ಗೆಲುವಿನ ಹುಡುಕಾಟದಲ್ಲಿ ಪಂಜಾಬ್‌


Team Udayavani, Apr 23, 2021, 6:45 AM IST

ಗೆಲುವಿನ ಹುಡುಕಾಟದಲ್ಲಿ ಪಂಜಾಬ್‌

ಚೆನ್ನೈ: ಸತತ ಸೋಲಿನಿಂದ ಕಂಗೆಟ್ಟಿರುವ ರಾಹುಲ್‌ ಸಾರಥ್ಯದ ಪಂಜಾಬ್‌ ಕಿಂಗ್ಸ್‌ ಮತ್ತು ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಶುಕ್ರವಾರ ಚೆನ್ನೈಯಲ್ಲಿ ಮಹತ್ವದ ಪಂದ್ಯವನ್ನು ಆಡಲಿವೆ.

ಈಗಾಗಲೇ ಆಡಿದ 4 ಪಂದ್ಯಗಳಲ್ಲಿ ಆರಂಭಿಕ ಗೆಲುವಿನ ಬಳಿಕ ಹ್ಯಾಟ್ರಿಕ್‌ ಸೋಲಿಗೆ ತುತ್ತಾಗಿರುವ ಪಂಜಾಬ್‌ ಗೆಲುವಿನ ಹಳಿ ಏರಲೇಬೇಕಾದ ಒತ್ತಡದಲ್ಲಿದೆ. ಇನ್ನೊಂದೆಡೆ ಮುಂಬೈ ಕಳೆದ ಪಂದ್ಯದಲ್ಲಿ ಡೆಲ್ಲಿಗೆ ಶರಣಾಗಿದ್ದು, ಮರಳಿ ಗೆಲುವಿನ ಮುಖ ಕಾಣಲು ಗರಿಷ್ಠ ಪ್ರಯತ್ನ ಮಾಡಬೇಕಿದೆ. ಈ ಎಲ್ಲ ಸೋಲುಗಳಿಗೆ ಒಂದೇ ಕಾರಣ, ಅದು ತಂಡಗಳ ಬ್ಯಾಟಿಂಗ್‌ ವೈಫ‌ಲ್ಯ.

ಸಂಘಟಿತ ಪ್ರದರ್ಶನ ಅಗತ್ಯ :

ರಾಜಸ್ಥಾನ್‌ ವಿರುದ್ಧ ಕೇವಲ 4 ರನ್ನಿನಿಂದ ಗೆದ್ದದ್ದಷ್ಟೇ ಪಂಜಾಬ್‌ ಸಾಧನೆ. ಬಳಿಕ ಚೆನ್ನೈ ವಿರುದ್ಧ 106, ಹೈದರಾಬಾದ್‌ ವಿರುದ್ಧ 120 ರನ್‌ ಮಾಡಿ ತೀವ್ರ ಬ್ಯಾಟಿಂಗ್‌ ಬರಗಾಲ ಅನುಭವಿಸಿತ್ತು. ಎಲ್ಲರೆದುರೂ ಎಡವುತ್ತ ಬಂದ ಸನ್‌ರೈಸರ್ ಬುಧವಾರ ಪಂಜಾಬ್‌ಗ ಸೋಲುಣಿಸುವ ಮೂಲಕವೇ ಗೆಲುವಿನ ಖಾತೆ ತೆರೆದುದನ್ನು ಮರೆಯುವಂತಿಲ್ಲ.

ಈ ನಡುವೆ ಡೆಲ್ಲಿ ವಿರುದ್ಧ 195 ರನ್‌ ಬಾರಿಸಿಯೂ ಇದನ್ನು ಉಳಿಸಿಕೊಳ್ಳಲು ಪಂಜಾಬ್‌ಗ ಸಾಧ್ಯವಾಗಿರಲಿಲ್ಲ. ಮುಂಬೈ ವಿರುದ್ಧ ಈ ಎಲ್ಲ ಸಂಕಟಗಳನ್ನು ನಿಭಾಯಿಸಿ ನಿಲ್ಲಬೇಕಾದ ಒತ್ತಡ ರಾಹುಲ್‌ ಬಳಗದ ಮೇಲಿದೆ. ಮತ್ತೆ ಸೋತರೆ ತಂಡದ ಮುಂದಿನ ಹಾದಿ ದುರ್ಗಮಗೊಳ್ಳುವುದರಲ್ಲಿ ಅನುಮಾನವಿಲ್ಲ.

ಹಾರ್ದಿಕ್‌ ಪಾಂಡ್ಯ ವೈಫ‌ಲ್ಯ :

ಹಾರ್ದಿಕ್‌ ಪಾಂಡ್ಯ ಅವರ ಸತತ ವೈಫ‌ಲ್ಯವೊಂದೇ ಮುಂಬೈ ತಂಡದ ಪ್ರಮುಖ ಸಮಸ್ಯೆ. ಉಳಿದಂತೆ ಬ್ಯಾಟಿಂಗ್‌-ಬೌಲಿಂಗ್‌ ವಿಭಾಗದಲ್ಲಿ ಮುಂಬೈ ಪಂಜಾಬ್‌ಗಿಂತ ಹೆಚ್ಚು ವೈವಿಧ್ಯಮಯವಾಗಿದೆ. ಬೌಲ್ಟ್, ಬುಮ್ರಾ ಡೆತ್‌ ಓವರ್‌ಗಳ ಮೂಲಕ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.