದ್ಯಗಳು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದ್ದವು. ಆದರೆ ಕಳೆದ ಆವೃತ್ತಿಯಲ್ಲಿ ಕಂಠೀರವದಲ್ಲಿ ಪಂದ್ಯ ಆಯೋಜಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿಯೂ ಪಂದ್ಯ ನಡೆಸಲು ಅನುಮತಿ ಸಿಕ್ಕಿಲ್ಲವೆಂದು ಉದಯ್‌ ಸಿನ್ಹಾ ಹೇಳಿದ್ದಾರೆ.

ಅನುಮತಿ ನಿರಾಕರಣೆ
ಕಂಠೀರವದಲ್ಲಿ ಪಂದ್ಯ ನಡೆಸಲು 2 ತಿಂಗಳು ಮುಂಚೆಯೇ ಅನುಮತಿ ಕೇಳಿದ್ದೇವೆ. ಆದರೆ ಯಾವ ಕಾರಣದಿಂದ ಅನುಮತಿ ನಿರಾಕರಿಸಲಾಗುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ನಮ್ಮೆಲ್ಲ ಪ್ರಯತ್ನದ ಬಳಿಕವೂ ರಾಜ್ಯ ಕ್ರೀಡಾ ಇಲಾಖೆ ಪಂದ್ಯ ನಡೆಸಲು ಅನುಮತಿ ನೀಡಿಲ್ಲ. ಇದರಿಂದ ಅಭಿಮಾನಿಗಳಿಗೆ ಬಹಳ ನೋವಾಗಿದೆ. ಜತೆಗೆ ನಮಗೆ ಆರ್ಥಿಕವಾಗಿ ತೀವ್ರ ನಷ್ಟವಾಗಿದೆ ಎಂದು ಸಿನ್ಹಾ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಕಂಠೀರವ ಒಳಾಂಗಣ ಕ್ರೀಡಾಂಗಣ, ಪಂದ್ಯಗಳನ್ನು ನಡೆಸಲು ಎಲ್ಲ ರೀತಿಯಲ್ಲೂ ಸೂಕ್ತವಾಗಿದೆ. ವಾಹನಗಳ ನಿಲುಗಡೆಗೆ ಅವಕಾಶವಿದೆ. ಆ ಸ್ಥಳದಲ್ಲಿ ಟ್ರಾಫಿಕ್‌ ಕೂಡ ಸಮಸ್ಯೆಯಲ್ಲ. ಹೀಗಾಗಿ ಅಭಿಮಾನಿಗಳಿಗೂ ಅನುಕೂಲಕರ. ಇದನ್ನು ಹೊರತುಪಡಿಸಿದರೆ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಬಹುದು. ಆದರೆ ಅಲ್ಲಿ ಟ್ರಾಫಿಕ್‌ ಸಮಸ್ಯೆ ಜಾಸ್ತಿ. ಅಲ್ಲದೇ ವಾಹನ ನಿಲುಗಡೆಗೆ ಸ್ಥಳಾವಕಾಶವಿಲ್ಲ ಎನ್ನುವುದು ಉದಯ್‌ ಸಿನ್ಹಾ ವಿವರಣೆ.

ಚೆನ್ನೈ, ವಿಶಾಖಪಟ್ಟಣ, ಪುಣೆ ನಡುವೆ ಆಯ್ಕೆ
ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಡಿಸಲು ಅನುಮತಿ ಸಿಕ್ಕಿಲ್ಲದಿರು ವುದರಿಂದ ಬೇರೆ ಸ್ಥಳಕ್ಕಾಗಿ ಬೆಂಗಳೂರು ಬುಲ್ಸ್‌ ಹುಡುಕಾಟ ನಡೆಸಿದೆ. ಕಳೆದ ಬಾರಿ ನಾಗ್ಪುರದಲ್ಲಿ ಪಂದ್ಯಗಳನ್ನು ನಡೆಸಲಾಗಿತ್ತು. ಈ ಬಾರಿ ಅಲ್ಲಿ ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಚೆನ್ನೈ, ವಿಶಾಖಪಟ್ಟಣ ಅಥವಾ ಪುಣೆಯ ನಡುವೆ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಳ್ಳಲು ಬುಲ್ಸ್‌ ಚಿಂತನೆ ನಡೆಸಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.