ಹಾಂಕಾಂಗ್‌ ವಿರುದ್ಧ ಭಾರತಕ್ಕೆ ಗೆಲುವು


Team Udayavani, Feb 7, 2018, 7:50 AM IST

06-14.jpg

ಅಲೋರ್‌ ಸೆಟರ್‌ (ಮಲೇಶ್ಯ): ಒಲಿಂಪಿಕ್‌ ಬೆಳ್ಳಿ ವಿಜೇತೆ ಪಿವಿ ಸಿಂಧು ನೇತೃತ್ವದ ಭಾರತೀಯ ವನಿತಾ ತಂಡವು ಏಶ್ಯ ಬ್ಯಾಡ್ಮಿಂಟನ್‌ ತಂಡ ಚಾಂಪಿಯನ್‌ಶಿಪ್‌ನಲ್ಲಿ ಶುಭಾರಂಭಗೈದಿದೆ. 

ತೊಡೆಸಂದು ಗಾಯದಿಂದಾಗಿ ಸೈನಾ ನೆಹ್ವಾಲ್‌ ಈ ಕೂಟದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಸಿಂಧು ಮುಂಚೂಣಿಯಲ್ಲಿ ನಿಂತು ಭಾರತಕ್ಕೆ ಆಸರೆಯಾಗಿದ್ದಾರೆ. ಅವರ ಉತ್ತಮ ಆಟದಿಂದಾಗಿ ಭಾರತವು ಹಾಂಕಾಂಗ್‌ ತಂಡವನ್ನು 3-2 ಅಂತರದಿಂದ ಸೋಲಿಸಿ ಮುನ್ನಡೆದಿದೆ. ಸಿಂಗಲ್ಸ್‌ ಪಂದ್ಯ ಗೆದ್ದ ಸಿಂಧು ಆಬಳಿಕ ನಡೆದ ಎರಡನೇ ಡಬಲ್ಸ್‌ ಪಂದ್ಯದಲ್ಲಿ ಎನ್‌. ಸಿಕ್ಕಿ ರೆಡ್ಡಿ ಜತೆಗೂಡಿ ಗೆಲುವು ಸಾಧಿಸುವ ಮೂಲಕ ಭಾರತ ಗೆಲುವಿನ ಸಂಭ್ರಮಪಡುವಂತಾಯಿತು. 

ಕಳೆದ ರವಿವಾರ ನಡೆದ ಇಂಡಿಯಾ ಓಪನ್‌ನ ಫೈನಲ್‌ನಲ್ಲಿ ಸೋತು ಆಘಾತಕ್ಕೆ ಒಳಗಾಗಿದ್ದರೂ ಸಿಂಧು ಇಲ್ಲಿ ಹೊಸ ಉತ್ಸಾಹದಿಂದಲೇ ಆಡಿ ಮೊದಲ ಸಿಂಗಲ್ಸ್‌ನಲ್ಲಿ ಹಾಂಕಾಂಗ್‌ನ ಯಿಪ್‌ ಪುಯಿ ಯಿನ್‌ ಅವರನ್ನು 21-12, 21-18 ಗೇಮ್‌ಗಳಿಂದ ಸೋಲಿಸಲು ಯಶಸ್ವಿಯಾದರು. 

ಅಶ್ವಿ‌ನಿ ಪೊನ್ನಪ್ಪ ಮತ್ತು ಪ್ರಜಕ್ತ ಸಾವಂತ್‌ ಅವರು ಮೊದಲ ಡಬಲ್ಸ್‌ ಪಂದ್ಯದಲ್ಲಿ ವಿಂಗ್‌ ಯಂಗ್‌ ಮತ್ತು ಯೆಯುಂಗ್‌ ಎನ್‌ಗಾ ಟಿಂಗ್‌ ಅವರೆದುರು ಪ್ರಬಲ ಹೋರಾಟ ನಡೆಸಿದ್ದರೂ ಅಂತಿಮವಾಗಿ 22-20, 20-22, 10-21 ಗೇಮ್‌ಗಳಿಂದ ಶರಣಾದರು. ಯುವ ಆಟಗಾರ್ತಿ ಶ್ರೀಕೃಷ್ಣ ಪ್ರಿಯಾಕುದರವಲ್ಲಿ ಅವರು ಚೆಯುಂಗ್‌ ಯಿಂಗ್‌ ಮೆಯಿ ಅವರ ವಿರುದ್ಧ ತೀವ್ರ ಹೋರಾಟ ನಡೆಸಿದರೂ ಅಂತಿಮವಾಗಿ 19-21, 21-18, 20-22 ಗೇಮ್‌ಗಳಿಂದ ಸೋತರು. ಇದರಿಂದ ಮೊದಲ ಮೂರು ಪಂದ್ಯಗಳ ಬಳಿಕ ಭಾರತ 1-2 ಹಿನ್ನಡೆಯಲ್ಲಿತ್ತು.

ಆಬಳಿಕ ಸಿಂಧು ಅವರು ಡಬಲ್ಸ್‌ನಲ್ಲಿ ಸಿಕ್ಕಿ ರೆಡ್ಡಿ ಜತೆಗೂಡಿ ಮೂರು ಗೇಮ್‌ಗಳಲ್ಲಿ ಜಯ ಸಾಧಿಸಿದ್ದರಿಂದ ಹೋರಾಟ 2-2 ಸಮಬಲಕ್ಕೆ ಬಂತು. ನಿರ್ಣಾಯಕ ಪಂದ್ಯದಲ್ಲಿ ರುತ್ವಿಕಾ ಶಿವಾನಿ ಗಾಡೆ ಅವರು ಯೆಯುಗ್‌ ಸಮ್‌ ಯೀ ಅವರನ್ನು 16-21, 21-16, 21-13 ಗೇಮ್‌ಗಳಿಂದ ಸೋಲಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು.

ಭಾರತ ಗುರುವಾರ ನಡೆಯುವ ಪಂದ್ಯದಲ್ಲಿ ಜಪಾನ್‌ ತಂಡವನ್ನು ಎದುರಿಸಲಿದೆ. ವಿಶ್ವದ ಎರಡನೇ ರ್‍ಯಾಂಕಿನ ಅಕಾನೆ ಯಮಗುಚಿ ಮತ್ತು ಹಾಲಿ ವಿಶ್ವ ಚಾಂಪಿಯನ್‌ ನೊಝೋಮಿ ಒಕುಹಾರ ಅವರನ್ನು ಒಳಗೊಂಡ ಜಪಾನ್‌ ಬಲಿಷ್ಠವಾಗಿದೆ. ಈ ಕೂಟದಲ್ಲಿ ಸೆಮಿಫೈನಲ್‌ ತಲುಪಿದ ತಂಡಗಳು ಉಬೆರ್‌ ಕಪ್‌ನಲ್ಲಿ ಆಡಲು ಅರ್ಹತೆ ಗಳಿಸಲಿವೆ.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.