![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಮಲೇಷ್ಯಾ ಬ್ಯಾಡ್ಮಿಂಟನ್: ಸಿಂಧು, ಅಶ್ಮಿತಾ ಕ್ವಾರ್ಟರ್ಫೈನಲಿಗೆ
Team Udayavani, May 23, 2024, 9:50 PM IST
![28](https://www.udayavani.com/wp-content/uploads/2024/05/28-3-620x372.jpg)
ಕೌಲಾಲಂಪುರ: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಸೋಲಿನ ದವಡೆಯಿಂದ ಪಾರಾಗಿ ಬಂದು ಮಲೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್ ಕೂಟದ ಕ್ವಾರ್ಟರ್ ಫೈನಲ್ ಹಂತಕ್ಕೇರಿದ್ದಾರೆ.
ಇದೇ ವೇಳೆ ಅದ್ಭುತ ಆಟದ ಪ್ರದರ್ಶನ ನೀಡಿದ ಅಶ್ಮಿತಾ ಚಲಿಹಾ ಅವರು ಮೂರನೇ ಶ್ರೇಯಾಂಕದ ಅಮೆರಿಕದ ಬೈವೆನ್ ಝಾಂಗ್ ಅವರನ್ನು ಅಚ್ಚರಿಯ ರೀತಿಯಲ್ಲಿ ಸೋಲಿಸಿ ಕ್ವಾರ್ಟರ್ಫೈನಲ್ಗೇರಿದ್ದಾರೆ. ವಿಶ್ವದ 15ನೇ ರ್ಯಾಂಕಿನ ಸಿಂಧು ಕೊರಿಯದ ಸಿಮ್ ಯು ಜಿನ್ ಅವರನ್ನು 21-13, 12-21, 21-14 ಗೇಮ್ಗಳಿಂದ ಉರುಳಿಸಿ ಮುನ್ನಡೆದರು.
ಅವರು ವಿಶ್ವದ 34ನೇ ರ್ಯಾಂಕಿನ ಸಿಮ್ ಅವರನ್ನು ಮೂರನೇ ಬಾರಿ ಸೋಲಿಸಿದ ಸಾಧನೆ ಮಾಡಿದರು. ಐದನೇ ಶ್ರೇಯಾಂಕದ ಸಿಂಧು ಮುಂದಿನ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಹಾನ್ ಯುಯಿ ಅವರ ಸವಾಲನ್ನು ಎದುರಿಸಲಿದ್ದಾರೆ.
ಇದು ಸಿಂಧು ಪಾಲಿಗೆ ಸೇಡಿನ ಪಂದ್ಯವಾಗಿದೆ. ಸಿಂಧು ಮತ್ತು ಹಾನ್ ಕಳೆದ ತಿಂಗಳು ನಡೆದ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು ಹಾನ್ ಜಯ ಸಾಧಿಸಿದ್ದರು.
2022ರಲ್ಲಿ ಈ ಹಿಂದೆ ಪ್ರಶಸ್ತಿ (ಸಿಂಗಾಪುರ ಓಪನ್) ಜಯಿಸಿದ್ದ ಸಿಂಧು ಅವರು ಹಾನ್ ಜತೆ ಇಷ್ಟರವರೆಗೆ ಆರು ಬಾರಿ ಮುಖಾಮುಖಿಯಾಗಿದ್ದು 5 ಗೆಲುವು ಒಂದು ಸೋಲಿನ ದಾಖಲೆ ಹೊಂದಿದ್ದಾರೆ.
ಅಮೋಘ ಜಯ:
ಇದೇ ವೇಳೆ 24ರ ಹರೆಯದ ಅಸ್ಮಿತಾ ಮೂರನೇ ಶ್ರೇಯಾಂಕದ ಝಾಂಗ್ ಅವರನ್ನು 21-19, 16-21, 21-12 ಗೇಮ್ಗಳಿಂದ ಉರುಳಿಸಿ ಕ್ವಾರ್ಟರ್ಫೈನಲ್ ಹಂತಕ್ಕೇರಿದರು. ಸೂಪರ್ 500 ಕೂಟದಲ್ಲಿ ಅವರು ಎರಡನೇ ಬಾರಿ ಕ್ವಾರ್ಟರ್ಫೈನಲ್ ತಲುಪಿದ ಸಾಧನೆ ಮಾಡಿದ್ದಾರೆ. 2022ರ ಇಂಡಿಯಾ ಓಪನ್ನಲ್ಲಿ ಅವರು ಅಂತಿಮ ಎಂಟರ ಸುತ್ತಿಗೇರಿದ್ದರು. ಮುಂದಿನ ಸುತ್ತಿನಲ್ಲಿ ಅವರು ಆರನೇ ಶ್ರೇಯಾಂಕದ ಚೀನದ ಝಾಂಗ್ ಯಿ ಮಾನ್ ಅವರನ್ನು ಎದುರಿಸಲಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.