ಪ್ರಶಸ್ತಿ ನಿರೀಕ್ಷೆಯಲ್ಲಿ ಸಿಂಧು, ಕೆ. ಶ್ರೀಕಾಂತ್‌


Team Udayavani, Mar 14, 2018, 7:30 AM IST

17.jpg

ಬರ್ಮಿಂಗಂ: ಭಾರತದ ಭರವಸೆಯ ಶಟ್ಲರ್‌ಗಳಾದ ಪಿವಿ ಸಿಂಧು ಮತ್ತು ಕಿದಂಬಿ ಶ್ರೀಕಾಂತ್‌ ಅವರು ಬುಧವಾರದಿಂದ ಆರಂಭವಾಗುವ ಪ್ರತಿಷ್ಠಿತ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ ಗೆಲುವಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇವರಿಬ್ಬರ ಕೋಚ್‌ ಆಗಿರುವ ಪಿ. ಗೋಪಿಚಂದ್‌ 17 ವರ್ಷಗಳ ಹಿಂದೆ ಈ ಪ್ರಶಸ್ತಿಯನ್ನು ಗೆದ್ದಿದ್ದರು.

ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಶಿಪ್‌ ಪ್ರತಿಷ್ಠಿತ ಕೂಟಗಳಲ್ಲಿ ಒಂದಾ ಗಿದೆ. ಈ ಪ್ರಶಸ್ತಿ ಗೆಲ್ಲುವುದು ಪ್ರತಿಯೊಬ್ಬ ಶಟ್ಲರ್‌ಗಳ ಕಟ್ಟಕಡೆಯ ಗುರಿಯಾಗಿದೆ. ಭಾರತದ ಪ್ರಕಾಶ್‌ ಪಡುಕೋಣೆ (1980) ಮತ್ತು  ಪಿ. ಗೋಪಿಚಂದ್‌ (2001) ಮಾತ್ರ ಈ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ.

ಉತ್ತಮ ಫಾರ್ಮ್ನಲ್ಲಿರುವ ಸಿಂಧು ಮತ್ತು ಶ್ರೀಕಾಂತ್‌ ಅವರಿಗೆ ಮೊದಲ ಸುತ್ತಿನಲ್ಲಿ ಸುಲಭ ಎದುರಾಳಿ ಸಿಕ್ಕಿದ್ದಾರೆ. ಆದರೆ ಮಾಜಿ ಫೈನಲಿಸ್ಟ್‌ ಸೈನಾ ನೆಹ್ವಾಲ್‌ ಮೊದಲ ಸುತ್ತಿನಲ್ಲಿ ಕಠಿನ ಎದುರಾಳಿಯನ್ನು ಎದುರಿಸಬೇಕಾಗಿದೆ. ಆರಂಭಿಕ ಪಂದ್ಯದಲ್ಲಿ ಸೈನಾ ಅವರು ವಿಶ್ವದ ನಂಬರ್‌ ವನ್‌ ಮತ್ತು ಹಾಲಿ ಚಾಂಪಿಯನ್‌ ಚೈನೀಸ್‌ ತೈಪೆಯ ತೈ ಟಿಜು ಯಿಂಗ್‌ ಅವರ ಸವಾಲನ್ನು ಎದುರಿಸಬೇಕಾಗಿದೆ.

ಸೈನಾ ವಿರುದ್ಧ ಯಿಂಗ್‌ ಉತ್ತಮ ದಾಖಲೆ ಹೊಂದಿದ್ದಾರೆ. ಪರಸ್ಪರ 14 ಬಾರಿ ಮುಖಾಮುಖೀಯಲ್ಲಿ ಯಿಂಗ್‌ 9 ಬಾರಿ ಗೆಲುವು ಸಾಧಿಸಿದ್ದಾರೆ. ಸೈನಾ ಕಳೆದ ಏಳು ಪಂದ್ಯಗಳಲ್ಲಿ ಅವರೆದುರು ಸೋತಿ ದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ಇಂಡೋನೇಶ್ಯ ಮಾಸ್ಟರ್ ಕೂಟದ ಫೈನಲ್‌ನಲ್ಲಿ ಸೈನಾ ಅವರು ಯಿಂಗ್‌ಗೆ ಶರಣಾಗಿದ್ದರು. 

ನಾಲ್ಕನೇ ಶ್ರೇಯಾಂಕದ ಸಿಂಧು ಮೊದಲ ಸುತ್ತಿನಲ್ಲಿ ಥಾçಲಂಡ್‌ನ‌ ಪೋರ್ನ್ಪವೀ ಚೊಚುವಾಂಗ್‌ ಅವರನ್ನು ಎದುರಿಸಲಿದ್ದಾರೆ. ಇಲ್ಲಿ ಗೆಲುವು ದಾಖಲಿಸಿದರೆ ದ್ವಿತೀಯ ಸುತ್ತಿನಲ್ಲಿ ಬೈವೆನ್‌ ಝಾಂಗ್‌ ಅವರ ಸವಾಲಿಗೆ ಉತ್ತರಿಸಬೇಕಾಗಿದೆ. ಇದೇ ವೇಳೆ ಶ್ರೀಕಾಂತ್‌ ಮೊದಲ ಸುತ್ತಿನಲ್ಲಿ ಫ್ರಾನ್ಸ್‌ನ ಬ್ರೈಸ್‌ ಲೆವೆರ್‌ಡೆಜ್‌ ಅವರೊಂದಿಗೆ ಹೋರಾಡಿ ತನ್ನ ಅಭಿಯಾನ ಆರಂಭಿಸಲಿದ್ದಾರೆ.

ವಿಶ್ವದ ಮೂರನೇ ರ್‍ಯಾಂಕಿನ ಶ್ರೀಕಾಂತ್‌ 2017ರಲ್ಲಿ ಪ್ರಚಂಡ ಫಾರ್ಮ್ನಲ್ಲಿದ್ದರು. ನಾಲ್ಕು ಸೂಪರ್‌ ಸೀರೀಸ್‌ ಕೂಟದ ಪ್ರಶಸ್ತಿ ಗೆದ್ದಿರುವ ಅವರು ವಿಶ್ವದ ನಂಬರ್‌ ವನ್‌ ವಿಕ್ಟರ್‌ ಆ್ಯಕ್ಸೆಲ್ಸೆನ್‌ ಅವರ ಅನುಪಸ್ಥಿತಿಯಲ್ಲಿ ಪ್ರಶಸ್ತಿ ಗೆಲ್ಲುವ ಫೇವರಿಟ್‌ ಆಟಗಾರರಾಗಿದ್ದಾರೆ. ಶ್ರೀಕಾಂತ್‌ ಕಳೆದ ವರ್ಷ ಇಲ್ಲಿ ಮೊದಲ ಸುತ್ತಿನಲ್ಲಿ ಸೋತು ಹೊರಬಿದ್ದಿದ್ದರು.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.